AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video :10 ಲಕ್ಷ ರೂ ವರದಕ್ಷಿಣೆಗೆ ಬೇಡಿಕೆಯಿಟ್ಟ ವರನ ಕುಟುಂಬ: ಹಿಗ್ಗಾಮುಗ್ಗ ಥಳಿಸಿದ ವಧುವಿನ ತಂದೆ

ಮದುವೆ ಮನೆಯಲ್ಲಿ ಡೌರಿ ಕೇಳಿದ್ದಕ್ಕಾಗಿ ವಧುವಿನ ಕಡೆಯವರು ವರ ಮತ್ತು ಆತನ ತಂದೆಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ವೈರಲ್​ ಆಗಿದೆ

Viral Video :10 ಲಕ್ಷ ರೂ ವರದಕ್ಷಿಣೆಗೆ ಬೇಡಿಕೆಯಿಟ್ಟ ವರನ ಕುಟುಂಬ: ಹಿಗ್ಗಾಮುಗ್ಗ ಥಳಿಸಿದ ವಧುವಿನ ತಂದೆ
TV9 Web
| Edited By: |

Updated on: Dec 21, 2021 | 3:31 PM

Share

ಸಾಮಾಜಿಕ ಜಾಲತಾಣಗಳು ಪಾಸಿಟಿವ್​ ಮತ್ತು ನೆಗೆಟಿವ್ ಎರಡೂ ರೀತಿಯ ವೀಡಿಯೋಗಳಿಗೆ ತಾಣವಾಗಿದೆ. ಉತ್ತರಪ್ರದೇಶದಲ್ಲಿ ಹಲವು ನಗೆಟಿವ್​ ಘಟನೆಗಳು ಆಗಾಗ ವೈರಲ್​ ಆಗುತ್ತಲೇ ಇರುತ್ತವೆ. ಇದೀಗ ಮದುವೆ ಮನೆಯಲ್ಲಿ ಡೌರಿ ಕೇಳಿದ್ದಕ್ಕಾಗಿ ವಧುವಿನ ಕಡೆಯವರು ವರ ಮತ್ತು ಆತನ ತಂದೆಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ವೈರಲ್​ ಆಗಿದೆ. ವರದಿಯ ಪ್ರಕಾರ ಆಗ್ರಾ ನಿವಾಸಿ ಮುಜಾಮಿಲ್​ ಎನ್ನುವ ವ್ಯಕ್ತಿ ಹಾಗೂ ಆತನ ತಂದೆ ಮೊಹಮ್ಮದ್​ ಹುಸೇನ್ ಮದುವೆಯ ಹಿಂದಿನ ದಿನ ರಾತ್ರಿ ವಧುವಿನ ಕಡೆಯವರನ್ನು 10 ಲಕ್ಷ ರೂ ವರದಕ್ಷಿಣೆ ನೀಡುವಂತೆ ಕೇಳಿದ್ದಾರೆ. ಇಲ್ಲವಾದರೆ ಮದುವೆಯನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಕೋಪಗೊಂಡ ವಧುವಿನ ಕಡೆಯವರು ವರ ಮತ್ತು ಆತನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಘಟನೆ ಡಿಸೆಂಬರ್ 12ರಂದು ನಡೆದಿದ್ದು, ಇದೀಗ ವೈರಲ್​ ಆಗಿದೆ. ಡೈಲಿ ಪಾಕಿಸ್ತಾನ ಸುದ್ದಿ ಸಂಸ್ಥೆಯು ಈ ಕುರಿತು ವರದಿ ಮಾಡಿದೆ. ಘಟನೆಯ ಬಗ್ಗೆ ವಧುವಿನ ತಂದೆ, ಈಗಾಗಲೇ ನಾವು ವರನ ಕಡೆಯವರಿಗೆ ವಜ್ರದ ಉಂಗುರ ಹಾಗೂ 3 ಲಕ್ಷ ರೂಗಳನ್ನು ನೀಡಿದ್ದೇವೆ. ಆದರೂ ಅವರು ಮತ್ತೆ 10 ಲಕ್ಷಕೇಳುತ್ತಿದ್ದಾರೆ. ಕೊಡುವುದಿಲ್ಲ ಎಂದರೆ ಮದುವೆಯನ್ನು ನಿಲ್ಲಿಸುವುದಾಗ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಅವರ ಮೇಲೆ ಹಲ್ಲೆ ನಡೆಸುವಂತಾಯಿತು ಎಂದು ಹೇಳಿಕೆ ನೀಡಿದ್ದಾರೆ.

ಇದರ ವೀಡಿಯೋವನ್ನು ಮೊದಲು ವೈರಲ್​ ವಿಡಿಯೋ ಎನ್ನುವ ಟ್ವಿಟರ್​ ಖಾತೆ ಹಂಚಿಕೊಂಡಿತ್ತು. ಬಳಿಕ ಹಲವು ಪುಟಗಳು ವೀಡಿಯೋ ಹಂಚಿಕೊಂಡಿದ್ದು ವೀಡಿಯೋ ವೈರಲ್​ ಆಗಿದೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!