AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ಪ್ರತಿಯೊಬ್ಬರ ಜೀವನದಲ್ಲಿ ಮದುವೆ ಎನ್ನುವುದು ಸಂಭ್ರಮದ ಕ್ಷಣ. ಹೀಗಾಗಿ ಆ ಕ್ಷಣವನ್ನು ವಿಶೇಷವಾಗಿಸಲು ಎಲ್ಲರೂ ಬಯಸುತ್ತಾರೆ. ಮದುವೆಯ ಕೆಲವು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವಧುವು ಮಂಟಪಕ್ಕೆ ಬರುತ್ತಿದ್ದಂತೆ ದೃಷ್ಟಿ ತೆಗೆದು ಕೈಹಿಡಿದು ಕರೆದು ಬರುವ ವಿಡಿಯೋವೊಂದು ವೈರಲ್ ಆಗಿದ್ದು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಸಾಯಿನಂದಾ
| Edited By: |

Updated on: Oct 05, 2024 | 3:20 PM

Share

ಮದುವೆ ಒಂದು ಪವಿತ್ರ ಬಂಧ. ಎರಡು ಮನಸ್ಸುಗಳ ಬೆಸುಗೆ. ಹೀಗಾಗಿ ತಮ್ಮ ಮದುವೆ ಕ್ಷಣಗಳನ್ನು ಸುಮಧುರವಾಗಿಸಲು ಬಯಸುತ್ತಾರೆ. ಭಾರತೀಯ ಮದುವೆಯಲ್ಲಿ ವಧು ವರನು ಒಟ್ಟಿಗೆ ನೃತ್ಯ ಮಾಡುವುದು, ಸಂಬಂಧಿಕರು ಡಾನ್ಸ್ ಮೂಲಕ ವಧು ವರನನ್ನು ಮದುವೆ ಮಂಟಪಕ್ಕೆ ಕರೆತರುವ ಕ್ಷಣಗಳನ್ನು ನೋಡಬಹುದ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ವಧುವು ಮಂಟಪಕ್ಕೆ ಬರುತ್ತಿದ್ದಂತೆ ದೃಷ್ಟಿ ತೆಗೆದು ಆಕೆಯ ಕೈಹಿಡಿದು ವರನೇ ಕರೆದುಕೊಂಡು ಬಂದಿದ್ದಾನೆ.

Zoopgo ಹೆಸರಿನ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ವಧುವು ಗುಲಾಬಿ ಬಣ್ಣದ ಲೆಹೆಂಗಾ ತೊಟ್ಟು ಸುಂದರವಾಗಿ ಕಾಣಿಸುತ್ತಿದ್ದಾಳೆ. ಆಕೆಯನ್ನು ನೋಡಿದ ವರನು, ಕೈಯಲ್ಲಿ ಹಣವನ್ನು ಹಿಡಿದು ಆಕೆಯ ದೃಷ್ಟಿ ತೆಗೆದಿದ್ದಾನೆ. ಈ ವೇಳೆಯಲ್ಲಿ ವಧುವು ವರನನ್ನು ನೋಡುತ್ತಾ ನಗುತ್ತಾ ನಿಂತಿದ್ದಾಳೆ. ಆ ಬಳಿಕ ಕೈಹಿಡಿದು ಆಕೆಯನ್ನು ಮಂಟಪಕ್ಕೆ ಕರೆದುಕೊಂಡು ಬಂದಿದ್ದಾನೆ.

ಇದನ್ನೂ ಓದಿ: 10 ವರ್ಷಗಳ ಕಾಲ ಗುಹೆಯೊಳಗಿದ್ದ 110ರ ವೃದ್ಧ, ಇದು ರಾಮನ ಪರಮ ಭಕ್ತನ ರೋಮಾಂಚನಕಾರಿ ಕಥೆ

ಈ ವಿಡಿಯೋಗೆ “ಪ್ರತಿಯೊಬ್ಬ ವಧು ತನ್ನ ವರನು ತನ್ನನ್ನು ಹೀಗೆ ಸ್ವಾಗತಿಸಬೇಕೆಂದು ಕನಸು ಕಾಣುತ್ತಾಳೆ.” ಎಂದು ಶೀರ್ಷಿಕೆಯನ್ನು ಬರೆಯಲಾಗಿದೆ. ಈ ವಿಡಿಯೋ 31 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡು ಕೊಂಡಿದ್ದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರೂ ಪ್ರತಿಕ್ರಿಯೆ ನೀಡಿದ್ದು, ಆ ಹುಡುಗಿಗೆ ಒಳ್ಳೆಯ ವರ ಸಿಕ್ಕಿದ್ದಾನೆ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಮತ್ತೊಬ್ಬರು, ‘ ಆ ಹುಡುಗನನ್ನು ಮದುವೆಯಾಗುತ್ತಿರುವ ಆಕೆಯು ನಿಜಕ್ಕೂ ಅದೃಷ್ಟವಂತಳು’ ಎಂದಿದ್ದಾರೆ. ಇನ್ನೊಬ್ಬರು ‘ ವರನು ಹಣವನ್ನು ವ್ಯರ್ಥ ಮಾಡಲಿಲ್ಲ, ಅದನ್ನು ಯಾರಿಗೂ ನೀಡಲಿಲ್ಲ ‘ ಎಂದಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!