AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರದಿಂದ ಬೇಸತ್ತು ಅಧಿಕಾರಿಯ ಮೇಲೆ ನೋಟಿನ ಸುರಿಮಳೆಗೈದು ಆಕ್ರೋಶ ವ್ಯಕ್ತಪಡಿಸಿದ ಜನ; ವಿಡಿಯೋ ವೈರಲ್

ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂದು ಜಾಗೃತಿ ಮೂಡಿಸಿದರೂ ಕೂಡಾ ಅದೆಷ್ಟೋ ಕಡೆ ಇಂದಿಗೂ ಜನರು ತಮ್ಮ ಕೆಲಸ ಆಗ್ಬೇಕು ಅಂದ್ರೆ ಅಧಿಕಾರಿಗಳಿಗೆ ಲಂಚ ಕೊಡ್ಬೇಕಾದ ಪರಿಸ್ಥಿತಿ ಇದೆ. ಇಲ್ಲೊಂದು ಕಡೆ ಇಂತಹದ್ದೇ ಘಟನೆ ನಡೆದಿದ್ದು, ಅಧಿಕಾರಿಯ ಲಂಚದಾಹಕ್ಕೆ ಬೇಸತ್ತು ಹೋದ ಜನ ಕೊನೆಗೆ ಆ ಅಧಿಕಾರಿ ಮೇಲೆ ನೋಟನ್ನು ಎಸೆದು ಪ್ರತಿಭಟನೆ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಭ್ರಷ್ಟಾಚಾರದಿಂದ ಬೇಸತ್ತು ಅಧಿಕಾರಿಯ ಮೇಲೆ ನೋಟಿನ ಸುರಿಮಳೆಗೈದು ಆಕ್ರೋಶ ವ್ಯಕ್ತಪಡಿಸಿದ ಜನ; ವಿಡಿಯೋ ವೈರಲ್
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 16, 2025 | 12:54 PM

ಭ್ರಷ್ಟಾಚಾರ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಈ ನಿಟ್ಟಿನಲ್ಲಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂದು ಒಂದಷ್ಟು ಜಾಗೃತಿಯನ್ನು ಸಹ ಮೂಡಿಸಲಾಗಿದೆ. ಹೀಗಿದ್ರೂ ಕೂಡಾ ಭ್ರಷ್ಟಾಚಾರಕ್ಕೆ ಮಾತ್ರ ಕೊನೆಯೇ ಇಲ್ಲದಂತಾಗಿದೆ. ಅದೆಷ್ಟೋ ಕಡೆ ಇಂದಿಗೂ ಜನರು ತಮ್ಮ ಕೆಲಸ ಆಗ್ಬೇಕು ಅಂದ್ರೆ ಅಧಿಕಾರಿಗಳಿಗೆ ಲಂಚ ಕೊಡ್ಬೇಕಾದ ಪರಿಸ್ಥಿತಿ ಇದೆ. ಇಲ್ಲೊಂದು ಕಡೆ ಇಂತಹದ್ದೇ ಘಟನೆ ನಡೆದಿದ್ದು, ಅಧಿಕಾರಿಯ ಲಂಚದಾಹಕ್ಕೆ ಬೇಸತ್ತು ಹೋದ ಜನ ಕೊನೆಗೆ ಆ ಅಧಿಕಾರಿ ಮೇಲೆ ನೋಟನ್ನು ಎಸೆದು ಪ್ರತಿಭಟನೆ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಗುಜರಾತ್‌ನ ಧೋಲ್ಕಾ ಪ್ರದೇಶದಲ್ಲಿ ನಡೆದ ಘಟನೆ ಇದಾಗಿದ್ದು, ನೋಟನ್ನು ಎಸೆಯುವ ಮೂಲಕ ಭ್ರಷ್ಟ ಅಧಿಕಾರಿಯ ವಿರುದ್ಧ ಜನ ಪ್ರತಿಭಟನೆಯನ್ನು ಮಾಡಿದ್ದಾರೆ. ಹೌದು ಸರ್ಕಾರಿ ಕಚೇರಿಯ ಒಳಗೆ ನುಗ್ಗಿ ಕುರ್ಚಿಯ ಮೇಲೆ ಕುಳಿದಿದ್ದಂತಹ ಭ್ರಷ್ಟ ಅಧಿಕಾರಿಯ ಕುತ್ತಿಗೆಗೆ ಭಿತ್ತಿ ಪತ್ರವನ್ನು ನೇತು ಹಾಕಿ ನೋಟನ್ನು ಎಸೆದು ತಗೊಳ್ಳಿ ಇದನ್ನೂ ತಿನ್ನಿ, ಎಂದು ಹೇಳುವ ಮೂಲಕ ಕೋಪ ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಜನವರಿ 9, 2025 ರಂದು ನಡೆದಿದ್ದು, ಮತ್ತು ಪ್ರತಿಭಟನೆಯಲ್ಲಿ ಜನ ಅಸಲಿ ನೋಟುಗಳನ್ನು ಎಸೆದದ್ದಲ್ಲ ಎಂಬ ಮಾಹಿತಿ ಸಿಕ್ಕಿದೆ.

kalamkeechot ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ತೆಗೆದುಕೊಳ್ಳಿ, ಅಕ್ರಮವಾಗಿ ಸಂಪಾದಿಸಿದ ಹಣವನ್ನು ಎಷ್ಟು ತಿನ್ನುತ್ತೀರಿ? ಎಂದು ಜೋರು ಮಾಡಿ ನೋಟುಗಳನ್ನು ಭ್ರಷ್ಟ ಅಧಿಕಾರಿ ಮುಖಕ್ಕೆ ಎಸೆಯುವ ಮೂಲಕ ಜನ ಆಕ್ರೋಶ ವ್ಯಕ್ತಪಡಿಸುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪರೀಕ್ಷೆಯಲ್ಲಿ ನಕಲು ಮಾಡಿದ್ದಲ್ಲದೆ ಪ್ರಶ್ನಿಸಿದ ಶಿಕ್ಷಕನ ಕೆನ್ನೆಗೆ ಬಾರಿಸಿದ ವಿದ್ಯಾರ್ಥಿ; ಆಘಾತಕಾರಿ ವಿಡಿಯೋ ವೈರಲ್‌

ಜನವರಿ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5.9 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈಗಂತೂ ಭ್ರಷ್ಟಾಚಾರ ಎಂಬ ಕ್ಯಾನ್ಸರ್‌ ಮಹಾಮಾರಿಯಂತೆ ಎಲ್ಲೆಡೆ ಹರಡಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಮೊದಲು ಇಂತಹ ಭ್ರಷ್ಟ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಬೇಕುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂತಹವರನ್ನು ಕೆಲಸದಿಂದ ವಜಾಗೊಳಿಸದಿದ್ದರೆ, ಭ್ರಷ್ಟಚಾರಕ್ಕೆ ಕೊನೆಯೇ ಇರುವುದಿಲ್ಲʼ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ