AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ದಿನ ಪತ್ನಿಯ ಜುಟ್ಟು ಹಿಡಿದು ತಲೆ ತಿರುಗಿಸಿ ಬಾಯಿಗೆ ಲಾಡು ತುರುಕಿದ ಪತಿ; ವಿಡಿಯೋ ನೋಡಿ ಕೋಪಗೊಂಡ ನೆಟ್ಟಿಗರು

ಈ ವಿಡಿಯೋವನ್ನು ಇನ್​ಸ್ಟಾಗ್ರಾಂ ಬಳಕೆದಾರರೊಬ್ಬರು ಶೇರ್ ಮಾಡಿಕೊಂಡು, ಇದೊಂದು ಫನ್ನಿ ಎಂದಿದ್ದಾರೆ. ಆದರೆ ನೆಟ್ಟಿಗರು ಇದು ಜೋಕ್​ ಅಲ್ಲ ಬದಲಿಗೆ ದೌರ್ಜನ್ಯ ಎಂದಿದ್ದಾರೆ.

Viral Video: ಮದುವೆ ದಿನ ಪತ್ನಿಯ ಜುಟ್ಟು ಹಿಡಿದು ತಲೆ ತಿರುಗಿಸಿ ಬಾಯಿಗೆ ಲಾಡು ತುರುಕಿದ ಪತಿ; ವಿಡಿಯೋ ನೋಡಿ ಕೋಪಗೊಂಡ ನೆಟ್ಟಿಗರು
ಬಲವಂತವಾಗಿ ಲಾಡು ತಿನ್ನಿಸಿದ ವರ
TV9 Web
| Edited By: |

Updated on:Jul 01, 2021 | 5:49 PM

Share

ಮದುವೆ ಎಂದರೆ ಅಲ್ಲಿ ಹಲವಾರು ಸಂಪ್ರದಾಯ, ಆಚರಣೆಗಳು ನಡೆಯುತ್ತದೆ. ಹಾಗೇ ಮದುವೆ ಮುಗಿದ ಬಳಿಕ ವಧು-ವರ ಪರಸ್ಪರ ಲಾಡು ಅಥವಾ ಇನ್ನಿತರ ಯಾವುದಾದರೂ ಒಂದು ಸಿಹಿಯನ್ನು ತಿನ್ನಿಸಿಕೊಳ್ಳುತ್ತಾರೆ. ಈ ಮದುವೆಯಲ್ಲಿ ಪತಿ ತನ್ನ ಪತ್ನಿಗೆ ಲಾಡು ತಿನ್ನಿಸಿದ ರೀತಿ ನಿಜಕ್ಕೂ ಕೋಪತರಿಸುವಂತಿದೆ. ವೈರಲ್​ ಆದ ವಿಡಿಯೋ ನೋಡಿ ನೆಟ್ಟಿಗರು, ಇದು ಪ್ರೀತಿಯಲ್ಲ..ದೌರ್ಜನ್ಯ. ಮದುವೆ ದಿನವೇ ಪತ್ನಿಯನ್ನು ಹಿಂಸಿಸಿದ ಈ ವ್ಯಕ್ತಿ ಇನ್ನು ಮುಂದೆಯೂ ಹಾಗೇ ನಡೆಸಿಕೊಳ್ಳುತ್ತಾನೆ ಎಂದೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಗಿದ್ದಿಷ್ಟು..ಮದುವೆ ಮುಗಿದಿದೆ. ವಧು-ವರ ಇಬ್ಬರೂ ಹಾರ ಹಾಕಿಕೊಂಡೇ ಇದ್ದಾರೆ. ಬಂಧುಬಳಗದವರೂ ಸುತ್ತಲೂ ಇದ್ದಾರೆ. ವಧುವಿನ ಕೈಯಲ್ಲಿ ಲಾಡು ಕೊಟ್ಟು ಅದನ್ನು ಪತಿಗೆ ತಿನ್ನಿಸುವಂತೆ ಮೊದಲು ಹೇಳಲಾಯಿತು. ಅದರಂತೆ ಆಕೆ ಆತನ ಬಾಯಿಗೆ ಇಟ್ಟಳು. ಒಂದೇ ಗುಟುಕಿಗೆ ಆ ಲಾಡನ್ನು ಅವನೇನೋ ತಿಂದ. ಆದರೆ ತಿರುಗಿ ವರ ತನ್ನ ಪತ್ನಿಗೆ ಲಾಡು ತಿನ್ನಿಸಲು ಬಂದಾಗ ಅವಳು ನಾಚಿಕೆಯಿಂದ ಪಕ್ಕಕ್ಕೆ ಬಾಗಿ, ಮುಖ ತಿರುಗಿಸಿದಳು. ಅದೇನಾಯಿತೋ ಇವನಿಗೆ ಪತ್ನಿಯ ಜುಟ್ಟು ಹಿಡಿದು ತಲೆ ತಿರುಗಿಸಿ ಬಾಯಿಗೆ ತುರುಕೇಬಿಟ್ಟ… ಈ ವಿಡಿಯೋ ನೋಡಿದರೆ ನಿಮಗೂ ಒಂದು ಕ್ಷಣ ಕ್ರೂರತನ ಅನ್ನಿಸದೆ ಇರದು.

ಈ ವಿಡಿಯೋವನ್ನು ಇನ್​ಸ್ಟಾಗ್ರಾಂ ಬಳಕೆದಾರರೊಬ್ಬರು ಶೇರ್ ಮಾಡಿಕೊಂಡು, ಇದೊಂದು ಫನ್ನಿ ಎಂದಿದ್ದಾರೆ. ಆದರೆ ನೆಟ್ಟಿಗರು ಇದು ಜೋಕ್​ ಅಲ್ಲ ಬದಲಿಗೆ ದೌರ್ಜನ್ಯ ಎಂದಿದ್ದಾರೆ. ಪತಿಯಾದವನು ಮದುವೆ ದಿನ ಹೀಗೆ ನಡೆಸಿಕೊಳ್ಳುವುದಾ ಎಂದೂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Covishield ಕೊವಿಶೀಲ್ಡ್‌ ಲಸಿಕೆ ಪಡೆದವರ ಪ್ರಯಾಣಕ್ಕೆ ಐರೋಪ್ಯ ಒಕ್ಕೂಟದ ಏಳು ದೇಶಗಳಿಂದ ಅನುಮತಿ

Groom Forcefully Shoves Ladoo Into Bride’s Mouth

Published On - 5:48 pm, Thu, 1 July 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ