AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಮದುವೆ ಮೆರವಣಿಗೆ ನಿಲ್ಲಿಸಿ, ಟ್ರಾಫಿಕ್ ಕ್ಲಿಯರ್ ಮಾಡಿ ಆ್ಯಂಬುಲೆನ್ಸ್ ಹೋಗಲು ದಾರಿ ಮಾಡಿಕೊಟ್ಟ ಮದುಮಗ

ಮದುವೆ ಸೀಸನ್ ಆರಂಭವಾಗುತ್ತಿದ್ದಂತೆ ಕೆಲ ಮದುವೆಗಳು ತನ್ನ ವಿಶೇಷತೆಗಳಿಂದ ಸದ್ದು ಮಾಡುತ್ತವೆ. ಕೆಲವರು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರೆ, ಇನ್ನು ಕೆಲವರು ಸರಳವಾಗಿ ವಿವಾಹವಾಗುತ್ತಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ರಸ್ತೆಯಲ್ಲಿ ಸಿಂಗಾರಗೊಂಡ ಮದುಮಗನ ಕಾರು ರಸ್ತೆಯಲ್ಲಿ ನಿಂತಿದೆ. ಇತ್ತ ರಸ್ತೆಯಲ್ಲಿ ನಿಂತಿರುವ ಮದುಮಗನು ಒಂದೊಳ್ಳೆ ಕೆಲಸ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಇದಕ್ಕೆ ಸಂಬಂಧ ಪಟ್ಟ ಈ ವಿಡಿಯೋವೊಂದು ವೈರಲ್ ಆಗಿದ್ದು ನೆಟ್ಟಿಗರು ಈತನ ಕೆಲಸವನ್ನು ಹಾಡಿ ಹೊಗಳಿದ್ದಾರೆ.

Viral : ಮದುವೆ ಮೆರವಣಿಗೆ ನಿಲ್ಲಿಸಿ, ಟ್ರಾಫಿಕ್ ಕ್ಲಿಯರ್ ಮಾಡಿ ಆ್ಯಂಬುಲೆನ್ಸ್  ಹೋಗಲು ದಾರಿ ಮಾಡಿಕೊಟ್ಟ ಮದುಮಗ
ವೈರಲ್​​ ವಿಡಿಯೋ Image Credit source: Instagram
ಸಾಯಿನಂದಾ
| Edited By: |

Updated on: Apr 24, 2025 | 5:12 PM

Share

ಮದುವೆ (marriage) ಎಂದರೆ ಸಂಭ್ರಮ, ಪ್ರತಿಯೊಬ್ಬರು ತಮ್ಮ ಮದುವೆಯ ಬಗ್ಗೆ ನೂರಾರು ಕನಸುಗಳನ್ನು ಕಂಡಿರುತ್ತಾರೆ. ಅದರಲ್ಲಿಯೂ ಕೆಲವರಂತೂ ತಮ್ಮ ಮದುವೆ ಸಮಾರಂಭವನ್ನು ಸ್ಪೆಷಲ್ ಆಗಿ ಆಚರಿಸಲು ಏನೇನೋ ಟ್ರೆಂಡ್ ಫಾಲೋ ಮಾಡುತ್ತಿರುತ್ತಾರೆ. ದಿಬ್ಬಣದಲ್ಲಿ ವಿಭಿನ್ನವಾಗಿ ಎಂಟ್ರಿ ಕೊಡುವ ಮೂಲಕ ಸುದ್ದಿಯಾಗುವುದೇ ಹೆಚ್ಚು. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮದುವೆ ಮೆರವಣಿಗೆಯೊಂದು ಮದುವೆ ಮಂಟಪದ ಕಡೆಗೆ ಹೋಗುತ್ತಿದೆ. ಆದರೆ ಮದುಮಗನು ಅಲಂಕಾರಗೊಂಡಿರುವ ಕಾರನ್ನು ನಿಲ್ಲಿಸಿ ರಸ್ತೆಯಲ್ಲಿದ್ದ ವಾಹನಗಳನ್ನು ಹಿಂದೆ ಸರಿಯಲು ಹೇಳಿ ಆ್ಯಂಬುಲೆನ್ಸ್ ಹೋಗಲು ದಾರಿ ಮಾಡಿಕೊಟ್ಟಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು ghantaa ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಇದರಲ್ಲಿ ರಸ್ತೆಯಲ್ಲಿ ಅಲಂಕಾರಗೊಂಡ ಮದುಮಗನ ಕಾರೊಂದು ನಿಂತಿರುವುದನ್ನು ಕಾಣಬಹುದು. ಮದುಮಗನ ಅಲಂಕಾರದಲ್ಲಿರುವ ವ್ಯಕ್ತಿಯೂ ರಸ್ತೆಯಲ್ಲಿ ನಿಂತು ಉಳಿದ ವಾಹನಗಳನ್ನು ಆ ಕಡೆ ಸರಿಯಲು ಹೇಳುತ್ತಿದ್ದಾನೆ. ಈ ವಿಡಿಯೋದ ಪ್ರಾರಂಭದಲ್ಲಿ ಈ ಮದುಮಗನ ಹೀಗೇಕೆ ಮಾಡುತ್ತಿದ್ದಾನೆ ಎಂದೆನಿಸುತ್ತದೆ. ಆದರೆ ಈ ವಿಡಿಯೋದ ಕೊನೆಗೆ ಆ್ಯಂಬುಲೆನ್ಸ್ ರಸ್ತೆಯಲ್ಲಿ ಹೋಗುತ್ತಿರುವುದನ್ನು ನೋಡಬಹುದು. ಆ್ಯಂಬುಲೆನ್ಸ್ ಹೋಗಲು ದಾರಿ ಮಾಡಿಕೊಡುವ ಸಲುವಾಗಿ ಈ ಮದುಮಗನು ಉಳಿದ ವಾಹನಗಳನ್ನು ಆ ಕಡೆ ಸರಿಯಲು ಹೇಳಿದ್ದಾನೆ ಎನ್ನುವುದು ಸ್ಪಷ್ಟವಾಗುತ್ತದೆ.

ಇದನ್ನೂ ಓದಿ
Image
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
Image
ಅಬ್ಬಬಾ! ಸೀರೆ ಧರಿಸಿ ಜಿಮ್ ಗೆ ಬಂದ ಮಹಿಳೆ, ಮಾಡಿದ ಕಸರತ್ತು ನೋಡಿ 
Image
ಪ್ರಿಯಕರನ್ನು ಟ್ರಂಕ್​​ನಲ್ಲಿ ಬಚ್ಚಿಟ್ಟ ವಿವಾಹಿತ ಮಹಿಳೆ,ಮುಂದೇನಾಯ್ತು ನೋಡಿ
Image
ಮದುವೆ ಮಂಟಪದಿಂದ ಅರ್ಧಕ್ಕೆ ಎದ್ದು ಹೋದ ಮದುಮಗ

ಇದನ್ನೂ ಓದಿ : Viral : ಹೋಮ್ ವರ್ಕ್ ನಿಂದ ತಪ್ಪಿಸಿಕೊಳ್ಳಲು ಈ ಪುಟಾಣಿಯೂ ಅಮ್ಮನಿಗೆ ಹೇಳಿದ ನೆಪ ನೋಡಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ :

View this post on Instagram

A post shared by ghantaa (@ghantaa)

ಈ ವಿಡಿಯೋವೊಂದು ಒಂಬತ್ತು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು ನೆಟ್ಟಿಗರು ಈ ಮದುಮಗನು ಮಾಡಿದ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಬಳಕೆದಾರರೊಬ್ಬರು, ‘ಕೆಲಸ ಮೊದಲು, ಈ ವ್ಯಕ್ತಿಯೂ ಟ್ರಾಫಿಕ್ ಪೊಲೀಸ್ ಆಗಿದ್ದೀರಬಹುದು’ ಎಂದಿದ್ದಾರೆ. ಇನ್ನೊಬ್ಬ ಬಳಕೆದಾರರು, ಮದುವೆಗಿಂತ ಜೀವ ಮುಖ್ಯ ಎಂದು ಸಾರಿದ ವ್ಯಕ್ತಿ ಈತ. ಮಾನವೀಯತೆಗೆ ಮಿಡಿಯುವ ವ್ಯಕ್ತಿಗಳು ಇಂದಿಗೂ ಇದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರ, ನಿಮ್ಮ ಮೇಲಿನ ಗೌರವ ಹೆಚ್ಚಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ