AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್​​ ಮಾಡಲು ಹುಡುಗಿಯನ್ನು ಎತ್ತಲು ಹೋಗಿ ಆಯತಪ್ಪಿ ಬಿದ್ದ ವರ; ವಿಡಿಯೋ ವೈರಲ್​​

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್​ ಆಗಿದೆ. ಮದುವೆಯಲ್ಲಿ ವಧುವರರ ನೃತ್ಯ ಮಾಡುವ ವೇಳೆ ಆಯತಪ್ಪಿ ಇಬ್ಬರೂ ಬಿದ್ದ ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ವೈರಲ್​ ಆಗಿದೆ.

ಡ್ಯಾನ್ಸ್​​ ಮಾಡಲು ಹುಡುಗಿಯನ್ನು ಎತ್ತಲು ಹೋಗಿ ಆಯತಪ್ಪಿ ಬಿದ್ದ ವರ; ವಿಡಿಯೋ ವೈರಲ್​​
ವಿಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on:Jan 23, 2022 | 5:25 PM

Share

ಮದುವೆಗಳೆಂದರೆ ಶಾಸ್ತ್ರ ಸಂಪ್ರದಾಯದಿಂದ ಕೂಡಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆಗಳಲ್ಲಿ ಆಡಂಬರಗಳೇ ಹೆಚ್ಚಾಗಿವೆ. ಹಾಡು, ಕುಣಿತ ಸೇರಿದಂತೆ ಮದುವೆಯ ಹಿಂದಿನ ದಿನ ಪಾರ್ಟಿಗಳನ್ನೂ ಅರೆಂಜ್​ ಮಾಡುತ್ತಾರೆ. ಇಲ್ಲಿ ಮದ್ಯಪಾನ ಮಾಡಿ ತಾಳತಪ್ಪಿದರೂ ಹೆಜ್ಜೆಹಾಕುವ ಅದೆಷ್ಟೋ ವಧುವರರನ್ನು ಕಾಣಬಹುದು. ಆದರೆ ಅದೇ ಎಂಜಾಯ್​ಮೆಂಟ್​ ಕೆಲವೊಮ್ಮೆ ಅನಾಹುತಕ್ಕೆ ಕಾರಣವಾಗುತ್ತದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್​ ಆಗಿದೆ. ಮದುವೆಯಲ್ಲಿ ವಧುವರರ ನೃತ್ಯ ಮಾಡುವ ವೇಳೆ ಆಯತಪ್ಪಿ ಇಬ್ಬರೂ ಬಿದ್ದ ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ವೈರಲ್​ ಆಗಿದೆ.

ಟ್ರೋಲ್ ಪೇಜ್​ ಒಂದು ವಿಡಿಯೊ ಹಂಚಿಕೊಂಡು ಟ್ರೋಲ್​ ಮಾಡಿದ್ದು, ನೆಟ್ಟಿಗರು ವಿಡಿಯೋ ನೋಡಿ ನಗೆಗಡಲಲ್ಲಿ ತೇಲಿದ್ದಾರೆ. ವಿಡಿಯೋದಲ್ಲಿ ಎರಡು ಜೋಡಿಗಳು ಡ್ಯಾನ್ಸ್​ ಮಾಡಲು ಪ್ರಯತ್ನಿಸುವುದನ್ನು ಕಾಣಬಹುದು. ಆದರೆ ಎಲ್ಲರೂ ಕಂಠ ಪೂರ್ತಿ ಕುಡಿದಿದ್ದಾರೆ ಎಂದು ಅವರ ನಡಿಗೆಯ ಶೈಲಿಯಲ್ಲೇ ಹೇಳಬಹುದು. ಹುಡುಗ ಹುಡುಗಿ ಇಬ್ಬರೂ ಡ್ಯಾನ್ಸ್​ ಮಾಡಲು ವೇದಿಕೆಗೆ ಬರುತ್ತಾರೆ, ಆಗ ಹುಡುಗ ಹುಡುಗಿಯನ್ನು ಎತ್ತಿಕೊಳ್ಳಲು ಹೋಗುತ್ತಾನೆ. ಈ ವೇಳೆ ಆಯತಪ್ಪಿ ಇಬ್ಬರೂ ವೇದಿಕೆಯ ಮೇಲೆಯೇ ಬೀಳುತ್ತಾರೆ. ಇದರ ವಿಡಿಯೋ ಈಗ ಸಿಕ್ಕಾಪಟ್ಟೆ ಟ್ರೋಲ್​ ಆಗುತ್ತಿದೆ. ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ವಿಡಿಯೋ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್​ಗಳಿಸಿದ್ದು, ಲಕ್ಷಾಂತರ ಜನ ವೀಕ್ಷಿಸಿ ಕಾಮೆಂಟ್​ ಮಾಡಿದ್ದರೆ.

ಮದುವೆ ಮನೆಗಳಲ್ಲಿ ವಿಚಿತ್ರ ಘಟನೆಗಳು ನಡೆಯುವುದು ಸಾಮಾನ್ಯ. ಇತ್ತೀಚೆಗೆ ತಮಿಳುನಾಡಿನಲ್ಲಿ ವಧು ಡ್ಯಾನ್ಸ್ ಮಾಡುತ್ತಾ ಮಂಟಪಕ್ಕೆ ಬಂದಿದ್ದಾಳೆ ಎಂದು ವರ ಕಪಾಳ ಮೋಕ್ಷ ಮಾಡಿದ್ದಾನೆ. ಇದರಿಂದ ಕೋಪಗೊಂಡ ವಧು, ವರನಿಗೂ ತಿರುಗಿಸಿ ಹೊಡೆದಿದ್ದು, ಅದೇ ಮಂಟಪದಲ್ಲಿ ಬೇರೆ ಹುಡುಗನನ್ನು ಮದುವೆಯಾದ ಘಟನೆ ನಡೆದಿತ್ತು.

ಇದನ್ನೂ ಓದಿ:

Viral Video: ಕಚ್ಚಾ ಬಾದಾಮ್​ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ದಕ್ಷಿಣ ಕೊರಿಯಾದ ಅಮ್ಮ-ಮಗಳು

ಸುಭಾಷ್​ ಚಂದ್ರ ಬೋಸ್ ​125ನೇ ಜನ್ಮದಿನ; ಮರಳಿನ ಕಲಾಕೃತಿ ಮೂಲಕ ಸ್ಮರಿಸಿದ ಕಲಾವಿದ ಸುದರ್ಶನ್​ ಪಟ್ನಾಯಕ್​

Published On - 5:21 pm, Sun, 23 January 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ