AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮದುವೆ ಸಮಾರಂಭದಲ್ಲಿ ಸೀತಾ ಸ್ವಯಂವರ ಕಥೆಯನ್ನು ಮರು ಸೃಷ್ಟಿಸಿದ ಜೋಡಿ; ವಿಡಿಯೋ ವೈರಲ್

ಮದುವೆ ಸಮಾರಂಭಗಳಲ್ಲಿ ವರ ಕುದುರೆ ಏರಿ ಬರುವಂತಹದ್ದು, ವಧು ಬುಲೆಟ್‌ ಬೈಕ್‌ ಏರಿ ಬರುವಂತಹ ದೃಶ್ಯಗಳನ್ನು ನೋಡಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಂದು ವಿಶೇಷ ಮದುವೆ ನಡೆದಿದ್ದು, ಈ ವಿವಾಹ ಕಾರ್ಯಕ್ರಮದಲ್ಲಿ ವಧು-ವರ ಸೀತಾ ಸ್ವಯಂವರದ ಕಥೆಯನ್ನು ಮರುಸೃಷ್ಟಿ ಮಾಡಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಆಧುನಿಕ ಯುಗದ ಈ ಸ್ವಯಂವರದ ದೃಶ್ಯಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಾಲಾಶ್ರೀ ಅಂಚನ್​
| Updated By: Digi Tech Desk|

Updated on:Dec 11, 2024 | 2:20 PM

Share

ಜನಕ ರಾಜನ ಪುತ್ರಿ ಸೀತೆಯ ಸ್ವಯಂವರದಲ್ಲಿ ಯಾರು ಶಿವ ಧನಸ್ಸನ್ನು ಎತ್ತುತ್ತಾರೋ ಅವರಿಗೆ ಸೀತೆಯನ್ನು ಕೊಟ್ಟು ವಿವಾಹ ಮಾಡುವುದಾಗಿ ಜನಕ ರಾಜ ಶರತ್ತನ್ನು ವಿಧಿಸಿದ್ದರು. ಈ ಸ್ವಯಂವರದಲ್ಲಿ ಹಲವಾರು ರಾಜ್ಯದ ರಾಜರುಗಳು, ರಾಜ ಕುಮಾರರು, ಚಕ್ರವರ್ತಿಗಳು ಭಾಗವಹಿಸಿದ್ದರು. ಆದರೆ ಇವರ್ಯಾರಿಗೂ ಶಿವ ಧನಸ್ಸನ್ನು ಎತ್ತಲು ಬಿಡಿ ಅಲ್ಲಾಡಿಸಲು ಕೂಡಾ ಸಾಧ್ಯವಾಗಲಿಲ್ಲ. ಕೊನೆಗೆ ಶ್ರೀರಾಮನು ಶಿವ ಧನಸ್ಸನ್ನು ಎತ್ತಿ ಬಿಲ್ಲನ್ನು ಮುರಿದನು. ಹೀಗೆ ಷರತ್ತಿನಲ್ಲಿ ಗೆದ್ದ ಶ್ರೀರಾಮನಿಗೆ ಸೀತೆಯನ್ನು ಮದುವೆ ಮಾಡಿ ಕೊಟ್ಟ ʼಸೀತಾ ಸ್ವಯಂವರʼದ ಕಥೆಯನ್ನು ನೀವೆಲ್ಲರೂ ಕೇಳಿರುತ್ತೀರಿ ಅಲ್ವಾ. ಇಲ್ಲೊಂದು ಮದುವೆ ಕಾರ್ಯಕ್ರಮದಲ್ಲಿಯೂ ಸೀತಾ ಸ್ವಯಂವರದ ಈ ಕಥೆಯನ್ನು ಮರು ಸೃಷ್ಟಿ ಮಾಡಿದ್ದು, ಈ ಸುಂದರ ದೃಶ್ಯ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ವರ ಕುದುರೆ ಏರಿ ಮದುವೆ ಮನೆಗೆ ಆಗಮಿಸುವಂತಹ ಅಥವಾ ವಧು ಬುಲೆಟ್‌ ಏರಿ ಎಂಟ್ರಿ ಕೊಡುವಂತಹ ದೃಶ್ಯಗಳನ್ನು ನೋಡಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಂದು ವಿಶಿಷ್ಟ ಮದುವೆ ನಡೆದಿದ್ದು, ಸೀತಾ ಸ್ವಯಂವರ ಥೀಮ್‌ನಲ್ಲಿ ವಧುವನ್ನು ವೇದಿಕೆಗೆ ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಹೌದು ಈ ಮದುವೆಯಲ್ಲಿ ಸೀತಾ ಸ್ವಯಂವರದ ಕಥೆಯನ್ನು ಮರು ಸೃಷ್ಟಿ ಮಾಡಿದ್ದು, ಈ ದೃಶ್ಯ ಸಖತ್‌ ವೈರಲ್‌ ಆಗುತ್ತಿದೆ.

Commentsshalla ಹೆಸರಿನ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಕೆಲ ಪುರುಷರು ಬಿಲ್ಲನ್ನು ಎತ್ತಲು ಪ್ರಯತ್ನಿಸುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಕೊನೆಗೆ ವರ ಶ್ರೀರಾಮನಂತೆ ಬಿಲ್ಲನ್ನು ಎತ್ತಿ ಬಾಣವನ್ನು ಬಿಟ್ಟು ವಧುವನ್ನು ವೇದಿಗೆಕೆ ಅದ್ದೂರಿಯಾಗಿ ಸ್ವಾಗತಿಸಿದ್ದಾನೆ.

ಇದನ್ನೂ ಓದಿ: ತಾಯಿ ರೀಲ್ಸ್‌ ಮಾಡುವುದರಲ್ಲಿ ಬ್ಯುಸಿಯಾಗಿದ್ದ ವೇಳೆ ರಸ್ತೆಯತ್ತ ಓಡಿ ಹೋದ ಕಂದಮ್ಮ; ಮುಂದೇನಾಯ್ತು ನೋಡಿ…

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2.6 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಕಲಿಯುಗದಲ್ಲಿ ಸೀತಾರಾಮರಂತಹ ಪವಿತ್ರ ಪ್ರೇಮ ಎಲ್ಲೂ ಇಲ್ಲ, ಹಾಗಾಗಿ ಇದನ್ನೆಲ್ಲಾ ಮಾಡುವ ಅವಶ್ಯಕತೆ ಇಲ್ಲʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಯಾವಾಗ ವನವಾಸಕ್ಕೆ ಹೋಗ್ತಿರಾ?ʼ ಎಂದು ಕಾಮೆಂಟ್‌ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಈ ದೃಶ್ಯ ತುಂಬಾನೆ ಮುದ್ದಾಗಿದೆʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:18 pm, Tue, 10 December 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ