AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪಂಚೆ ತೊಟ್ಟು ದೇಸಿ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ

ಲುಂಗಿ ನಮ್ಮ ಸಾಂಪ್ರದಾಯಿಕ ಉಡುಗೆಗಳಲ್ಲಿ ಒಂದು. ಇಂದಿಗೂ ಗ್ರಾಮೀಣ ಭಾಗದಲ್ಲಿನ ಪುರುಷರು ಮನೆಗಳಲ್ಲಿ ಅಥವಾ ಊರಿನಲ್ಲಿ ಸುತ್ತಾಡುವಾಗ ಲುಂಗಿಯನ್ನೇ ಸುತ್ತಿಕೊಳ್ಳುತ್ತಾರೆ. ಅದೇ ರೀತಿ ಇದೀಗ ಬ್ರಿಟಿಷ್ ಬಾಣಸಿಗರೊಬ್ಬರು ಪಂಚೆ ತೊಟ್ಟು ದಕ್ಷಿಣ ಭಾರತೀಯ ಶೈಲಿಯ ಅಡುಗೆ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.

Viral: ಪಂಚೆ ತೊಟ್ಟು ದೇಸಿ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ
ಮಾಲಾಶ್ರೀ ಅಂಚನ್​
| Edited By: |

Updated on: Sep 22, 2024 | 4:33 PM

Share

ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ಹೊಸ ಹೊಸ ಅವತಾರದಲ್ಲಿ ಅಡುಗೆಗಳನ್ನು ಮಾಡುವ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದಾರೆ. ಇದೀಗ ಅವರು ಸ್ಟೈಲ್ ಆಗಿ ಪಂಚೆ ತೊಟ್ಟು ದಕ್ಷಿಣ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು, ಈ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

‘ಹೆಲ್ಸ್ ಕಿಚನ್’ ಮತ್ತು ‘ಮಾಸ್ಟರ್ ಚೆಫ್’ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕರಾದ ಗಾರ್ಡನ್ ರಾಮ್ಸೆ. ತಮ್ಮ ವಿನೂತನ ಅಡುಗೆಗಳಿಂದಲೇ ಗಮನ ಸೆಳೆದ ಇವರು ಇದೀಗ ದೇಸಿ ಸ್ಟೈಲ್ ಪಂಚೆ ತೊಟ್ಟು ಭಾರತೀಯ ಶೈಲಿಯ ಅಡುಗೆ ಮಾಡಿದ್ದಾರೆ. ಈ ಕುರಿತ ವಿಡಿಯೋವನ್ನು historyinmemes ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ಪಂಚೆ ತೊಟ್ಟು ದಕ್ಷಿಣ ಭಾರತೀಯ ಶೈಲಿಯ ಅಡುಗೆ ಮಾಡುವ ದೃಶ್ಯ ಕಾಣಬಹುದು.

ಇದನ್ನೂ ಓದಿ: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ

ಸೆಪ್ಟೆಂಬರ್ 20 ರಂದು ಹಂಚಿಕೊಳ್ಳಲಾದ ಈ ವಿಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಭಾರತೀಯ ಸಂಸ್ಕೃತಿ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಗಾರ್ಡನ್ ರಾಮ್ಸೆ ಅವರು ವಿಭಿನ್ನ ಸಂಸ್ಕೃತಿಗಳನ್ನು ಸ್ವೀಕರಿಸುವುದನ್ನು ನೋಡುವುದೇ ಒಂದು ಚಂದ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!