AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪದಲ್ಲಿಯೂ ಲ್ಯಾಪ್​ಟಾಪ್​ ಹಿಡಿದು ಕುಳಿತ ವರ; ವಧುವಿನ ರಿಯಾಕ್ಷನ್ ಮಿಸ್ ಮಾಡ್ಕೊಳ್ಳೊ ಹಾಗೇ ಇಲ್ಲಾ!

ಮದುವೆ ಮನೆಯಲ್ಲಿ ವರ, ವಧು ಸೇರಿದಂತೆ ಅತಿಥಿಗಳೆಲ್ಲಾ ಅಲಂಕಾರಗೊಂಡು ಸಿದ್ಧರಾಗಿದ್ದಾರೆ. ವರ ಮದುವೆ ಮಂಟಪದಲ್ಲಿ ಕುಳಿತಿದ್ದಾನೆ. ಲ್ಯಾಪ್​ಟಾಪ್​ ಹಿಡಿದು ಕೆಲಸ ಮಾಡುತ್ತಿದ್ದಾನೆ. ವಿಡಿಯೋ ನೋಡಿ...

Viral Video: ಮದುವೆ ಮಂಟಪದಲ್ಲಿಯೂ ಲ್ಯಾಪ್​ಟಾಪ್​ ಹಿಡಿದು ಕುಳಿತ ವರ; ವಧುವಿನ ರಿಯಾಕ್ಷನ್ ಮಿಸ್ ಮಾಡ್ಕೊಳ್ಳೊ ಹಾಗೇ ಇಲ್ಲಾ!
ಮದುವೆ ಮಂಟಪದಲ್ಲಿಯೂ ಲ್ಯಾಪ್​ಟಾಪ್​ ಹಿಡಿದು ಕುಳಿತ ವರ
TV9 Web
| Edited By: |

Updated on: Jul 26, 2021 | 10:52 AM

Share

ಕೊವಿಡ್ 19 ಸಾಂಕ್ರಾಮಿಕದಿಂದಾಗಿ ಅದೆಷ್ಟೋ ಜನರ ಜೀವನ ಶೈಲಿಯೇ ಬದಲಾಗಿ ಬಿಟ್ಟಿತು. ಉದ್ಯೋಗಸ್ಥರೆಲ್ಲಾ ಮನೆಯಿಂದಲೇ ಕೆಲಸ ಮಾಡುವ ಅನಿವಾರ್ಯತೆ ಎದುರಾಯಿತು. ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯವಾಯಿತು. ಹೀಗಿರುವಾಗ ಕೆಲಸಗಾರರು ಮನೆಯಲ್ಲಿ ಬಿಡುವಿಲ್ಲದೇ ಕೆಲಸ ಮಾಡಬೇಕಾಯಿತು. ಯಾವ ಪರಿಸ್ಥಿತಿ ಎಂದರೆ ವರ ಮಂಟಪದಲ್ಲಿ ಕುಳಿತಾಗಲೂ ಲ್ಯಾಪ್​ಟಾಪ್​ ಹಿಡಿದು ಕೆಲಸ ಮಾಡುತ್ತಿದ್ದಾನೆ. ವಿಡಿಯೋ ಇದೀಗ ವೈರಲ್ ಆಗಿದೆ.

ಮದುವೆ ಮನೆಯಲ್ಲಿ ವರ, ವಧು ಸೇರಿದಂತೆ ಅತಿಥಿಗಳೆಲ್ಲಾ ಅಲಂಕಾರಗೊಂಡು ಸಿದ್ಧರಾಗಿದ್ದಾರೆ. ವರ ಮದುವೆ ಮಂಟಪದಲ್ಲಿ ಕುಳಿತಿದ್ದಾನೆ. ಲ್ಯಾಪ್​ಟಾಪ್​ ಹಿಡಿದು ಕೆಲಸ ಮಾಡುತ್ತಿದ್ದಾನೆ. ವಧು ಮದುವೆಗೆ ಅಲಂಕಾರಗೊಂಡು ಕುಳಿತಿದ್ದಾಳೆ. ವರ ಲ್ಯಾಪ್​ಟಾಪ್​ ಹಿಡಿದು ಕೆಲಸ ಮಾಡುತ್ತಿರುವುದನ್ನು ಕಂಡ ವಧು ಬಾಯಿ ಮೇಲೆ ಕೈ ಇಟ್ಟು ನಗುತ್ತಿದ್ದಾಳೆ. ವಧುವಿನ ರಿಯಾಕ್ಷನ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದೆ.

ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಮೊದಲಿಗೆ ಹಂಚಿಕೊಳ್ಳಲಾಗಿದ್ದು ನೆಟ್ಟಿಗರಿಂದ ನಾನಾ ಪ್ರತಿಕ್ರಿಯೆಗಳು ಬಂದಿವೆ. ಆತನ ಮದುವೆ ಕಾರ್ಯಕ್ರಮದಲ್ಲಿಯೇ ವರನಿಗೆ ಸಮಯವಿಲ್ಲ ಎಂದು ಕೆಲವರು ಹೇಳಿದ್ದಾರೆ. ಇನ್ನು ಕೆಲವರು ನಗುವಿನ ಡಮೋಜಿ ಕಳುಹಿಸುವ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಇದನ್ನೂ ಓದಿ:

Viral Video: ವಧು-ವರರಂತೆ ಸೀರೆ, ಪಂಚೆ ತೊಟ್ಟು ಸಿಂಗಾರಗೊಂಡ ಶ್ವಾನಗಳು! ವಿಡಿಯೋ ವೈರಲ್

Viral Video: ಮದುವೆ ವೇಳೆ ಪ್ರಜ್ಞೆ ತಪ್ಪಿ ಬಿದ್ದ ವಧು; ಕಂಗಾಲಾಗಿ ಮಂಟಪದಿಂದ ಓಡಿಹೋದ ವರ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ