AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು

ಮದುವೆಯೊಂದರಲ್ಲಿ ಮಧು ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ.

ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು
ಸಾಂಕೇತಿಕ ಚಿತ್ರ
Follow us
TV9 Web
| Updated By: Pavitra Bhat Jigalemane

Updated on: Jan 22, 2022 | 12:12 PM

ಮದುವೆಗಳಲ್ಲಿ ವಿಚಿತ್ರ ಘಟನೆಗಳು, ಊಹಿಸಲಾರದ ಸಂದರ್ಭಗಳು ಎದುರಾಗುತ್ತವೆ. ಇದೀಗ  ಮದುವೆಯೊಂದರಲ್ಲಿ ಮಧು (Bride) ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ (Groom) ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ. ನಂತರ ಅದೇ ಮಂಟಪದಲ್ಲಿ ವಧು ತನ್ನ ಸೋದರ ಸಂಬಂಧಿಯೊಂದಿಗೆ ವಿವಾಹವಾದ ಘಟನೆ ನಡೆದಿದೆ. ತಮಿಳುನಾಡಿನ ಪನ್ರುತಿ (Panruti)ಯಲ್ಲಿ ಈ ಘಟನೆ ನಡೆದಿದೆ. ಜನವರಿ 20ರಂದು ಮದುವೆ ನಿಶ್ಚಯವಾಗಿತ್ತು. ಜ.19ರಂದು ರಾತ್ರಿ ರಿಸೆಪ್ಷನ್ ​ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಸುದ್ದಿ ಎಲ್ಲೆಡೆ ವೈರಲ್​ ಆಗಿದೆ. 

ತಮಿಳುನಾಡಿನ ಉದ್ಯಮಿಯೊಬ್ಬರ ಮಗಳ ಮದುವೆಯನ್ನು ಪನ್ರುತಿಯ ಖಾಸಗಿ ಮದುವೆ ಹಾಲ್​ವೊಂದರಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ವಧು  ಡ್ಯಾನ್ಸ್​ ಮಾಡುತ್ತಾ ರೆಸೆಪ್ಷನ್​ ದಿನ ಮಂಟಪಕ್ಕೆ ಬಂದಿದ್ದಾಳೆ. ಈ ವೇಳೆ ವರ ಡ್ಯಾನ್ಸ್​ ಯಾಕೆ ಮಾಡುತ್ತಿದ್ದೀಯಾ ಎಂದು ವಧುವಿನ ಕೆನ್ನೆಗೆ ಹೊಡೆದಿದ್ದಾನೆ. ಇದರಿಂದ ಕೋಪಗೊಂಡ ವಧು ತಿರುಗಿಸಿ ವರನ ಕೆನ್ನೆಗೆ ಹೊಡೆದಿದ್ದಾಳೆ. ಈ ವೇಳೆ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದನ್ನು ಗಮನಿಸಿ ವಧುವಿನ ತಂದೆ ವರ ಮತ್ತು ಆತನ ಕುಟುಂಬವನ್ನು ತನ್ನ ಸಂಬಂಧಿಕರೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮದುವೆ ಹಾಲ್​ನಿಂದ ಹೊರಹೋಗುವಂತೆ ಹೇಳಿದ್ದಾರೆ. ನಂತರ ವಧುವಿನ ತಂದೆ ಸಂಬಂಧಿಕರೊಂದಿಗೆ ಚರ್ಚೆ ನಡೆಸಿ ವಿಲ್ಲುಪುರಮ್​ನ ಸಂಬಂಧಿಕರ ವರನೊಂದಿಗೆ ಅದೇ ದಿನ ಅದೇ ಮಂಟಪದಲ್ಲಿ ಮಗಳ ಮದುವೆಯನ್ನು ಮಾಡಿದ್ದಾರೆ.

ಇನ್ನು ಘಟನೆಯಿಂದ ಅವಮಾನಗೊಂಡ ವರ ಪನ್ರುತಿ ಪೊಲೀಸ್​ ಠಾಣೆಯಲ್ಲಿ ವಧುವಿನ ಕುಟುಂಬದ ವಿರುದ್ಧ ದೂರು ನೀಡಿದ್ದು ಮದುವೆ ಮತ್ತು ರಿಸೆಪ್ಷನ್​ಗೆ ವ್ಯಯಿಸಿದ್ದ 7 ಲಕ್ಷ ರೂಗಳನ್ನು ವಾಪಸ್​ ನೀಡುವಂತೆ ಕೇಳಿದ್ದಾರೆ.  ಪೊಲೀಸರ ಪ್ರಕಾರ ವರ ಚೆನ್ನೈನಲ್ಲಿ ಇಂಜಿನಿಯರ್​ ಆಗಿದ್ದು ವಧು ಸ್ನಾತಕೋತ್ತರ ಪದವೀದರೆ  ಆಗಿದ್ದರು. ಇವರ ನಿಶ್ಚಿತಾರ್ಥವನ್ನು ಎರಡೂ ಕುಟುಂಬಗಳು ಒಪ್ಪಿ ನವೆಂಬರ್​ 6 ರಂದು ನಡೆಸಿದ್ದರು.

ಇದನ್ನೂ ಓದಿ:

ಏಕಕಾಲದಲ್ಲಿ ಹಲವು ಮಹಿಳೆಯರೊಂದಿಗೆ ಡೇಟ್ ಹೋಗುತ್ತಿದ್ದ ಭೂಪ; ವೈರಲ್ ವಿಡಿಯೋದಿಂದ ಬಯಲಾಯ್ತು ನಿಜ ಬಣ್ಣ

ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ