AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊರೆವ ಹಿಮದ ನಡುವೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ ಹಕ್ಕಿ

ಮದುವೆ ಸೀಸನ್ ಶುರುವಾಗಿಬಿಟ್ಟಿದೆ. ಎಲ್ಲಿ ನೋಡಿದರೂ ವಿವಾಹ ಸಮಾರಂಭಗಳದ್ದೇ ಸುದ್ದಿ. ಈ ನಡುವೆ ಇಲ್ಲೊಂದು ವಿಶೇಷ ಮದುವೆ ಸಮಾರಂಭವೊಂದು ನೆಟ್ಟಿಗರ ಹುಬ್ಬೇರಿಸುವಂತೆ ಮಾಡಿದೆ. ಹೌದು ಗುಜರಾತ್ ಮೂಲದ ಜೋಡಿ ಹಕ್ಕಿಯೊಂದು ಕೊರೆವ ಹಿಮ ಮತ್ತು ಚಳಿಯ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿಶಿಷ್ಟ ವಿವಾಹದ ಕುರಿತ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Viral Video: ಕೊರೆವ ಹಿಮದ ನಡುವೆ ಹೊಸ ಜೀವನಕ್ಕೆ ಕಾಲಿಟ್ಟ  ಜೋಡಿ ಹಕ್ಕಿ
ಮಾಲಾಶ್ರೀ ಅಂಚನ್​
| Edited By: |

Updated on: Feb 28, 2024 | 6:56 PM

Share

ವಿವಾಹವು ಪ್ರತಿಯೊಬ್ಬ ವ್ಯಕ್ತಿಯ ಜೀವನದ ಪ್ರಮುಖ ಘಟ್ಟಗಳಲ್ಲಿ ಒಂದಾಗಿದೆ. ಈ ಒಂದು ವಿಶೇಷ ಕ್ಷಣವನ್ನು ಜೀವನಪರ್ಯಂತ ಸ್ಮರಣೀಯವಾಗಿರಿಸಲು ಹೆಚ್ಚಿನವರು ತಮ್ಮ ವಿವಾಹವನ್ನು ಬಹಳ ವಿಶೇಷವಾಗಿ ನಡೆಸಬೇಕೆಂದು ಬಯಸುತ್ತಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಬಹಳ ಜನಪ್ರಿಯವಾಗುತ್ತಿದೆ. ಜೋಡಿ ಹಕ್ಕಿಗಳು ವಿದೇಶದಲ್ಲಿನ ತಮ್ಮ ಡ್ರೀಮ್ ಪ್ಲೇಸ್ ಅಥವಾ ಹತ್ತಿರದಲ್ಲಿನ ಬೀಚ್ ಇತ್ಯಾದಿ ಸುಂದರ ಸ್ಥಳಗಳಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳಬೇಕೆಂದು ಬಯಸುತ್ತಾರೆ. ಈ ಡೆಸ್ಟಿನೇಷನ್ ವೆಡ್ಡಿಂಗ್ ಈಗೀನ ಟ್ರೆಂಡ್ ಆಗಿಬಿಡ್ಡಿದೆ. ಹೌದು ಸೆಲೆಬ್ರಿಟಿಗಳಿಂದ ಹಿಡಿದು ಸಾಮಾನ್ಯ ಜನರವರೆಗೂ ಹೆಚ್ಚಿನವರು ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳಲು ಇಷ್ಟಪಡುತ್ತಾರೆ. ಇದೀಗ ಇಲ್ಲೊಂದು ಜೋಡಿ ಕೂಡ ತಮ್ಮ ಮದುವೆಯ ಕ್ಷಣವನ್ನು ಜೀವನಪರ್ಯಂತ ಸ್ಮರಣೀಯವಾಗಿರಿಸುವ ಸಲುವಾಗಿ ಕೊರೆವ ಹಿಮದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿಶಿಷ್ಟ ಡೆಸ್ಟಿನೇಷನ್ ವೆಡ್ಡಿಂಗ್ ಕುರಿತ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಕೊರೆವ ಹಿಮದ ನಡುವೆ ವಿವಾಹ ಕಾರ್ಯಕ್ರಮ ಜರಗುತ್ತಿರುವ ದೃಶ್ಯವನ್ನು ಕಾಣಬಹುದು. ವಧುವಿನ ಆಸೆಯಂತೆ ಗುಜರಾತ್ ಮೂಲದ ಈ ಜೋಡಿ ಹಕ್ಕಿ ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿ ಕಣಿವೆಯಲ್ಲಿ ಕೊರೆವ ಹಿಮದ ನಡುವೆ ನವ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈ ವಿಶೇಷ ವಿವಾಹದ ಕುರಿತ ವಿಡಿಯೋ ತುಣುಕೊಂದನ್ನು ಅಜಯ್ ಬನ್ಯಾಲ್ (@iAjay_Banyal) ಎಂಬವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, “ವಿಶೇಷ ಮದುವೆ! ವಧುವಿನ ಆಸೆಯ ಮೇರೆಗೆ ಗುಜರಾತಿನ ಜೋಡಿ ಹಕ್ಕಿಯೊಂದು ಹಿಮಾಚಲ ಪ್ರದೇಶದ ಸ್ಪಿತಿಯಲ್ಲಿ 25 ಡಿಗ್ರಿ ಸೆಲ್ಸಿಯಸ್ ತಪಮಾನದಿಂದ ಕೂಡಿದ ಕೊರೆವ ಚಳಿಯ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದು ಡೆಸ್ಟಿನೇಷನ್ ವೆಡ್ಡಿಂಗ್ ಗೆ ಉತ್ತಮ ಉದಾಹರಣೆಯಾಗಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಬಿಳಿ ಹಿಮದ ರಾಶಿಯ ನಡುವೆ ಜೋಡಿ ಹಕ್ಕಿಯೊಂದು ವೈವಾಹಿಕ ಜೀವನಕ್ಕೆ ಕಾಲಿಡುವಂತಹ ಸುಂದರವಾದ ದೃಶ್ಯವನ್ನು ಕಾಣಬಹುದು. ಮಧುವಿನ ಆಸೆಯಂತೆ ಒಂದಷ್ಟು ಆತ್ಮೀಯರ ಸಮ್ಮುಖದಲ್ಲಿ ಸಿಂಪಲ್ ಆಗಿ ಜೋಡಿ ಹಕ್ಕಿಯೊಂದು ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿ ಕಣಿವೆಯಲ್ಲಿ ಕೊರೆಯುವ ಚಳಿಯಲ್ಲಿ ಹಿಮದ ರಾಶಿಯ ನಡುವೆ ವಿಶಿಷ್ಟವಾಗಿ ವಿವಾಹವಾಗಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಲಡಾಖ್​​​​ನ ಪ್ಯಾಂಗೊಂಗ್ ತ್ಸೋ ಸರೋವರದಲ್ಲಿ ನಡೆದ ವಿಶ್ವದ ಅತ್ಯಂತ ಸವಾಲಿನ ಮ್ಯಾರಥಾನ್

ಫೆಬ್ರವರಿ 24 ರಂದು ಹಂಚಿಕೊಳ್ಳಲಾದ ಈ ವಿಡಿಯೋ 24 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ ಹಾಗೂ ಹಲವಾರು ಕಾಮೆಂಟ್ಸ್ಗಳೂ ಹರಿದು ಬಂದಿವೆ. ಒಬ್ಬ ಬಳಕೆದಾರರು ʼಸ್ಪಿತಿಯಲ್ಲಿ ಮದುವೆಯಾಗಬೇಕೆಂಬುವುದು ನನ್ನ ಕನಸು ಕೂಡಾ ಹೌದುʼ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಸಿರಿವಂತರು ಹಣವನ್ನು ಖರ್ಚು ಮಾಡಲು ಇಂತಹ ಟ್ರಿಕ್ಸ್ಗಳನ್ನು ಅನುಸರಿಸುತ್ತಿರುತ್ತಾರೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼದಯವಿಟ್ಟು ಸುಂದರವಾದ ಸ್ಥಳಗಳಲ್ಲಿ ಈ ರೀತಿ ನಿಮ್ಮ ಮೋಜಿಗಾಗಿ ಬಂದು ಅಲ್ಲಿ ಕಸ ಕಡ್ಡಿಗಳನ್ನು ಹಾಕಿ ಆ ಸುಂದರ ಸ್ಥಳದ ಸೌಂದರ್ಯವನ್ನು ಹಾಳು ಮಾಡಬೇಡಿʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!