AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು

ಮದುವೆಯೊಂದರಲ್ಲಿ ಮಧು ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ.

ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 22, 2022 | 12:12 PM

Share

ಮದುವೆಗಳಲ್ಲಿ ವಿಚಿತ್ರ ಘಟನೆಗಳು, ಊಹಿಸಲಾರದ ಸಂದರ್ಭಗಳು ಎದುರಾಗುತ್ತವೆ. ಇದೀಗ  ಮದುವೆಯೊಂದರಲ್ಲಿ ಮಧು (Bride) ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ (Groom) ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ. ನಂತರ ಅದೇ ಮಂಟಪದಲ್ಲಿ ವಧು ತನ್ನ ಸೋದರ ಸಂಬಂಧಿಯೊಂದಿಗೆ ವಿವಾಹವಾದ ಘಟನೆ ನಡೆದಿದೆ. ತಮಿಳುನಾಡಿನ ಪನ್ರುತಿ (Panruti)ಯಲ್ಲಿ ಈ ಘಟನೆ ನಡೆದಿದೆ. ಜನವರಿ 20ರಂದು ಮದುವೆ ನಿಶ್ಚಯವಾಗಿತ್ತು. ಜ.19ರಂದು ರಾತ್ರಿ ರಿಸೆಪ್ಷನ್ ​ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಸುದ್ದಿ ಎಲ್ಲೆಡೆ ವೈರಲ್​ ಆಗಿದೆ. 

ತಮಿಳುನಾಡಿನ ಉದ್ಯಮಿಯೊಬ್ಬರ ಮಗಳ ಮದುವೆಯನ್ನು ಪನ್ರುತಿಯ ಖಾಸಗಿ ಮದುವೆ ಹಾಲ್​ವೊಂದರಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ವಧು  ಡ್ಯಾನ್ಸ್​ ಮಾಡುತ್ತಾ ರೆಸೆಪ್ಷನ್​ ದಿನ ಮಂಟಪಕ್ಕೆ ಬಂದಿದ್ದಾಳೆ. ಈ ವೇಳೆ ವರ ಡ್ಯಾನ್ಸ್​ ಯಾಕೆ ಮಾಡುತ್ತಿದ್ದೀಯಾ ಎಂದು ವಧುವಿನ ಕೆನ್ನೆಗೆ ಹೊಡೆದಿದ್ದಾನೆ. ಇದರಿಂದ ಕೋಪಗೊಂಡ ವಧು ತಿರುಗಿಸಿ ವರನ ಕೆನ್ನೆಗೆ ಹೊಡೆದಿದ್ದಾಳೆ. ಈ ವೇಳೆ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದನ್ನು ಗಮನಿಸಿ ವಧುವಿನ ತಂದೆ ವರ ಮತ್ತು ಆತನ ಕುಟುಂಬವನ್ನು ತನ್ನ ಸಂಬಂಧಿಕರೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮದುವೆ ಹಾಲ್​ನಿಂದ ಹೊರಹೋಗುವಂತೆ ಹೇಳಿದ್ದಾರೆ. ನಂತರ ವಧುವಿನ ತಂದೆ ಸಂಬಂಧಿಕರೊಂದಿಗೆ ಚರ್ಚೆ ನಡೆಸಿ ವಿಲ್ಲುಪುರಮ್​ನ ಸಂಬಂಧಿಕರ ವರನೊಂದಿಗೆ ಅದೇ ದಿನ ಅದೇ ಮಂಟಪದಲ್ಲಿ ಮಗಳ ಮದುವೆಯನ್ನು ಮಾಡಿದ್ದಾರೆ.

ಇನ್ನು ಘಟನೆಯಿಂದ ಅವಮಾನಗೊಂಡ ವರ ಪನ್ರುತಿ ಪೊಲೀಸ್​ ಠಾಣೆಯಲ್ಲಿ ವಧುವಿನ ಕುಟುಂಬದ ವಿರುದ್ಧ ದೂರು ನೀಡಿದ್ದು ಮದುವೆ ಮತ್ತು ರಿಸೆಪ್ಷನ್​ಗೆ ವ್ಯಯಿಸಿದ್ದ 7 ಲಕ್ಷ ರೂಗಳನ್ನು ವಾಪಸ್​ ನೀಡುವಂತೆ ಕೇಳಿದ್ದಾರೆ.  ಪೊಲೀಸರ ಪ್ರಕಾರ ವರ ಚೆನ್ನೈನಲ್ಲಿ ಇಂಜಿನಿಯರ್​ ಆಗಿದ್ದು ವಧು ಸ್ನಾತಕೋತ್ತರ ಪದವೀದರೆ  ಆಗಿದ್ದರು. ಇವರ ನಿಶ್ಚಿತಾರ್ಥವನ್ನು ಎರಡೂ ಕುಟುಂಬಗಳು ಒಪ್ಪಿ ನವೆಂಬರ್​ 6 ರಂದು ನಡೆಸಿದ್ದರು.

ಇದನ್ನೂ ಓದಿ:

ಏಕಕಾಲದಲ್ಲಿ ಹಲವು ಮಹಿಳೆಯರೊಂದಿಗೆ ಡೇಟ್ ಹೋಗುತ್ತಿದ್ದ ಭೂಪ; ವೈರಲ್ ವಿಡಿಯೋದಿಂದ ಬಯಲಾಯ್ತು ನಿಜ ಬಣ್ಣ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!