
ಅಹಮದಾಬಾದ್, ಮೇ 17: ಪಾನಿಪುರಿ ಅಂದ್ರೆ ಎಲ್ಲರಿಗೂ ಇಷ್ಟನೇ. ಮಕ್ಕಳಿಂದ ಹಿಡಿದು ದೊಡ್ಡವವರೆಗೂ ಬಾಯಿಚಪ್ಪರಿಸಿಕೊಂಡು ತಿಂತಾರೆ. ಆದರೆ ಈ ಸ್ಟೋರಿ ಓದಿದ್ರೆ ನೀವು ಪಾನಿಪುರಿ ತಿನ್ನೋಕೆ ಹೋಗಲ್ಲ. ಹೌದು, ಅಹಮದಾಬಾದ್ನ (Ahmedabad) ರಾಣಿಪ್ ಪ್ರದೇಶದಲ್ಲಿ ಕೃಷ್ಣ ಪಾನಿಪುರಿ ತಿನ್ನುತ್ತಿದ್ದ ಯುವತಿಯೊಬ್ಬಳಿಗೆ ಪಾನಿಪುರಿಯೊಳಗೆ ಮೂಳೆಯ ತುಣುಕು ಪತ್ತೆಯಾಗಿದೆ. ಇದನ್ನು ನೋಡಿ ಯುವತಿ ಶಾಕ್ ಆಗಿದ್ದು, ಅಂಗಡಿ ಮಾಲೀಕನನ್ನು ಪ್ರಶ್ನಿಸಿದ್ದಾಳೆ. ಈ ಘಟನೆಯ ಸಂಬಂಧಿತ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೀದಿ ಆಹಾರದ ಸ್ವಚ್ಛತೆ ಹಾಗೂ ಗುಣಮಟ್ಟದ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ.
ಪಾನಿಪುರಿ ತಿನ್ನುತ್ತಿದ್ದ ಯುವತಿಗೆ ಪಾನಿಪುರಿಯೊಳಗೆ ಮೂಳೆಯ ಪತ್ತೆಯಾಗಿದೆ. ಈ ಬಗ್ಗೆ ಯುವತಿ ಅಂಗಡಿಯವನ ಬಳಿ ಪ್ರಶ್ನೆ ಮಾಡಿದ್ದಾಳೆ. ಅಂಗಡಿಯವನು ಅದು ಮೂಳೆಯಲ್ಲ ಮರದ ತುಂಡು ಎಂದು ವಾದಿಸಿದ್ದಾನೆ.
ಇದನ್ನೂ ಓದಿ: ಮಾನವೀಯತೆ ಅಂದ್ರೆ ಇದು: ಸುಡುವ ಬಿಸಿಲಿನಿಂದ ರಕ್ಷಿಸಲು ತನ್ನ ಅಂಗಡಿಯೊಳಗೆ ಬೀದಿ ನಾಯಿಗಳಿಗೆ ಆಶ್ರಯ ನೀಡಿದ ವ್ಯಕ್ತಿ
ಕೊನೆಗೆ ಮಾಲೀಕನನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಮೂಳೆ ಎಂದು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾನೆ. ಈ ಘಟನೆಯನ್ನು ಯುವತಿ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾಳೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ