AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು

ಮದುವೆಯೊಂದರಲ್ಲಿ ಮಧು ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ.

ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು
ಸಾಂಕೇತಿಕ ಚಿತ್ರ
TV9 Web
| Updated By: Pavitra Bhat Jigalemane|

Updated on: Jan 22, 2022 | 12:12 PM

Share

ಮದುವೆಗಳಲ್ಲಿ ವಿಚಿತ್ರ ಘಟನೆಗಳು, ಊಹಿಸಲಾರದ ಸಂದರ್ಭಗಳು ಎದುರಾಗುತ್ತವೆ. ಇದೀಗ  ಮದುವೆಯೊಂದರಲ್ಲಿ ಮಧು (Bride) ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ (Groom) ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ. ನಂತರ ಅದೇ ಮಂಟಪದಲ್ಲಿ ವಧು ತನ್ನ ಸೋದರ ಸಂಬಂಧಿಯೊಂದಿಗೆ ವಿವಾಹವಾದ ಘಟನೆ ನಡೆದಿದೆ. ತಮಿಳುನಾಡಿನ ಪನ್ರುತಿ (Panruti)ಯಲ್ಲಿ ಈ ಘಟನೆ ನಡೆದಿದೆ. ಜನವರಿ 20ರಂದು ಮದುವೆ ನಿಶ್ಚಯವಾಗಿತ್ತು. ಜ.19ರಂದು ರಾತ್ರಿ ರಿಸೆಪ್ಷನ್ ​ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಸುದ್ದಿ ಎಲ್ಲೆಡೆ ವೈರಲ್​ ಆಗಿದೆ. 

ತಮಿಳುನಾಡಿನ ಉದ್ಯಮಿಯೊಬ್ಬರ ಮಗಳ ಮದುವೆಯನ್ನು ಪನ್ರುತಿಯ ಖಾಸಗಿ ಮದುವೆ ಹಾಲ್​ವೊಂದರಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ವಧು  ಡ್ಯಾನ್ಸ್​ ಮಾಡುತ್ತಾ ರೆಸೆಪ್ಷನ್​ ದಿನ ಮಂಟಪಕ್ಕೆ ಬಂದಿದ್ದಾಳೆ. ಈ ವೇಳೆ ವರ ಡ್ಯಾನ್ಸ್​ ಯಾಕೆ ಮಾಡುತ್ತಿದ್ದೀಯಾ ಎಂದು ವಧುವಿನ ಕೆನ್ನೆಗೆ ಹೊಡೆದಿದ್ದಾನೆ. ಇದರಿಂದ ಕೋಪಗೊಂಡ ವಧು ತಿರುಗಿಸಿ ವರನ ಕೆನ್ನೆಗೆ ಹೊಡೆದಿದ್ದಾಳೆ. ಈ ವೇಳೆ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದನ್ನು ಗಮನಿಸಿ ವಧುವಿನ ತಂದೆ ವರ ಮತ್ತು ಆತನ ಕುಟುಂಬವನ್ನು ತನ್ನ ಸಂಬಂಧಿಕರೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮದುವೆ ಹಾಲ್​ನಿಂದ ಹೊರಹೋಗುವಂತೆ ಹೇಳಿದ್ದಾರೆ. ನಂತರ ವಧುವಿನ ತಂದೆ ಸಂಬಂಧಿಕರೊಂದಿಗೆ ಚರ್ಚೆ ನಡೆಸಿ ವಿಲ್ಲುಪುರಮ್​ನ ಸಂಬಂಧಿಕರ ವರನೊಂದಿಗೆ ಅದೇ ದಿನ ಅದೇ ಮಂಟಪದಲ್ಲಿ ಮಗಳ ಮದುವೆಯನ್ನು ಮಾಡಿದ್ದಾರೆ.

ಇನ್ನು ಘಟನೆಯಿಂದ ಅವಮಾನಗೊಂಡ ವರ ಪನ್ರುತಿ ಪೊಲೀಸ್​ ಠಾಣೆಯಲ್ಲಿ ವಧುವಿನ ಕುಟುಂಬದ ವಿರುದ್ಧ ದೂರು ನೀಡಿದ್ದು ಮದುವೆ ಮತ್ತು ರಿಸೆಪ್ಷನ್​ಗೆ ವ್ಯಯಿಸಿದ್ದ 7 ಲಕ್ಷ ರೂಗಳನ್ನು ವಾಪಸ್​ ನೀಡುವಂತೆ ಕೇಳಿದ್ದಾರೆ.  ಪೊಲೀಸರ ಪ್ರಕಾರ ವರ ಚೆನ್ನೈನಲ್ಲಿ ಇಂಜಿನಿಯರ್​ ಆಗಿದ್ದು ವಧು ಸ್ನಾತಕೋತ್ತರ ಪದವೀದರೆ  ಆಗಿದ್ದರು. ಇವರ ನಿಶ್ಚಿತಾರ್ಥವನ್ನು ಎರಡೂ ಕುಟುಂಬಗಳು ಒಪ್ಪಿ ನವೆಂಬರ್​ 6 ರಂದು ನಡೆಸಿದ್ದರು.

ಇದನ್ನೂ ಓದಿ:

ಏಕಕಾಲದಲ್ಲಿ ಹಲವು ಮಹಿಳೆಯರೊಂದಿಗೆ ಡೇಟ್ ಹೋಗುತ್ತಿದ್ದ ಭೂಪ; ವೈರಲ್ ವಿಡಿಯೋದಿಂದ ಬಯಲಾಯ್ತು ನಿಜ ಬಣ್ಣ

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ