AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು

ಮದುವೆಯೊಂದರಲ್ಲಿ ಮಧು ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ.

ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 22, 2022 | 12:12 PM

Share

ಮದುವೆಗಳಲ್ಲಿ ವಿಚಿತ್ರ ಘಟನೆಗಳು, ಊಹಿಸಲಾರದ ಸಂದರ್ಭಗಳು ಎದುರಾಗುತ್ತವೆ. ಇದೀಗ  ಮದುವೆಯೊಂದರಲ್ಲಿ ಮಧು (Bride) ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ (Groom) ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ. ನಂತರ ಅದೇ ಮಂಟಪದಲ್ಲಿ ವಧು ತನ್ನ ಸೋದರ ಸಂಬಂಧಿಯೊಂದಿಗೆ ವಿವಾಹವಾದ ಘಟನೆ ನಡೆದಿದೆ. ತಮಿಳುನಾಡಿನ ಪನ್ರುತಿ (Panruti)ಯಲ್ಲಿ ಈ ಘಟನೆ ನಡೆದಿದೆ. ಜನವರಿ 20ರಂದು ಮದುವೆ ನಿಶ್ಚಯವಾಗಿತ್ತು. ಜ.19ರಂದು ರಾತ್ರಿ ರಿಸೆಪ್ಷನ್ ​ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಸುದ್ದಿ ಎಲ್ಲೆಡೆ ವೈರಲ್​ ಆಗಿದೆ. 

ತಮಿಳುನಾಡಿನ ಉದ್ಯಮಿಯೊಬ್ಬರ ಮಗಳ ಮದುವೆಯನ್ನು ಪನ್ರುತಿಯ ಖಾಸಗಿ ಮದುವೆ ಹಾಲ್​ವೊಂದರಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ವಧು  ಡ್ಯಾನ್ಸ್​ ಮಾಡುತ್ತಾ ರೆಸೆಪ್ಷನ್​ ದಿನ ಮಂಟಪಕ್ಕೆ ಬಂದಿದ್ದಾಳೆ. ಈ ವೇಳೆ ವರ ಡ್ಯಾನ್ಸ್​ ಯಾಕೆ ಮಾಡುತ್ತಿದ್ದೀಯಾ ಎಂದು ವಧುವಿನ ಕೆನ್ನೆಗೆ ಹೊಡೆದಿದ್ದಾನೆ. ಇದರಿಂದ ಕೋಪಗೊಂಡ ವಧು ತಿರುಗಿಸಿ ವರನ ಕೆನ್ನೆಗೆ ಹೊಡೆದಿದ್ದಾಳೆ. ಈ ವೇಳೆ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದನ್ನು ಗಮನಿಸಿ ವಧುವಿನ ತಂದೆ ವರ ಮತ್ತು ಆತನ ಕುಟುಂಬವನ್ನು ತನ್ನ ಸಂಬಂಧಿಕರೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮದುವೆ ಹಾಲ್​ನಿಂದ ಹೊರಹೋಗುವಂತೆ ಹೇಳಿದ್ದಾರೆ. ನಂತರ ವಧುವಿನ ತಂದೆ ಸಂಬಂಧಿಕರೊಂದಿಗೆ ಚರ್ಚೆ ನಡೆಸಿ ವಿಲ್ಲುಪುರಮ್​ನ ಸಂಬಂಧಿಕರ ವರನೊಂದಿಗೆ ಅದೇ ದಿನ ಅದೇ ಮಂಟಪದಲ್ಲಿ ಮಗಳ ಮದುವೆಯನ್ನು ಮಾಡಿದ್ದಾರೆ.

ಇನ್ನು ಘಟನೆಯಿಂದ ಅವಮಾನಗೊಂಡ ವರ ಪನ್ರುತಿ ಪೊಲೀಸ್​ ಠಾಣೆಯಲ್ಲಿ ವಧುವಿನ ಕುಟುಂಬದ ವಿರುದ್ಧ ದೂರು ನೀಡಿದ್ದು ಮದುವೆ ಮತ್ತು ರಿಸೆಪ್ಷನ್​ಗೆ ವ್ಯಯಿಸಿದ್ದ 7 ಲಕ್ಷ ರೂಗಳನ್ನು ವಾಪಸ್​ ನೀಡುವಂತೆ ಕೇಳಿದ್ದಾರೆ.  ಪೊಲೀಸರ ಪ್ರಕಾರ ವರ ಚೆನ್ನೈನಲ್ಲಿ ಇಂಜಿನಿಯರ್​ ಆಗಿದ್ದು ವಧು ಸ್ನಾತಕೋತ್ತರ ಪದವೀದರೆ  ಆಗಿದ್ದರು. ಇವರ ನಿಶ್ಚಿತಾರ್ಥವನ್ನು ಎರಡೂ ಕುಟುಂಬಗಳು ಒಪ್ಪಿ ನವೆಂಬರ್​ 6 ರಂದು ನಡೆಸಿದ್ದರು.

ಇದನ್ನೂ ಓದಿ:

ಏಕಕಾಲದಲ್ಲಿ ಹಲವು ಮಹಿಳೆಯರೊಂದಿಗೆ ಡೇಟ್ ಹೋಗುತ್ತಿದ್ದ ಭೂಪ; ವೈರಲ್ ವಿಡಿಯೋದಿಂದ ಬಯಲಾಯ್ತು ನಿಜ ಬಣ್ಣ

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ