AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧುವಿನ ಫೋಟೋ ತೆಗೆಯಹೋದ ಫೋಟೋಗ್ರಾಫರ್​ ಬುರುಡೆ ಕಳಚಿ ಬೀಳುವಂತೆ ಹೊಡೆದ ಮದುಮಗ: ವಿಡಿಯೋ ವೈರಲ್

ಮದುವೆ ಗಂಡು ಹೆಣ್ಣು ವೇದಿಕೆ ಮೇಲೆ ನಿಂತಿದ್ದರು. ವೇದಿಕೆಯನ್ನು ಹೂವಿನಿಂದ ಅಲಂಕಾರ ಮಾಡಲಾಗಿತ್ತು. ಈ ವೇಳೆ ಮದುವೆ ಹುಡುಗಿಯ ಎದುರು ಬಂದ ಫೋಟೋಗ್ರಾಫರ್​ ಫೋಟೋ ಕ್ಲಿಕ್ಕಿಸಲು ಆರಂಭಿಸಿದ್ದ.

ವಧುವಿನ ಫೋಟೋ ತೆಗೆಯಹೋದ ಫೋಟೋಗ್ರಾಫರ್​ ಬುರುಡೆ ಕಳಚಿ ಬೀಳುವಂತೆ ಹೊಡೆದ ಮದುಮಗ: ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Feb 07, 2021 | 1:34 PM

Share

ಮದುವೆ ಸಂದರ್ಭದಲ್ಲಿ ಫೋಟೋಗ್ರಾಫರ್​ ಇರಲೇಬೇಕು ಎಂಬುದು ಇತ್ತೀಚೆಗೆ ನಿಯಮವೇ ಆದಂತಿದೆ. ಯಾವುದೇ ಮದುವೆಯಾದರೂ ಛಾಯಾಗ್ರಾಹಕ ಇಲ್ಲದೆ ಪೂರ್ಣಗೊಳ್ಳುವುದೇ ಇಲ್ಲ ಎನ್ನುವ ಸ್ಥಿತಿಗೆ ಬಂದೊದಗಿದೆ. ಫೋಟೋಗ್ರಾಫರ್​ಗಳು​ ಕೂಡ ಅಷ್ಟೇ, ಕೊಟ್ಟ ಹಣಕ್ಕೆ ಮೋಸ ಮಾಡಬಾರದು ಎಂದು ಅತ್ಯುತ್ತಮ ಫೋಟೋವನ್ನೇ ತೆಗೆಯಲು ಪ್ರಯತ್ನಿಸುತ್ತಾರೆ. ಹೀಗೆ ಮಾಡಲು ಹೋಗಿ ಫೋಟೋಗ್ರಾಫರ್​ ಓರ್ವ ಹೊಡೆತ ತಿಂದಿದ್ದಾನೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಮದುವೆ ದಿನ ಗಂಡು ಹೆಣ್ಣು ವೇದಿಕೆ ಮೇಲೆ ನಿಂತಿದ್ದರು. ವೇದಿಕೆಯನ್ನು ಹೂವಿನಿಂದ ಅಲಂಕಾರ ಮಾಡಲಾಗಿತ್ತು. ಈ ವೇಳೆ ಮದುವೆ ಹುಡುಗಿಯ ಎದುರು ಬಂದ ಫೋಟೋಗ್ರಾಫರ್​ ಫೋಟೋ ಕ್ಲಿಕ್ಕಿಸಲು ಆರಂಭಿಸಿದ್ದ. ಕೆಲವೊಂದು ಹತ್ತಿರದ ಶಾಟ್​ಗಳನ್ನು ತೆಗೆದರೆ, ಇನ್ನೂ ಕೆಲವು ದೂರದ ಶಾಟ್​ಗಳನ್ನು ತೆಗೆಯುತ್ತಿದ್ದ.

ಆದರೆ, ಹುಡುಗಿ ಪಕ್ಕ ನಿಂತ ಮದುವೆ ಗಂಡಿನ ಒಂದೇ ಒಂದು ಫೋಟೋವನ್ನು ಛಾಯಾಗ್ರಾಹಕ ತೆಗೆದಿರಲಿಲ್ಲ. ವೇದಿಕೆಯ ಮೇಲೆ ಹುಡುಗಿ ಮಾತ್ರ ಇದ್ದಾಳೆ ಎಂಬಂತಿತ್ತು ಛಾಯಾಗ್ರಾಹಕನ ವರ್ತನೆ. ಮದುವೆ ಗಂಡು ಕೂಡ ತುಂಬಾನೇ ತಾಳ್ಮೆಯಿಂದ ಇದನ್ನು ನೋಡುತ್ತಲೇ ಇದ್ದ. ಸಮಯ ಕಳೆದಂತೆ ಹುಡುಗಿ ಸಮೀಪ ಹೋಗುತ್ತಿದ್ದದ್ದನ್ನು ನೋಡಿ ಮದುವೆ ಗಂಡಿನ ಪಿತ್ತ ನೆತ್ತಿಗೇರಿತ್ತು. ತಡ ಮಾಡದೆ, ಛಾಯಾಗ್ರಾಹಕನ ತಲೆಗೆ ಹೊಡೆದೇ ಬಿಟ್ಟ ಮದುಮಗ!

ಇದನ್ನು ನೋಡಿದ ಹುಡುಗಿ ಬಿದ್ದು, ಬಿದ್ದು ನಕ್ಕಿದ್ದಾಳೆ. ಛಾಯಾಗ್ರಾಹಕ ಮಾತ್ರ ತನ್ನಿಂದ ಆದ ತಪ್ಪಾದರೂ ಏನು ಎನ್ನುವಂತೆ ಗಂಡಿನ ಮುಖ ನೋಡಿದ್ದ. ನಂತರ ವೇದಿಕೆಯಿಂದ ಕೆಳಗಿಳಿದು ಬಂದಿದ್ದ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ವೈರಲ್ ವಿಡಿಯೋ: ವಿಷಕಾರಿ ಹಾವಿನೆದುರು ಕಾಳಗಕ್ಕಿಳಿದು ಗೆದ್ದ ಸಣ್ಣ ಜೇಡ..!

Published On - 6:13 pm, Sat, 6 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್