Viral Video : ಮದುವೆಗೆ ಬಂದವರು ಆಧಾರ ಕಾರ್ಡ್​ ತೋರಿಸಿದರೆ ಮಾತ್ರ ಔತಣ

Aadhar Card : ಈ ವಿಡಿಯೋ ನೋಡಿದ ನೆಟ್ಟಿಗರೊಬ್ಬರು, ‘ಬದುಕಿಗೆ ಆಧಾರ್ ಕಾರ್ಡ್ ಬಹಳ ಅಮೂಲ್ಯ. ಮದುವೆ, ಸ್ಮಶಾನ ಇನ್ನೂ ಏನೆಲ್ಲಕ್ಕೂ..’ ಎಂದು ಟೀಕಿಸಿದ್ದಾರೆ.

Viral Video : ಮದುವೆಗೆ ಬಂದವರು ಆಧಾರ ಕಾರ್ಡ್​ ತೋರಿಸಿದರೆ ಮಾತ್ರ ಔತಣ
ಸಾಂದರ್ಭಿಕ ಚಿತ್ರ
Follow us
| Updated By: ಶ್ರೀದೇವಿ ಕಳಸದ

Updated on:Sep 27, 2022 | 2:26 PM

Viral Video : ವಿಮಾನ ನಿಲ್ದಾಣದಲ್ಲಿ, ರೈಲಿನಲ್ಲಿ, ಬ್ಯಾಂಕಿನಲ್ಲಿ, ಪೋಸ್ಟ್ ಆಫೀಸಿನಲ್ಲಿ, ಆಸ್ಪತ್ರೆಯಲ್ಲಿ, ಶಾಲೆಕಾಲೇಜುಗಳಲ್ಲಿ, ಆಫೀಸುಗಳಲ್ಲಿ ಹೀಗೆ ಎಲ್ಲೆಲ್ಲಿ ಆಧಾರ​ ಕಾರ್ಡ್​ ಕೇಳುತ್ತಾರೆಂದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಮದುವೆಯಲ್ಲಿ? ಹೌದು ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಮದುವೆ ನಡೆಯುತ್ತಿದ್ದ ವೇಳೆ ಆಹ್ವಾನಿಸಿದ ಅತಿಥಿಗಳಿಗೆ ಆಧಾರ ಕಾರ್ಡ್ ತೋರಿಸಲು ಕೇಳಲಾಗಿದೆ. ನಮ್ಮ ಭಾರತೀಯ ಮದುವೆಗಳಲ್ಲಿ ಏನೆಲ್ಲ ನಡೆಯುತ್ತದೆ ಎನ್ನುವುದನ್ನು ತಿಳಿದುಕೊಳ್ಳುವುದು ಇನ್ನೂ ಮುಗಿಯುತ್ತಲೇ ಇಲ್ಲ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಹಸನ್‌ಪುರದಲ್ಲಿ ಇಬ್ಬರು ಸಹೋದರಿಯರ ಮದುವೆ ಒಂದೇ ಸ್ಥಳದಲ್ಲಿ ಏರ್ಪಾಡಾಗಿತ್ತು. ಮದುವೆಯ ಔತಣ ಏರ್ಪಡಿಸಿದ್ದ ಜಾಗಕ್ಕೆ ಪ್ರವೇಶಿಸುವ ಮೊದಲು ಅತಿಥಿಗಳಿಗೆ ಆಧಾರ ಕಾರ್ಡ್​ ತೋರಿಸುವಂತೆ ಕೇಳಲಾಯಿತು. ಭೂರಿಭೋಜನ ಇದ್ದಾಗ ಪೈಪೋಟಿ ಇದ್ದದ್ದೇ. ಈ ಗದ್ದಲ ತಪ್ಪಿಸಲು ಆಧಾರ್ ಕಾರ್ಡ್​ನ ಉಪಾಯವನ್ನು ಹೂಡಲಾಗಿತ್ತು ಎಂದು ವರದಿಯಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನೂರಾರು ಜನರು ಈ ವಿಷಯವನ್ನು ತಮಾಷೆಯಾಗಿ ರೀಟ್ವೀಟ್ ಮಾಡಿದ್ದಾರೆ. ‘ಬದುಕಿಗೆ ಆಧಾರ ಕಾರ್ಡ್ ಬಹಳ ಅಮೂಲ್ಯ. ಮದುವೆ, ಸ್ಮಶಾನ ಇನ್ನೂ ಏನೆಲ್ಲಕ್ಕೂ’ ಎಂದು ಟೀಕಿಸಿದ್ದಾರೆ ಒಬ್ಬ ಟ್ವಿಟರ್ ಖಾತೆದಾರರು.

ಎಂಥಾ ಅದ್ಭುತ ಆಲೋಚನೆಯಲ್ಲವೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:24 pm, Tue, 27 September 22

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್