AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video :10 ಲಕ್ಷ ರೂ ವರದಕ್ಷಿಣೆಗೆ ಬೇಡಿಕೆಯಿಟ್ಟ ವರನ ಕುಟುಂಬ: ಹಿಗ್ಗಾಮುಗ್ಗ ಥಳಿಸಿದ ವಧುವಿನ ತಂದೆ

ಮದುವೆ ಮನೆಯಲ್ಲಿ ಡೌರಿ ಕೇಳಿದ್ದಕ್ಕಾಗಿ ವಧುವಿನ ಕಡೆಯವರು ವರ ಮತ್ತು ಆತನ ತಂದೆಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ವೈರಲ್​ ಆಗಿದೆ

Viral Video :10 ಲಕ್ಷ ರೂ ವರದಕ್ಷಿಣೆಗೆ ಬೇಡಿಕೆಯಿಟ್ಟ ವರನ ಕುಟುಂಬ: ಹಿಗ್ಗಾಮುಗ್ಗ ಥಳಿಸಿದ ವಧುವಿನ ತಂದೆ
TV9 Web
| Edited By: |

Updated on: Dec 21, 2021 | 3:31 PM

Share

ಸಾಮಾಜಿಕ ಜಾಲತಾಣಗಳು ಪಾಸಿಟಿವ್​ ಮತ್ತು ನೆಗೆಟಿವ್ ಎರಡೂ ರೀತಿಯ ವೀಡಿಯೋಗಳಿಗೆ ತಾಣವಾಗಿದೆ. ಉತ್ತರಪ್ರದೇಶದಲ್ಲಿ ಹಲವು ನಗೆಟಿವ್​ ಘಟನೆಗಳು ಆಗಾಗ ವೈರಲ್​ ಆಗುತ್ತಲೇ ಇರುತ್ತವೆ. ಇದೀಗ ಮದುವೆ ಮನೆಯಲ್ಲಿ ಡೌರಿ ಕೇಳಿದ್ದಕ್ಕಾಗಿ ವಧುವಿನ ಕಡೆಯವರು ವರ ಮತ್ತು ಆತನ ತಂದೆಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ವೈರಲ್​ ಆಗಿದೆ. ವರದಿಯ ಪ್ರಕಾರ ಆಗ್ರಾ ನಿವಾಸಿ ಮುಜಾಮಿಲ್​ ಎನ್ನುವ ವ್ಯಕ್ತಿ ಹಾಗೂ ಆತನ ತಂದೆ ಮೊಹಮ್ಮದ್​ ಹುಸೇನ್ ಮದುವೆಯ ಹಿಂದಿನ ದಿನ ರಾತ್ರಿ ವಧುವಿನ ಕಡೆಯವರನ್ನು 10 ಲಕ್ಷ ರೂ ವರದಕ್ಷಿಣೆ ನೀಡುವಂತೆ ಕೇಳಿದ್ದಾರೆ. ಇಲ್ಲವಾದರೆ ಮದುವೆಯನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಕೋಪಗೊಂಡ ವಧುವಿನ ಕಡೆಯವರು ವರ ಮತ್ತು ಆತನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಘಟನೆ ಡಿಸೆಂಬರ್ 12ರಂದು ನಡೆದಿದ್ದು, ಇದೀಗ ವೈರಲ್​ ಆಗಿದೆ. ಡೈಲಿ ಪಾಕಿಸ್ತಾನ ಸುದ್ದಿ ಸಂಸ್ಥೆಯು ಈ ಕುರಿತು ವರದಿ ಮಾಡಿದೆ. ಘಟನೆಯ ಬಗ್ಗೆ ವಧುವಿನ ತಂದೆ, ಈಗಾಗಲೇ ನಾವು ವರನ ಕಡೆಯವರಿಗೆ ವಜ್ರದ ಉಂಗುರ ಹಾಗೂ 3 ಲಕ್ಷ ರೂಗಳನ್ನು ನೀಡಿದ್ದೇವೆ. ಆದರೂ ಅವರು ಮತ್ತೆ 10 ಲಕ್ಷಕೇಳುತ್ತಿದ್ದಾರೆ. ಕೊಡುವುದಿಲ್ಲ ಎಂದರೆ ಮದುವೆಯನ್ನು ನಿಲ್ಲಿಸುವುದಾಗ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಅವರ ಮೇಲೆ ಹಲ್ಲೆ ನಡೆಸುವಂತಾಯಿತು ಎಂದು ಹೇಳಿಕೆ ನೀಡಿದ್ದಾರೆ.

ಇದರ ವೀಡಿಯೋವನ್ನು ಮೊದಲು ವೈರಲ್​ ವಿಡಿಯೋ ಎನ್ನುವ ಟ್ವಿಟರ್​ ಖಾತೆ ಹಂಚಿಕೊಂಡಿತ್ತು. ಬಳಿಕ ಹಲವು ಪುಟಗಳು ವೀಡಿಯೋ ಹಂಚಿಕೊಂಡಿದ್ದು ವೀಡಿಯೋ ವೈರಲ್​ ಆಗಿದೆ.

Follow Us
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ