AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು

ಮದುವೆಯೊಂದರಲ್ಲಿ ಮಧು ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ.

ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 22, 2022 | 12:12 PM

Share

ಮದುವೆಗಳಲ್ಲಿ ವಿಚಿತ್ರ ಘಟನೆಗಳು, ಊಹಿಸಲಾರದ ಸಂದರ್ಭಗಳು ಎದುರಾಗುತ್ತವೆ. ಇದೀಗ  ಮದುವೆಯೊಂದರಲ್ಲಿ ಮಧು (Bride) ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ (Groom) ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ. ನಂತರ ಅದೇ ಮಂಟಪದಲ್ಲಿ ವಧು ತನ್ನ ಸೋದರ ಸಂಬಂಧಿಯೊಂದಿಗೆ ವಿವಾಹವಾದ ಘಟನೆ ನಡೆದಿದೆ. ತಮಿಳುನಾಡಿನ ಪನ್ರುತಿ (Panruti)ಯಲ್ಲಿ ಈ ಘಟನೆ ನಡೆದಿದೆ. ಜನವರಿ 20ರಂದು ಮದುವೆ ನಿಶ್ಚಯವಾಗಿತ್ತು. ಜ.19ರಂದು ರಾತ್ರಿ ರಿಸೆಪ್ಷನ್ ​ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಸುದ್ದಿ ಎಲ್ಲೆಡೆ ವೈರಲ್​ ಆಗಿದೆ. 

ತಮಿಳುನಾಡಿನ ಉದ್ಯಮಿಯೊಬ್ಬರ ಮಗಳ ಮದುವೆಯನ್ನು ಪನ್ರುತಿಯ ಖಾಸಗಿ ಮದುವೆ ಹಾಲ್​ವೊಂದರಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ವಧು  ಡ್ಯಾನ್ಸ್​ ಮಾಡುತ್ತಾ ರೆಸೆಪ್ಷನ್​ ದಿನ ಮಂಟಪಕ್ಕೆ ಬಂದಿದ್ದಾಳೆ. ಈ ವೇಳೆ ವರ ಡ್ಯಾನ್ಸ್​ ಯಾಕೆ ಮಾಡುತ್ತಿದ್ದೀಯಾ ಎಂದು ವಧುವಿನ ಕೆನ್ನೆಗೆ ಹೊಡೆದಿದ್ದಾನೆ. ಇದರಿಂದ ಕೋಪಗೊಂಡ ವಧು ತಿರುಗಿಸಿ ವರನ ಕೆನ್ನೆಗೆ ಹೊಡೆದಿದ್ದಾಳೆ. ಈ ವೇಳೆ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದನ್ನು ಗಮನಿಸಿ ವಧುವಿನ ತಂದೆ ವರ ಮತ್ತು ಆತನ ಕುಟುಂಬವನ್ನು ತನ್ನ ಸಂಬಂಧಿಕರೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮದುವೆ ಹಾಲ್​ನಿಂದ ಹೊರಹೋಗುವಂತೆ ಹೇಳಿದ್ದಾರೆ. ನಂತರ ವಧುವಿನ ತಂದೆ ಸಂಬಂಧಿಕರೊಂದಿಗೆ ಚರ್ಚೆ ನಡೆಸಿ ವಿಲ್ಲುಪುರಮ್​ನ ಸಂಬಂಧಿಕರ ವರನೊಂದಿಗೆ ಅದೇ ದಿನ ಅದೇ ಮಂಟಪದಲ್ಲಿ ಮಗಳ ಮದುವೆಯನ್ನು ಮಾಡಿದ್ದಾರೆ.

ಇನ್ನು ಘಟನೆಯಿಂದ ಅವಮಾನಗೊಂಡ ವರ ಪನ್ರುತಿ ಪೊಲೀಸ್​ ಠಾಣೆಯಲ್ಲಿ ವಧುವಿನ ಕುಟುಂಬದ ವಿರುದ್ಧ ದೂರು ನೀಡಿದ್ದು ಮದುವೆ ಮತ್ತು ರಿಸೆಪ್ಷನ್​ಗೆ ವ್ಯಯಿಸಿದ್ದ 7 ಲಕ್ಷ ರೂಗಳನ್ನು ವಾಪಸ್​ ನೀಡುವಂತೆ ಕೇಳಿದ್ದಾರೆ.  ಪೊಲೀಸರ ಪ್ರಕಾರ ವರ ಚೆನ್ನೈನಲ್ಲಿ ಇಂಜಿನಿಯರ್​ ಆಗಿದ್ದು ವಧು ಸ್ನಾತಕೋತ್ತರ ಪದವೀದರೆ  ಆಗಿದ್ದರು. ಇವರ ನಿಶ್ಚಿತಾರ್ಥವನ್ನು ಎರಡೂ ಕುಟುಂಬಗಳು ಒಪ್ಪಿ ನವೆಂಬರ್​ 6 ರಂದು ನಡೆಸಿದ್ದರು.

ಇದನ್ನೂ ಓದಿ:

ಏಕಕಾಲದಲ್ಲಿ ಹಲವು ಮಹಿಳೆಯರೊಂದಿಗೆ ಡೇಟ್ ಹೋಗುತ್ತಿದ್ದ ಭೂಪ; ವೈರಲ್ ವಿಡಿಯೋದಿಂದ ಬಯಲಾಯ್ತು ನಿಜ ಬಣ್ಣ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್