AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness Records: 3 ಸೆಕೆಂಡುಗಳ ಒಳಗೆ A ಯಿಂದ Z ವರೆಗೆ ಟೈಪ್​ ಮಾಡಿ ಗಿನ್ನೆಸ್ ದಾಖಲೆ ಬರೆದ ಭಾರತೀಯ

ಕೇವಲ ಮೂರು ಸೆಕೆಂಡುಗಳ ಒಳಗೆ ಒಟ್ಟು 26 ಅಕ್ಷರಗಳನ್ನು ಟೈಪ್​​ ಮಾಡಿದ್ದು, ಇವರ ಸಾಧನೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಣ್ಣು ಮಿಟುಕುವಷ್ಟರ ಒಳಗಡೆ Aಯಿಂದ Z ವರೆಗೆ ಟೈಪ್​​ ಮಾಡಿದ್ದು, ಇವರ ಈ ಸಾಧನೆಯ ವಿಡಿಯೋ ಇಲ್ಲಿದೆ ನೋಡಿ.

Guinness Records: 3 ಸೆಕೆಂಡುಗಳ ಒಳಗೆ A ಯಿಂದ Z ವರೆಗೆ ಟೈಪ್​ ಮಾಡಿ ಗಿನ್ನೆಸ್ ದಾಖಲೆ ಬರೆದ ಭಾರತೀಯ
Guinness Book of World Records
ಅಕ್ಷತಾ ವರ್ಕಾಡಿ
|

Updated on: May 03, 2024 | 5:44 PM

Share

ಹೈದರಾಬಾದ್: ಪ್ರತೀ ದಿನ ಕಂಪ್ಯೂಟರ್​ ಮುಂದೆ ಕುಳಿತು ಟೈಪ್​ ಮಾಡಿ ಮಾಡಿ ಬೋರಾಗಿದ್ಯಾ? ಹಾಗಿದ್ರೆ ಈ ಚಾಲೆಂಜ್​ ಪ್ರಯತ್ನಿಸಿ. ಹೌದು ಹೈದರಾಬಾದ್​​ನ ಎಸ್‌ಕೆ ಅಶ್ರಫ್ ಎಂಬ ವ್ಯಕ್ತಿಯೊಬ್ಬರು ಕ್ಷಣಾರ್ಧದಲ್ಲಿ ಅಂದರೆ ಕೇವಲ 3 ಸೆಕೆಂಡ್ ಒಳಗೆ ಇಂಗ್ಲೀಷ್​ನ A-Z ಒಟ್ಟು 26 ಅಕ್ಷರಗನ್ನು ಟೈಪ್​​ ಮಾಡಿ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಸದ್ಯ ಇವರ ಸಾಧನೆಯನ್ನು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಅಧಿಕೃತ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

ಕೇವಲ ಮೂರು ಸೆಕೆಂಡುಗಳ ಒಳಗೆ ಒಟ್ಟು 26 ಅಕ್ಷರಗಳನ್ನು ಟೈಪ್​​ ಮಾಡಿದ್ದು, ಇವರ ಸಾಧನೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಣ್ಣು ಮಿಟುಕುವಷ್ಟರ ಒಳಗಡೆ Aಯಿಂದ Z ವರೆಗೆ ಟೈಪ್​​ ಮಾಡಿದ್ದು, ಇವರ ಈ ಸಾಧನೆಯ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ವಿಡಿಯಯೋದಲ್ಲಿ ಅಶ್ರಫ್ ಅವರು ಟೈಪ್​ ಮಾಡಲು ಸಿದ್ಧವಾಗಿ ಕುಳಿತಿರುವುದನ್ನು ಕಾಣಬಹುದು. ಸಮಯ ಪ್ರಾರಂಭವಾಗುತ್ತಿದ್ದಂತೆ 3 ಸೆಕೆಂಡ್​​ಗಳ ಒಳಗೆ Zನಿಂದ ಪ್ರಾರಂಭಿಸಿ A ವೆರೆಗೆ ಟೈಪ್​ ಮಾಡಿರುವುದು ಸೆರೆಯಾಗಿದೆ.

ಈ ವಿಡಿಯೋ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಅವರ ಅದ್ಭುತ ಪ್ರದರ್ಶನಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಮೇ 2 ರಂದು ಹಂಚಿಕೊಳ್ಳಲಾದ ವೀಡಿಯೊ ಈಗಾಗಲೇ 41 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದುಕೊಂಡಿದೆ. ಇದಲ್ಲದೇ ಒಂದೇ ದಿನದಲ್ಲಿ 10 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು