AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ಮದುವೆ ಪತ್ರಿಕೆ ಹಂಚಲು ಹೋಗಿದ್ದ ವರ ನಾಪತ್ತೆ; ಕಾಲುವೆಯಲ್ಲಿ ಮೃತದೇಹ ಪತ್ತೆ

ಹನುಮಕೊಂಡ ಟೌನ್‌ನ ಗೋಕುಲ್ ನಗರ ಪ್ರದೇಶ ನಿವಾಸಿಯಾಗಿರುವ ಕೃಷ್ಣತೇಜ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು. ನರಸಂಪೇಟೆಯ ಯುವತಿಯೊಂದಿಗೆ ಮಾರ್ಚ್ 16 ರಂದು ಮದುವೆ ನಿಶ್ಚಯವಾಗಿತ್ತು. ಎರಡೂ ಕುಟುಂಬಗಳ ಒಪ್ಪಿಗೆಯಿಂದಲೇ ಮದುವೆಗೆ ತಯಾರಿ ನಡೆಸಲಾಗಿತ್ತು.

Telangana: ಮದುವೆ ಪತ್ರಿಕೆ ಹಂಚಲು ಹೋಗಿದ್ದ ವರ ನಾಪತ್ತೆ; ಕಾಲುವೆಯಲ್ಲಿ ಮೃತದೇಹ ಪತ್ತೆ
ಅಕ್ಷತಾ ವರ್ಕಾಡಿ
|

Updated on: Mar 12, 2024 | 5:19 PM

Share

ಇನ್ನೇನು ಮದುವೆಗೆ ನಾಲ್ಕೇ ದಿನವಿರುವಾಗಲೇ ಮದುಮಗ ನಾಪತ್ತೆಯಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮದುವೆ ಪತ್ರಿಕೆ ಹಂಚಲು ಹೋಗಿದ್ದ ವರ ಎಷ್ಟೇ ಹೊತ್ತಾದರೂ ಮನೆಗೆ ಬರದೇ ಇದ್ದಾಗ ಮನೆಯವರು ಆತಂಕಗೊಂಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದಾರೆ. ಅಂತಿಮವಾಗಿ ಎಸ್‌ಆರ್‌ಎಸ್‌ಪಿ ಕಾಲುವೆಯಲ್ಲಿ ಕೃಷ್ಣ ತೇಜ್ ಮೃತದೇಹ ಪತ್ತೆಯಾಗಿದ್ದು, ಮದುವೆ ತಯಾರಿಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಕೃಷ್ಣ ತೇಜ್ ಅವರ ಮದುವೆ ಮಾರ್ಚ್ 16 ರಂದು ಮದುವೆ ನಡೆಯಬೇಕಿತ್ತು. ಹೀಗಾಗಿ ಮದುವೆ ಆಮಂತ್ರಣ ಪತ್ರ ಹಂಚಲು ಹೋಗಿದ್ದ ಹೋಗಿದ್ದ ಕೃಷ್ಣ ತೇಜ್ ಶವವಾಗಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಹನುಮಕೊಂಡ ಟೌನ್‌ನ ಗೋಕುಲ್ ನಗರ ಪ್ರದೇಶ ನಿವಾಸಿಯಾಗಿರುವ ಕೃಷ್ಣತೇಜ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ನರಸಂಪೇಟೆಯ ಯುವತಿಯೊಂದಿಗೆ ಮಾರ್ಚ್ 16 ರಂದು ಮದುವೆ ನಿಶ್ಚಯವಾಗಿತ್ತು. ಎರಡೂ ಕುಟುಂಬಗಳ ಒಪ್ಪಿಗೆಯಿಂದಲೇ ಮದುವೆಗೆ ತಯಾರಿ ನಡೆಸಲಾಗಿತ್ತು.

ಇದನ್ನೂ ಓದಿ: ಮಾತ್ರೆ ಪ್ಯಾಕೆಟ್​​ ಮೇಲೆ ಕೆಂಪು ಗೆರೆ ಏಕೆ ಇರುತ್ತದೆ? ಇದರ ಅರ್ಥವೇನು?

ಸಂಬಂಧಿಕರಿಗೆ ಮದುವೆಯ ಆಮಂತ್ರಣ ಪತ್ರಿಕೆ ಹಂಚಲು ಹೋಗಿದ್ದ ಕೃಷ್ಣತೇಜ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಇದೇ ವೇಳೆ ಎಸ್‌ಆರ್‌ಎಸ್‌ಪಿ ಕಾಲುವೆ ಬಳಿ ಅವರ ಬೈಕ್‌ ಪತ್ತೆಯಾಗಿದೆ. ಗಜ ಈಜುಗಾರರಿಗೆ ಅನುಮಾನಾಸ್ಪದವಾಗಿ ಮೃತದೇಹ ಕಾಣಿಸಿದೆ. ಆದರೆ ಇದು ಆತ್ಮಹತ್ಯೆಯೋ ಅಥವಾ ಬೇರೆ ಕಾರಣವೋ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?