Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮಂಟಪದಿಂದ ಹತ್ತಾರು ಬಾರಿ ಎದ್ದು ಹೋಗ್ತಿದ್ದ ವರ, ಅನುಮಾನ ಬಂದು ಹಿಂದೆ ಹೋದಾಗ ಕಂಡಿದ್ದೇನು?

ದೆಹಲಿಯ ಸಾಹಿಬಾಬಾದ್​ನಲ್ಲಿ ಮದುವೆಯೊಂದು ನಿಶ್ಚಯವಾಗಿತ್ತು. ಶಾಸ್ತ್ರಗಳೆಲ್ಲಾ ನಡೆಯುತ್ತಿತ್ತು. ಆದರೆ ವರ ಪದೇ ಪದೇ ಮಂಟಪದಿಂದ ಎದ್ದು ಹೋಗುತ್ತಿದ್ದ. ವಧು ಏನೇ ಕೇಳಿದರೂ ಯಾವ ಉತ್ತರವನ್ನೂ ನೀಡುತ್ತಿರಲಿಲ್ಲ. ಆಗ ವಧು ತನ್ನ ಕಡೆಯವರನ್ನು ಆತನ ಹಿಂದೆ ಹೋಗುವಂತೆ ಹೇಳಿದಾಗ ಅಲ್ಲಿ ನಡೆಯುತ್ತಿರುವುದನ್ನು ಕಂಡು ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ.

ಮದುವೆ ಮಂಟಪದಿಂದ ಹತ್ತಾರು ಬಾರಿ ಎದ್ದು ಹೋಗ್ತಿದ್ದ ವರ, ಅನುಮಾನ ಬಂದು ಹಿಂದೆ ಹೋದಾಗ ಕಂಡಿದ್ದೇನು?
ಮದುವೆ
Follow us
ನಯನಾ ರಾಜೀವ್
|

Updated on: Dec 03, 2024 | 2:38 PM

ದೆಹಲಿಯ ಸಾಹಿಬಾಬಾದ್​ನಲ್ಲಿ ಮದುವೆಯೊಂದು ನಿಶ್ಚಯವಾಗಿತ್ತು. ಶಾಸ್ತ್ರಗಳೆಲ್ಲಾ ಸುಸೂತ್ರವಾಗಿ ನಡೆಯುತ್ತಿದ್ದವು. ಆದರೆ ವರ ಪದೇ ಪದೇ ಮಂಟಪದಿಂದ ಎದ್ದು ಹೋಗುತ್ತಿದ್ದ. ವಧು ಏನೇ ಕೇಳಿದರೂ ಯಾವ ಉತ್ತರವನ್ನೂ ನೀಡುತ್ತಿರಲಿಲ್ಲ. ಆಗ ವಧು ತನ್ನ ಕಡೆಯವರನ್ನು ಆತನ ಹಿಂದೆ ಹೋಗುವಂತೆ ಹೇಳಿದಾಗ ಅಲ್ಲಿ ನಡೆಯುತ್ತಿರುವುದನ್ನು ಕಂಡು ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ.

ಮೊದಲು ಮೊದಲು ವಾಶ್​ರೂಮ್​ಗೆ ಹೋಗುತ್ತಿರಬೇಕು ಎಂದುಕೊಂಡಿದ್ದರು. ಆದರೆ ಆತ ಸ್ನೇಹಿತರೊಂದಿಗೆ ಕುಳಿತುಕೊಂಡು ಮಾದಕದ್ರವ್ಯ ಸೇವಿಸುತ್ತಿರುವುದು ಕಂಡು ಎಲ್ಲರೂ ಗಾಬರಿಗೊಂಡರು. ಮದುವೆಯ ಈ ದಿನಕ್ಕಾಗಿ ತಿಂಗಳಾನುಗಟ್ಟಲೆ ಗಂಡು-ಹೆಣ್ಣಿಬ್ಬರೂ ತುಂಬಾ ತಯಾರಿ ನಡೆಸಿದ್ದರು.ಆದರೆ ಮದುವೆಯ ದಿನ ನಡೆದ ಘಟನೆ ಅನಿರೀಕ್ಷಿತ ತಿರುವು ಪಡೆದುಕೊಂಡಿತು.

ಆತ ಪದೇ ಪದೇ ಹೊರಗೆ ಹೋಗಿಬಂದಾಗಲೂ ವಿಚಿತ್ರವಾಗಿ ವರ್ತಿಸುತ್ತಿದ್ದ ಸರಿಯಾಗಿ ನಡೆಯಲು ಕೂಡ ಆತನಿಂದ ಸಾಧ್ಯವಾಗುತ್ತಿರಲಿಲ್ಲ.  ಸತ್ಯ ಬೆಳಕಿಗೆ ಬಂದಾಗ ಮದುವೆಮನೆ ಗೊಂದಲದ ಗೂಡಾಯಿತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಲ್ಲಿಗೆ ಕರೆಸಿದರು. ವರನ ಕುಟುಂಬದವರು 10 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: Viral: ಕನ್ನಡ Vs ಹಿಂದಿ; ಬೆಂಗಳೂರಿನ ಆಟೋ ಚಾಲಕರು ಹೆಚ್ಚು ಪ್ರಾಮುಖ್ಯತೆ ಕೊಟ್ಟಿದ್ದು ಯಾರಿಗೆ ನೋಡಿ…

ಮದುವೆಯ ದಿನ ವರ ತನ್ನ ಸ್ನೇಹಿತರೊಂದಿಗೆ ಮಾದಕದ್ರವ್ಯ ಸೇವಿಸಿದ್ದ, ಅದನ್ನು ನೋಡಿ ವಧು ಮದುವೆಯಾಗಲು ನಿರಾಕರಿಸಿ ಮದುವೆಯ ಮೆರವಣಿಗೆಯನ್ನು ಹಿಂದಿರುಗಿಸಿದ್ದಾಳೆ. ವರನ ಕಡೆಯವರು ಗಲಾಟೆ ಸೃಷ್ಟಿಸಿದಾಗ ಪೊಲೀಸರಿಗೆ ಕರೆ ಮಾಡಬೇಕಾಯಿತು.

ವರನ ಕಡೆಯವರ ವಿರುದ್ಧ ವಧುವಿನ ತಾಯಿ ಪ್ರಕರಣ ದಾಖಲಿಸಿದ್ದಾರೆ. ಶಹೀದ್‌ನಗರದ ನಿವಾಸಿಯಾಗಿರುವ ಮಹಿಳೆ, ದೆಹಲಿಯ ಗಾಂಧಿನಗರದ ನಿವಾಸಿ ಅವಿನಾಶ್‌ನೊಂದಿಗೆ ತನ್ನ ಮಗಳ ಮದುವೆಯನ್ನು ನಿಶ್ಚಯಿಸಲಾಗಿತ್ತು ಎಂದು ಹೇಳಿದ್ದಾರೆ. ನವೆಂಬರ್ 27 ರಂದು ತಿಲಾ ಮೋಡ್ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯಲ್ಲಿ ಮದುವೆಯ ವಿಧಿವಿಧಾನಗಳನ್ನು ಪ್ರಾರಂಭಿಸಲಾಯಿತು. ಜಯಮಾಲಾ ವೇಳೆ ವರ ತನ್ನ ಸ್ನೇಹಿತರೊಂದಿಗೆ ಕುಡಿದು ಬಂದಿದ್ದ ಎನ್ನಲಾಗಿದೆ.

ಇದಾದ ಮೇಲೆ ವಧು ವರನಿಗೆ ಮಾದಕ ವ್ಯಸನಿ ಎಂದು ಹೇಳಿ ಮದುವೆಯಾಗಲು ನಿರಾಕರಿಸಿದ್ದಾಳೆ. ಈ ವೇಳೆ ವರನ ಕಡೆಯವರು ಗಲಾಟೆ ಮಾಡಿ ಹೊಡೆದಾಡಿಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್