AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪ್ರವಾಹದ ಅಬ್ಬರಕ್ಕೆ ಕಾರು ಸಮೇತ ಕೊಚ್ಚಿ ಹೋದ ದಂಪತಿ, ರಕ್ಷಣಾ ಕಾರ್ಯ ಹೇಗಿತ್ತು ನೋಡಿ

ಗುಜರಾತ್‌ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಪ್ರವಾಹದ ಅಬ್ಬರಕ್ಕೆ ಕಾರಿನ ಸಮೇತ ದಂಪತಿಗಳಿಬ್ಬರು ಕೊಚ್ಚಿ ಹೋಗಿದ್ದು, ಹಾಗೋ ಹೀಗೋ ಕಾರಿನ ಟಾಪ್‌ ಏರಿ ಕುಳಿತು ಜೀವ ರಕ್ಷಣೆಗಾಗಿ ಪರದಾಡಿದ್ದಾರೆ. ಜಲದಿಗ್ಭಂದನದಲ್ಲಿ ಸಿಲುಕಿದ ದಂಪತಿಯನ್ನು ರಕ್ಷಿಸಲಾಗಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Viral: ಪ್ರವಾಹದ ಅಬ್ಬರಕ್ಕೆ ಕಾರು ಸಮೇತ ಕೊಚ್ಚಿ ಹೋದ ದಂಪತಿ, ರಕ್ಷಣಾ ಕಾರ್ಯ ಹೇಗಿತ್ತು ನೋಡಿ
ವೈರಲ್​​​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 09, 2024 | 3:59 PM

Share

ಗುಜರಾತ್‌ನಲ್ಲಿ ಸುರಿಯುತ್ತಿರುವ ನಿರಂತರ ಧಾರಾಕಾರ ಮಳೆಯಿಂದಾಗಿ, ಈ ರಾಜ್ಯವು ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಮಹಾ ಪ್ರವಾಹಕ್ಕೆ ಪ್ರಮುಖ ನಗರಗಳು, ನದಿ ಸಮೀಪದ ಪ್ರದೇಶಗಳು ಜಲಾವೃತಗೊಂಡು ಸಾವಿರಾರು ಜನ ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆ ಪ್ರವಾಹದ ಅಬ್ಬರಕ್ಕೆ ಈ ಪ್ರವಾಹದ ಅಬ್ಬರಕ್ಕೆ ಕಾರಿನ ಸಮೇತ ದಂಪತಿಗಳಿಬ್ಬರು ಕೊಚ್ಚಿ ಹೋಗಿದ್ದು, ಹಾಗೋ ಹೀಗೋ ಕಾರಿನ ಟಾಪ್‌ ಏರಿ ಕುಳಿತು ಜೀವ ರಕ್ಷಣೆಗಾಗಿ ಪರದಾಡಿದ್ದಾರೆ. ಸತತ ಎರಡು ಗಂಟೆಗಳ ಕಾಲ ಜಲದಿಗ್ಭಂದನದಲ್ಲಿ ಸಿಲುಕಿದ ದಂಪತಿಯನ್ನು ರಕ್ಷಿಸಲಾಗಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ಭಾನುವಾರ (ಸೆಪ್ಟೆಂಬರ್‌ 9) ಈ ಘಟನೆ ನಡೆದಿದ್ದು, ಭೀಕರ ಪ್ರವಾಹಕ್ಕೆ ದಂಪತಿಗಳಿಬ್ಬರು ಕಾರು ಸಮೇತ ಕೊಚ್ಚಿ ಹೋಗಿದ್ದಾರೆ. ಸತತ ಎರಡು ಗಂಟೆಗಳ ಕಾಲ ಜಲದಿಗ್ಭಂದನದಲ್ಲಿ ಸಿಲುಕ್ಕಿದ್ದ ದಂಪತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ತುಂಬಿ ಹರಿಯುತ್ತಿದ್ದ ಕರೋಲ್‌ ನದಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ವೇಳೆ ಈ ದಂಪತಿ ಕಾರು ಸಮೇತ ಪ್ರವಾಹದ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಜೀವ ಉಳಿದರೆ ಸಾಕೆಂದು ಪ್ರವಾಹದ ನಡುವೆಯೂ ಕಾರಿನ ಟಾಪ್‌ ಏರಿ ಕುಳಿತ ದಂಪತಿ ಪ್ರಾಣ ರಕ್ಷಣೆಗೆ ಪರದಾಡಿದ್ದಾರೆ. ಪ್ರವಾಹ ಹರಿವು ಹೆಚ್ಚಿದ್ದರಿಂದ ಸ್ಥಳೀಯರಿಗೆ ತಕ್ಷಣಕ್ಕೆ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ನಂತರ ಪ್ರವಾಹ ಮಟ್ಟ ಸ್ಪಲ್ವ ತಗ್ಗಿದ ಬಳಿಕ ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಎರಡು ಗಂಟೆಗಳ ಕಾಲ ಜಲದಿಗ್ಭಂದನದಲ್ಲಿ ಸಿಲುಕಿದ ದಂಪತಿಯನ್ನು ರಕ್ಷಣೆ ಮಾಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು NarundarM ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಕಾರು ಸಮೇತ ಪ್ರವಾಹದಲ್ಲಿ ಕೊಚ್ಚಿ ಹೋದ ದಂಪತಿಗಳಿಬ್ಬರು ಪ್ರಾಣ ರಕ್ಷಣೆಗಾಗಿ ಕಾರಿನ ಟಾಪ್‌ ಏರಿ ಕುಳಿತಿರುವ ದೃಶ್ಯವನ್ನು ಕಾಣಬಹುದು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಸ್ವಯಂ ಸೇವಕರು ಬಂದು ಈ ಇಬ್ಬರನ್ನೂ ರಕ್ಷಿಸಿದ್ದಾರೆ.

ಇದನ್ನೂ ಓದಿ: ಅಯ್ಯೋ ಗುಂಡು ಹಾರಿಸ್ಬೇಡಿ, ಇದು ಜಸ್ಟ್‌ ಪ್ರಾಂಕ್, ತಮಾಷೆ ಮಾಡಲು ಹೋಗಿ ತಾವೇ ಹಳ್ಳಕ್ಕೆ ಬಿದ್ದ ಯುವಕರು

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ಪೋಸ್ಟ್‌ 3 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಪ್ರವಾಹದಲ್ಲಿ ಸಿಲುಕಿದರೂ ಯಾವುದೇ ಒತ್ತಡವನ್ನು ಮನಸ್ಸಿಗೆ ತೆಗೆದುಕೊಳ್ಳದೆ ಆರಾಮವಾಗಿ ಕುಳಿತ ಆ ದಂಪತಿಯ ಧೈರ್ಯಕ್ಕೆ ಮೆಚ್ಚಲೇಬೇಕುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇವರಿಬ್ಬರು ಎಷ್ಟು ಟೆನ್ಷನ್‌ ಫ್ರೀ ಆಗಿ ಇದ್ದಾರೆ ನೋಡಿʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ