AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ವಧುವಿನ ಮನೆ ಮೇಲೆ ನೋಟಿನ ಮಳೆಗೈಯಲು ವಿಮಾನವನ್ನೇ ಬಾಡಿಗೆ ಪಡೆದ ವರನ ತಂದೆ, ವಿಡಿಯೋ ವೈರಲ್

ಸೋಶಿಯಲ್ ಮೀಡಿಯಾದಲ್ಲಿ ವಿಲಕ್ಷಣ ವಿವಾಹದ ಪ್ರವೃತ್ತಿಗಳನ್ನು ನೋಡುತ್ತಿರುತ್ತೇವೆ. ಕೆಲವು ಮದುವೆ ಸಮಾರಂಭಗಳು ವಿಶೇಷತೆಗಳಿಂದ ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಈ ವೈರಲ್ ಆಗಿರುವ ವಿಡಿಯೋ ಪಾಕಿಸ್ತಾನದಲ್ಲಿ ವರನ ತಂದೆ ತನ್ನ ಮಗನ ಮದುವೆಗೆ ವಿಮಾನವನ್ನು ಬಾಡಿಗೆಗೆ ತೆಗೆದುಕೊಂಡು ವಧುವಿನ ಮನೆಯ ಮೇಲೆ ಲಕ್ಷಾಂತರ ರೂಪಾಯಿ ನೋಟಿನ ಮಳೆಗೈದಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುವ ಮೂಲಕ ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.

ಸಾಯಿನಂದಾ
| Edited By: |

Updated on: Dec 28, 2024 | 1:58 PM

Share

ಮದುವೆ ಎಂಬುದು ಪ್ರತಿಯೊಬ್ಬರ ಬದುಕಿನ ಅಮೂಲ್ಯ ಕ್ಷಣವಾಗಿದ್ದು, ಈ ಕ್ಷಣವನ್ನು ಸ್ಮರಣೀಯವನ್ನಾಗಿಸಲು ಬಯಸುತ್ತಾರೆ. ಮದುವೆ ಸಮಾರಂಭವನ್ನು ಸ್ಪೆಷಲ್ ಆಗಿ ಆಚರಿಸುವ ಮೂಲಕ ಸುದ್ದಿಯಾಗುತ್ತಾರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವರನ ತಂದೆ ತನ್ನ ಮಗನ ಮದುವೆಗೆ ವಿಮಾನವನ್ನು ಬಾಡಿಗೆಗೆ ಪಡೆದು ವಧುವಿನ ಮನೆಯ ಮೇಲೆ ನೋಟಿನ ಮಳೆಗೈದಿದ್ದಾರೆ. ಆಕಾಶದಲ್ಲಿ ಹಾರಾಡುತ್ತಿರುವ ವಿಮಾನದಿಂದ ನೋಟನ್ನು ಬೀಳಿಸುತ್ತಿರುವ ದೃಶ್ಯವು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ. ಈ ಘಟನೆಯೂ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹೈದರಾಬಾದ್‌ನಲ್ಲಿ ನಡೆದಿದೆ ಎನ್ನಲಾಗಿದೆ.

ಈ ವಿಡಿಯೋವನ್ನು amalqa ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ವರನ ತಂದೆ ತನ್ನ ಮಗನ ಮದುವೆಗೆ ವಿಮಾನವನ್ನು ಬಾಡಿಗೆಗೆ ತೆಗೆದುಕೊಂಡು ವಧುವಿನ ಮನೆಯ ಮೇಲೆ ನೋಟಿನ ಮಳೆಗೈದಿದ್ದಾರೆ. ವರನು ತನ್ನ ತಂದೆಯ ಋಣವನ್ನು ತನ್ನ ಜೀವನದುದ್ದಕ್ಕೂ ತೀರಿಸುತ್ತಾನೆ ಎಂದು ಶೀರ್ಷಿಕೆ ನೀಡಲಾಗಿದೆ. ಈ ವೀಡಿಯೊದಲ್ಲಿ ವಿಮಾನವು ಆಕಾಶದಲ್ಲಿ ಹಾರುತ್ತಿರುವುದನ್ನು ಸ್ಪಷ್ಟವಾಗಿ ನೋಡಬಹುದು. ಸ್ವಲ್ಪ ಸಮಯದ ನಂತರ ಈ ವಿಮಾನದಿಂದ ರಾಶಿ ರಾಶಿ ನೋಟುಗಳು ಬೀಳುವುದನ್ನು ನೋಡಬಹುದು.

ಈ ವಿಡಿಯೋವು ಲಕ್ಷಾನುಗಟ್ಟಲೇ ವೀಕ್ಷಣೆಯನ್ನು ಪಡೆದುಕೊಂಡಿದ್ದು, ನೆಟ್ಟಿಗರು ನಾನಾ ರೀತಿಯ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಬಳಕೆದಾರರೊಬ್ಬರು, ‘ವರದಕ್ಷಿಣೆಯೂ ಸಮಾಜಕ್ಕೆ ಬಲವಾದ ಹೊಡೆತವನ್ನು ಉಂಟು ಮಾಡುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಈ ತಂದೆಯಿಂದ ಭವಿಷ್ಯದಲ್ಲಿ ಹುಡುಗ ಇಷ್ಟು ಹೊರೆ ಹೊರುತ್ತಾನೆ ಎಂದು ಯೋಚಿಸಿರಲಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಅಂತಾರಾಷ್ಟ್ರೀಯ ಹಣಕಾಸು ನಿಧಿಯು ಪಾಕಿಸ್ತಾನಕ್ಕೆ ಸಾಲ ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕು’ ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!