AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್​​ ಮಾಡಲು ಹುಡುಗಿಯನ್ನು ಎತ್ತಲು ಹೋಗಿ ಆಯತಪ್ಪಿ ಬಿದ್ದ ವರ; ವಿಡಿಯೋ ವೈರಲ್​​

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್​ ಆಗಿದೆ. ಮದುವೆಯಲ್ಲಿ ವಧುವರರ ನೃತ್ಯ ಮಾಡುವ ವೇಳೆ ಆಯತಪ್ಪಿ ಇಬ್ಬರೂ ಬಿದ್ದ ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ವೈರಲ್​ ಆಗಿದೆ.

ಡ್ಯಾನ್ಸ್​​ ಮಾಡಲು ಹುಡುಗಿಯನ್ನು ಎತ್ತಲು ಹೋಗಿ ಆಯತಪ್ಪಿ ಬಿದ್ದ ವರ; ವಿಡಿಯೋ ವೈರಲ್​​
ವಿಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on:Jan 23, 2022 | 5:25 PM

Share

ಮದುವೆಗಳೆಂದರೆ ಶಾಸ್ತ್ರ ಸಂಪ್ರದಾಯದಿಂದ ಕೂಡಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆಗಳಲ್ಲಿ ಆಡಂಬರಗಳೇ ಹೆಚ್ಚಾಗಿವೆ. ಹಾಡು, ಕುಣಿತ ಸೇರಿದಂತೆ ಮದುವೆಯ ಹಿಂದಿನ ದಿನ ಪಾರ್ಟಿಗಳನ್ನೂ ಅರೆಂಜ್​ ಮಾಡುತ್ತಾರೆ. ಇಲ್ಲಿ ಮದ್ಯಪಾನ ಮಾಡಿ ತಾಳತಪ್ಪಿದರೂ ಹೆಜ್ಜೆಹಾಕುವ ಅದೆಷ್ಟೋ ವಧುವರರನ್ನು ಕಾಣಬಹುದು. ಆದರೆ ಅದೇ ಎಂಜಾಯ್​ಮೆಂಟ್​ ಕೆಲವೊಮ್ಮೆ ಅನಾಹುತಕ್ಕೆ ಕಾರಣವಾಗುತ್ತದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್​ ಆಗಿದೆ. ಮದುವೆಯಲ್ಲಿ ವಧುವರರ ನೃತ್ಯ ಮಾಡುವ ವೇಳೆ ಆಯತಪ್ಪಿ ಇಬ್ಬರೂ ಬಿದ್ದ ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ವೈರಲ್​ ಆಗಿದೆ.

ಟ್ರೋಲ್ ಪೇಜ್​ ಒಂದು ವಿಡಿಯೊ ಹಂಚಿಕೊಂಡು ಟ್ರೋಲ್​ ಮಾಡಿದ್ದು, ನೆಟ್ಟಿಗರು ವಿಡಿಯೋ ನೋಡಿ ನಗೆಗಡಲಲ್ಲಿ ತೇಲಿದ್ದಾರೆ. ವಿಡಿಯೋದಲ್ಲಿ ಎರಡು ಜೋಡಿಗಳು ಡ್ಯಾನ್ಸ್​ ಮಾಡಲು ಪ್ರಯತ್ನಿಸುವುದನ್ನು ಕಾಣಬಹುದು. ಆದರೆ ಎಲ್ಲರೂ ಕಂಠ ಪೂರ್ತಿ ಕುಡಿದಿದ್ದಾರೆ ಎಂದು ಅವರ ನಡಿಗೆಯ ಶೈಲಿಯಲ್ಲೇ ಹೇಳಬಹುದು. ಹುಡುಗ ಹುಡುಗಿ ಇಬ್ಬರೂ ಡ್ಯಾನ್ಸ್​ ಮಾಡಲು ವೇದಿಕೆಗೆ ಬರುತ್ತಾರೆ, ಆಗ ಹುಡುಗ ಹುಡುಗಿಯನ್ನು ಎತ್ತಿಕೊಳ್ಳಲು ಹೋಗುತ್ತಾನೆ. ಈ ವೇಳೆ ಆಯತಪ್ಪಿ ಇಬ್ಬರೂ ವೇದಿಕೆಯ ಮೇಲೆಯೇ ಬೀಳುತ್ತಾರೆ. ಇದರ ವಿಡಿಯೋ ಈಗ ಸಿಕ್ಕಾಪಟ್ಟೆ ಟ್ರೋಲ್​ ಆಗುತ್ತಿದೆ. ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ವಿಡಿಯೋ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್​ಗಳಿಸಿದ್ದು, ಲಕ್ಷಾಂತರ ಜನ ವೀಕ್ಷಿಸಿ ಕಾಮೆಂಟ್​ ಮಾಡಿದ್ದರೆ.

ಮದುವೆ ಮನೆಗಳಲ್ಲಿ ವಿಚಿತ್ರ ಘಟನೆಗಳು ನಡೆಯುವುದು ಸಾಮಾನ್ಯ. ಇತ್ತೀಚೆಗೆ ತಮಿಳುನಾಡಿನಲ್ಲಿ ವಧು ಡ್ಯಾನ್ಸ್ ಮಾಡುತ್ತಾ ಮಂಟಪಕ್ಕೆ ಬಂದಿದ್ದಾಳೆ ಎಂದು ವರ ಕಪಾಳ ಮೋಕ್ಷ ಮಾಡಿದ್ದಾನೆ. ಇದರಿಂದ ಕೋಪಗೊಂಡ ವಧು, ವರನಿಗೂ ತಿರುಗಿಸಿ ಹೊಡೆದಿದ್ದು, ಅದೇ ಮಂಟಪದಲ್ಲಿ ಬೇರೆ ಹುಡುಗನನ್ನು ಮದುವೆಯಾದ ಘಟನೆ ನಡೆದಿತ್ತು.

ಇದನ್ನೂ ಓದಿ:

Viral Video: ಕಚ್ಚಾ ಬಾದಾಮ್​ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ದಕ್ಷಿಣ ಕೊರಿಯಾದ ಅಮ್ಮ-ಮಗಳು

ಸುಭಾಷ್​ ಚಂದ್ರ ಬೋಸ್ ​125ನೇ ಜನ್ಮದಿನ; ಮರಳಿನ ಕಲಾಕೃತಿ ಮೂಲಕ ಸ್ಮರಿಸಿದ ಕಲಾವಿದ ಸುದರ್ಶನ್​ ಪಟ್ನಾಯಕ್​

Published On - 5:21 pm, Sun, 23 January 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ