AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರನಿದ್ದ ಕುದುರೆ ಗಾಡಿಗೆ ಬೆಂಕಿ! ತಪ್ಪಿತು ಬಾರಿ ದೊಡ್ಡ ಅನಾಹುತ; ವಿಡಿಯೋ ವೈರಲ್

ಗುಜರಾತ್​ನ ಪಂಚಮಹಲ್ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿತ್ತು. ಈ ವೇಳೆ ವರ ಕುದುರೆ ಗಾಡಿ ಏರಿ ಮೆರವಣಿಗೆ ಮೂಲಕ ಆಗಮಿಸುತ್ತಿದ್ದ. ಮೆರವಣಿಗೆಯಲ್ಲಿ ಜನರು ಪಟಾಕಿ ಸಿಡಿಸುತ್ತಾ ಸಂಭ್ರಮಿಸುತ್ತಿದ್ದರು.

ವರನಿದ್ದ ಕುದುರೆ ಗಾಡಿಗೆ ಬೆಂಕಿ! ತಪ್ಪಿತು ಬಾರಿ ದೊಡ್ಡ ಅನಾಹುತ; ವಿಡಿಯೋ ವೈರಲ್
ವರನಿದ್ದ ಕುದುರೆ ಗಾಡಿಗೆ ಬೆಂಕಿ ತಗುಲಿದೆ
TV9 Web
| Edited By: sandhya thejappa|

Updated on: Dec 15, 2021 | 11:35 AM

Share

ಮದುವೆ ಅಂದರೆ ಸಂಭ್ರಮ, ಸಡಗರ. ಆದರೆ ಈ ಸಂಭ್ರಮದಲ್ಲಿ ಆಗುವ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ ಇರಲ್ಲ. ಸಂತೋಷದ ಗಳಿಗೆಯಲ್ಲಿ ತೇಲುತ್ತಿರುವಾಗ ಅನಾಹುತಗಳ ಬಗ್ಗೆ ಯೋಚನೆಯೂ ಮಾಡಲ್ಲ. ಇದಕ್ಕೆ ಗುಜರಾತ್​ನ ಪಂಚಮಹಲ್ ಜಿಲ್ಲೆಯಲ್ಲಿ ನಡೆದ ಮದುವೆ ಮನೆಯೊಂದು ಸಾಕ್ಷಿಯಾಗಿದೆ. ಮದುವೆ ಮೆರವಣಿಗೆಯಲ್ಲಿ ಜನರು ಪಟಾಕಿ ಸಿಡಿಸುತ್ತಾ ಕುಣಿದು ಕುಪ್ಪಳಿಸಿದರು. ಈ ವೇಳೆ ಮೆರವಣಿಗೆಯಲ್ಲಿ ವರನಿದ್ದ ಕುದುರೆ ಗಾಡಿಗೆ ಬೆಂಕಿ ಹೊತ್ತಿಕೊಂಡಿದೆ. ಕುದುರೆ ಗಾಡಿಗೆ ಬೆಂಕಿ ಹೊತ್ತಿ ಉರಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗುಜರಾತ್​ನ ಪಂಚಮಹಲ್ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿತ್ತು. ಈ ವೇಳೆ ವರ ಕುದುರೆ ಗಾಡಿ ಏರಿ ಮೆರವಣಿಗೆ ಮೂಲಕ ಆಗಮಿಸುತ್ತಿದ್ದ. ಮೆರವಣಿಗೆಯಲ್ಲಿ ಜನರು ಪಟಾಕಿ ಸಿಡಿಸುತ್ತಾ ಸಂಭ್ರಮಿಸುತ್ತಿದ್ದರು. ಆಗ ಕುದುರೆ ಗಾಡಿಯಲ್ಲಿ ಇರಿಸಿದ ಪಟಾಕಿಗೆ ಬೆಂಕಿ ಕಿಡಿ ತಗುಲಿದೆ. ವರ ಸ್ವಲ್ಪದರಲ್ಲೇ ಪಾರಾಗಿದ್ದು, ಬೆಂಕಿ ಹೊತ್ತಿಕೊಂಡಾಗ ವರ ಗಾಡಿಯಿಂದ ಜಿಗಿಯುತ್ತಿರುವ ದೃಶ್ಯ ವೈರಲ್ ಆದ ವಿಡಿಯೋದಲ್ಲಿ ಕಾಣಬಹುದು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಮದುವೆಯ ಮೆರವಣಿಗೆಯಲ್ಲಿ ನೆರೆದಿದ್ದವರು ಮತ್ತು ಜನರು ಬೆಂಕಿಯ ಮೇಲೆ ನೀರು ಸುರಿಯುವ ಮೂಲಕ ಬೆಂಕಿಯನ್ನು ನಂದಿಸುವ ಕೆಲಸ ಮಾಡಿದ್ದಾರೆ. ಬಳಿಕ ಸಮೀಪದ ಅಂಗಡಿಗಳಿಂದ ಅಗ್ನಿಶಾಮಕ ಯಂತ್ರಗಳನ್ನು ತಂದು ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಈ ಎಲ್ಲ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗುತ್ತಿದೆ.

ಇದನ್ನೂ ಓದಿ

ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ

2022ರ IIFA​ ಉತ್ಸವವನ್ನು ನಿರೂಪಣೆ ಮಾಡಲಿದ್ದಾರೆ ಬಾಲಿವುಡ್​ ನಟ ಸಲ್ಮಾನ್​ ಖಾನ್

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!