AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video :10 ಲಕ್ಷ ರೂ ವರದಕ್ಷಿಣೆಗೆ ಬೇಡಿಕೆಯಿಟ್ಟ ವರನ ಕುಟುಂಬ: ಹಿಗ್ಗಾಮುಗ್ಗ ಥಳಿಸಿದ ವಧುವಿನ ತಂದೆ

ಮದುವೆ ಮನೆಯಲ್ಲಿ ಡೌರಿ ಕೇಳಿದ್ದಕ್ಕಾಗಿ ವಧುವಿನ ಕಡೆಯವರು ವರ ಮತ್ತು ಆತನ ತಂದೆಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ವೈರಲ್​ ಆಗಿದೆ

Viral Video :10 ಲಕ್ಷ ರೂ ವರದಕ್ಷಿಣೆಗೆ ಬೇಡಿಕೆಯಿಟ್ಟ ವರನ ಕುಟುಂಬ: ಹಿಗ್ಗಾಮುಗ್ಗ ಥಳಿಸಿದ ವಧುವಿನ ತಂದೆ
TV9 Web
| Edited By: |

Updated on: Dec 21, 2021 | 3:31 PM

Share

ಸಾಮಾಜಿಕ ಜಾಲತಾಣಗಳು ಪಾಸಿಟಿವ್​ ಮತ್ತು ನೆಗೆಟಿವ್ ಎರಡೂ ರೀತಿಯ ವೀಡಿಯೋಗಳಿಗೆ ತಾಣವಾಗಿದೆ. ಉತ್ತರಪ್ರದೇಶದಲ್ಲಿ ಹಲವು ನಗೆಟಿವ್​ ಘಟನೆಗಳು ಆಗಾಗ ವೈರಲ್​ ಆಗುತ್ತಲೇ ಇರುತ್ತವೆ. ಇದೀಗ ಮದುವೆ ಮನೆಯಲ್ಲಿ ಡೌರಿ ಕೇಳಿದ್ದಕ್ಕಾಗಿ ವಧುವಿನ ಕಡೆಯವರು ವರ ಮತ್ತು ಆತನ ತಂದೆಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ವೈರಲ್​ ಆಗಿದೆ. ವರದಿಯ ಪ್ರಕಾರ ಆಗ್ರಾ ನಿವಾಸಿ ಮುಜಾಮಿಲ್​ ಎನ್ನುವ ವ್ಯಕ್ತಿ ಹಾಗೂ ಆತನ ತಂದೆ ಮೊಹಮ್ಮದ್​ ಹುಸೇನ್ ಮದುವೆಯ ಹಿಂದಿನ ದಿನ ರಾತ್ರಿ ವಧುವಿನ ಕಡೆಯವರನ್ನು 10 ಲಕ್ಷ ರೂ ವರದಕ್ಷಿಣೆ ನೀಡುವಂತೆ ಕೇಳಿದ್ದಾರೆ. ಇಲ್ಲವಾದರೆ ಮದುವೆಯನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಕೋಪಗೊಂಡ ವಧುವಿನ ಕಡೆಯವರು ವರ ಮತ್ತು ಆತನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಘಟನೆ ಡಿಸೆಂಬರ್ 12ರಂದು ನಡೆದಿದ್ದು, ಇದೀಗ ವೈರಲ್​ ಆಗಿದೆ. ಡೈಲಿ ಪಾಕಿಸ್ತಾನ ಸುದ್ದಿ ಸಂಸ್ಥೆಯು ಈ ಕುರಿತು ವರದಿ ಮಾಡಿದೆ. ಘಟನೆಯ ಬಗ್ಗೆ ವಧುವಿನ ತಂದೆ, ಈಗಾಗಲೇ ನಾವು ವರನ ಕಡೆಯವರಿಗೆ ವಜ್ರದ ಉಂಗುರ ಹಾಗೂ 3 ಲಕ್ಷ ರೂಗಳನ್ನು ನೀಡಿದ್ದೇವೆ. ಆದರೂ ಅವರು ಮತ್ತೆ 10 ಲಕ್ಷಕೇಳುತ್ತಿದ್ದಾರೆ. ಕೊಡುವುದಿಲ್ಲ ಎಂದರೆ ಮದುವೆಯನ್ನು ನಿಲ್ಲಿಸುವುದಾಗ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಅವರ ಮೇಲೆ ಹಲ್ಲೆ ನಡೆಸುವಂತಾಯಿತು ಎಂದು ಹೇಳಿಕೆ ನೀಡಿದ್ದಾರೆ.

ಇದರ ವೀಡಿಯೋವನ್ನು ಮೊದಲು ವೈರಲ್​ ವಿಡಿಯೋ ಎನ್ನುವ ಟ್ವಿಟರ್​ ಖಾತೆ ಹಂಚಿಕೊಂಡಿತ್ತು. ಬಳಿಕ ಹಲವು ಪುಟಗಳು ವೀಡಿಯೋ ಹಂಚಿಕೊಂಡಿದ್ದು ವೀಡಿಯೋ ವೈರಲ್​ ಆಗಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ