AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video; ಹಿಮಪಾತದ ನಡುವೆ ಜೆಸಿಬಿ ಏರಿ ಮದುವೆ ಮಂಟಪಕ್ಕೆ ಬಂದ ವರ

ಹಿಮಪಾತದ ನಡುವೆ ವರನೊಬ್ಬ ಜೆಸಿಬಿ ಏರಿಕೊಂಡು ಮಂಟಪಕ್ಕೆ ಬಂದಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ.

Viral Video; ಹಿಮಪಾತದ ನಡುವೆ ಜೆಸಿಬಿ ಏರಿ ಮದುವೆ ಮಂಟಪಕ್ಕೆ ಬಂದ ವರ
ಜೆಸಿಬಿಯಲ್ಲಿ ಬಂದ ವರ
TV9 Web
| Edited By: |

Updated on: Jan 27, 2022 | 5:46 PM

Share

ಇತ್ತೀಚಿನ ದಿನಗಳಲ್ಲಿ ಮದುವೆಗಳನ್ನು ವಿಭಿನ್ನವಾಗಿ ಆಚರಿಸುವುದನ್ನು ಕಾಣಬಹುದು. ವಧು ವರರ ಎಂಟ್ರಿಯನ್ನು ಹೊಸ ಕಲ್ಪನೆಗಳ ಮೂಲಕ ಮಾಡುವ ಈವೆಂಟ್​ ಮ್ಯಾನೇಜ್ಮೆಂಟ್​ ಕಂಪನಿಗಳು ಹುಟ್ಟಿಕೊಂಡ ಮೇಲೆ ಮಂಟಪಕ್ಕೆ ವಧು ವರರ ಆಗಮನದ ಕಲ್ಪನೆಗಳೇ ಬದಲಾಗಿವೆ. ಪ್ರತೀ ಬಾರಿ ವಿಭಿನ್ನ ರೀತಿಯಲ್ಲಿ ವಧು ವರರು ಮಂಟಪಕ್ಕೆ ಆಗಮಿಸುವ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.  ಅದೇ ರೀತಿ ಇದೀಗ ವರನೊಬ್ಬ ಜೆಸಿಬಿ (JCB) ಯಲ್ಲಿ ಮದುವೆ ಮಂಟಪಕ್ಕೆ ಆಗಮಿಸಿದ ವಿಡಿಯೋ ವೈರಲ್​ ಅಗಿದೆ. ಚಳಿಗಾಲವಾದ ಕಾರಣ  ಉತ್ತರಭಾರತದ ರಾಜ್ಯಗಳಲ್ಲಿ ಹಿಮಪಾತ (Snowfall) ವಾಗುತ್ತಿದೆ. ರಸ್ತೆಯೂ ಕಾಣದಷ್ಟು ದಟ್ಟ ಮಂಜು  ಹಾಗೂ ಹಿಮಪಾತ ಸಂಭವಿಸುತ್ತಿದೆ. ಈ ನಡುವೆ ವರನೊಬ್ಬ (Groom) ನಡೆದುಕೊಂಡು ಬರಲು ಅಥವಾ ಕಾರಿನಲ್ಲಿ ಬರಲು ಸಾಧ್ಯವಾಗದೆ ಜೆಸಿಬಿಯಲ್ಲಿ ಬಂದಿದ್ದಾರೆ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral)​ ಆಗಿದೆ.

ಹಿಮಪಾತದ ನಡುವೆ ವರ ಜೆಸಿಬಿಯಲ್ಲಿ ಬರುವ ವಿಡಿಯೋವನ್ನು @Anilkimta2. ಎನ್ನುವ ಟ್ವಿಟರ್​ ಬಳಕೆದಾರರು ಹಂಚಿಕೊಂಡಿದ್ದಾರೆ. ಭಾರಿ ಪ್ರಮಾಣದಲ್ಲಿ ಹಿಮಪಾತ, ದಟ್ಟ ಮಂಜು ಕವಿದ ಕಾರಣ ವರನನ್ನು ಜೆಸಿಬಿಯಲ್ಲಿ ಕರೆತರಲಾಯಿತು ಎಂದು ಕ್ಯಾಪ್ಷನ್​ ನೀಡುವ ಮೂಲಕ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಸಖತ್ ವೈರಲ್​ ಆಗಿದ್ದು, ಮಂಜಿನ ನಡುವೆ ಜೆಸಿಬಿಯನ್ನು ಓಡಿಸಿಕೊಂಡು ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹದು.

ಈ ಹಿಂದೆ ಪಾಕಿಸ್ತಾನ ಪತ್ರಕರ್ತರೊಬ್ಬರು ಹಂಚಿಕೊಂಡ ವಿಡಿಯೋದಲ್ಲಿ ವಧುವರರಿಬ್ಬರೂ ಜೆಸಿಬಿಯನ್ನು ಓಡಿಸಿಕೊಂಡು ಮದುವೆ ಮಂಟಪಕ್ಕೆ ಬಂದಿದ್ದರು. ಇದರ ವಿಡಿಯೋವನ್ನು ಅವರು  ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಬಳಿಕ ಎಲ್ಲೆಡೆ ವೈರಲ್​ ಆಗಿದತ್ತು. ಇದೀಗ ಹಿಮಪಾತದ ಕಾರಣ ವರ ಜೆಸಿಬಿ ಏರಿ ಬಂದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ;

ಕಚ್ಚಾ ಬಾದಾಮ್​ ಹಾಡಿಗೆ ಸಖತ್​ ಹೆಜ್ಜೆ ಹಾಕಿದ ಸ್ಪೈಸ್​ ಜೆಟ್​ನ ಗಗನಸಖಿ; ವಿಡಿಯೋ ವೈರಲ್​​

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್