ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು

ಮದುವೆಯೊಂದರಲ್ಲಿ ಮಧು ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ.

ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ಕಪಾಳಮೋಕ್ಷ ಮಾಡಿದ ವರ; ಅದೇ ಮಂಟಪದಲ್ಲಿ ಇನ್ನೊಂದು ವರನನ್ನು ಮದುವೆಯಾದ ವಧು
ಸಾಂಕೇತಿಕ ಚಿತ್ರ
Follow us
| Updated By: Pavitra Bhat Jigalemane

Updated on: Jan 22, 2022 | 12:12 PM

ಮದುವೆಗಳಲ್ಲಿ ವಿಚಿತ್ರ ಘಟನೆಗಳು, ಊಹಿಸಲಾರದ ಸಂದರ್ಭಗಳು ಎದುರಾಗುತ್ತವೆ. ಇದೀಗ  ಮದುವೆಯೊಂದರಲ್ಲಿ ಮಧು (Bride) ಮಂಟಪಕ್ಕೆ ಆಗಮಿಸುವ ವೇಳೆ ಡ್ಯಾನ್ಸ್​ ಮಾಡಿದ್ದಕ್ಕೆ ವಧುವಿಗೆ ವರ (Groom) ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಬಳಿಕ ಆಕೆಯೂ ತಿರುಗಿಸಿ ವರನ ಕೆನ್ನೆಗೆ ಬಾರಿಸಿದ್ದಾಳೆ. ನಂತರ ಅದೇ ಮಂಟಪದಲ್ಲಿ ವಧು ತನ್ನ ಸೋದರ ಸಂಬಂಧಿಯೊಂದಿಗೆ ವಿವಾಹವಾದ ಘಟನೆ ನಡೆದಿದೆ. ತಮಿಳುನಾಡಿನ ಪನ್ರುತಿ (Panruti)ಯಲ್ಲಿ ಈ ಘಟನೆ ನಡೆದಿದೆ. ಜನವರಿ 20ರಂದು ಮದುವೆ ನಿಶ್ಚಯವಾಗಿತ್ತು. ಜ.19ರಂದು ರಾತ್ರಿ ರಿಸೆಪ್ಷನ್ ​ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಸುದ್ದಿ ಎಲ್ಲೆಡೆ ವೈರಲ್​ ಆಗಿದೆ. 

ತಮಿಳುನಾಡಿನ ಉದ್ಯಮಿಯೊಬ್ಬರ ಮಗಳ ಮದುವೆಯನ್ನು ಪನ್ರುತಿಯ ಖಾಸಗಿ ಮದುವೆ ಹಾಲ್​ವೊಂದರಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ವಧು  ಡ್ಯಾನ್ಸ್​ ಮಾಡುತ್ತಾ ರೆಸೆಪ್ಷನ್​ ದಿನ ಮಂಟಪಕ್ಕೆ ಬಂದಿದ್ದಾಳೆ. ಈ ವೇಳೆ ವರ ಡ್ಯಾನ್ಸ್​ ಯಾಕೆ ಮಾಡುತ್ತಿದ್ದೀಯಾ ಎಂದು ವಧುವಿನ ಕೆನ್ನೆಗೆ ಹೊಡೆದಿದ್ದಾನೆ. ಇದರಿಂದ ಕೋಪಗೊಂಡ ವಧು ತಿರುಗಿಸಿ ವರನ ಕೆನ್ನೆಗೆ ಹೊಡೆದಿದ್ದಾಳೆ. ಈ ವೇಳೆ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದನ್ನು ಗಮನಿಸಿ ವಧುವಿನ ತಂದೆ ವರ ಮತ್ತು ಆತನ ಕುಟುಂಬವನ್ನು ತನ್ನ ಸಂಬಂಧಿಕರೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮದುವೆ ಹಾಲ್​ನಿಂದ ಹೊರಹೋಗುವಂತೆ ಹೇಳಿದ್ದಾರೆ. ನಂತರ ವಧುವಿನ ತಂದೆ ಸಂಬಂಧಿಕರೊಂದಿಗೆ ಚರ್ಚೆ ನಡೆಸಿ ವಿಲ್ಲುಪುರಮ್​ನ ಸಂಬಂಧಿಕರ ವರನೊಂದಿಗೆ ಅದೇ ದಿನ ಅದೇ ಮಂಟಪದಲ್ಲಿ ಮಗಳ ಮದುವೆಯನ್ನು ಮಾಡಿದ್ದಾರೆ.

ಇನ್ನು ಘಟನೆಯಿಂದ ಅವಮಾನಗೊಂಡ ವರ ಪನ್ರುತಿ ಪೊಲೀಸ್​ ಠಾಣೆಯಲ್ಲಿ ವಧುವಿನ ಕುಟುಂಬದ ವಿರುದ್ಧ ದೂರು ನೀಡಿದ್ದು ಮದುವೆ ಮತ್ತು ರಿಸೆಪ್ಷನ್​ಗೆ ವ್ಯಯಿಸಿದ್ದ 7 ಲಕ್ಷ ರೂಗಳನ್ನು ವಾಪಸ್​ ನೀಡುವಂತೆ ಕೇಳಿದ್ದಾರೆ.  ಪೊಲೀಸರ ಪ್ರಕಾರ ವರ ಚೆನ್ನೈನಲ್ಲಿ ಇಂಜಿನಿಯರ್​ ಆಗಿದ್ದು ವಧು ಸ್ನಾತಕೋತ್ತರ ಪದವೀದರೆ  ಆಗಿದ್ದರು. ಇವರ ನಿಶ್ಚಿತಾರ್ಥವನ್ನು ಎರಡೂ ಕುಟುಂಬಗಳು ಒಪ್ಪಿ ನವೆಂಬರ್​ 6 ರಂದು ನಡೆಸಿದ್ದರು.

ಇದನ್ನೂ ಓದಿ:

ಏಕಕಾಲದಲ್ಲಿ ಹಲವು ಮಹಿಳೆಯರೊಂದಿಗೆ ಡೇಟ್ ಹೋಗುತ್ತಿದ್ದ ಭೂಪ; ವೈರಲ್ ವಿಡಿಯೋದಿಂದ ಬಯಲಾಯ್ತು ನಿಜ ಬಣ್ಣ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ