AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪ್ರವಾಹದ ಅಬ್ಬರಕ್ಕೆ ಕಾರು ಸಮೇತ ಕೊಚ್ಚಿ ಹೋದ ದಂಪತಿ, ರಕ್ಷಣಾ ಕಾರ್ಯ ಹೇಗಿತ್ತು ನೋಡಿ

ಗುಜರಾತ್‌ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಪ್ರವಾಹದ ಅಬ್ಬರಕ್ಕೆ ಕಾರಿನ ಸಮೇತ ದಂಪತಿಗಳಿಬ್ಬರು ಕೊಚ್ಚಿ ಹೋಗಿದ್ದು, ಹಾಗೋ ಹೀಗೋ ಕಾರಿನ ಟಾಪ್‌ ಏರಿ ಕುಳಿತು ಜೀವ ರಕ್ಷಣೆಗಾಗಿ ಪರದಾಡಿದ್ದಾರೆ. ಜಲದಿಗ್ಭಂದನದಲ್ಲಿ ಸಿಲುಕಿದ ದಂಪತಿಯನ್ನು ರಕ್ಷಿಸಲಾಗಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Viral: ಪ್ರವಾಹದ ಅಬ್ಬರಕ್ಕೆ ಕಾರು ಸಮೇತ ಕೊಚ್ಚಿ ಹೋದ ದಂಪತಿ, ರಕ್ಷಣಾ ಕಾರ್ಯ ಹೇಗಿತ್ತು ನೋಡಿ
ವೈರಲ್​​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Sep 09, 2024 | 3:59 PM

Share

ಗುಜರಾತ್‌ನಲ್ಲಿ ಸುರಿಯುತ್ತಿರುವ ನಿರಂತರ ಧಾರಾಕಾರ ಮಳೆಯಿಂದಾಗಿ, ಈ ರಾಜ್ಯವು ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಮಹಾ ಪ್ರವಾಹಕ್ಕೆ ಪ್ರಮುಖ ನಗರಗಳು, ನದಿ ಸಮೀಪದ ಪ್ರದೇಶಗಳು ಜಲಾವೃತಗೊಂಡು ಸಾವಿರಾರು ಜನ ಪ್ರವಾಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆ ಪ್ರವಾಹದ ಅಬ್ಬರಕ್ಕೆ ಈ ಪ್ರವಾಹದ ಅಬ್ಬರಕ್ಕೆ ಕಾರಿನ ಸಮೇತ ದಂಪತಿಗಳಿಬ್ಬರು ಕೊಚ್ಚಿ ಹೋಗಿದ್ದು, ಹಾಗೋ ಹೀಗೋ ಕಾರಿನ ಟಾಪ್‌ ಏರಿ ಕುಳಿತು ಜೀವ ರಕ್ಷಣೆಗಾಗಿ ಪರದಾಡಿದ್ದಾರೆ. ಸತತ ಎರಡು ಗಂಟೆಗಳ ಕಾಲ ಜಲದಿಗ್ಭಂದನದಲ್ಲಿ ಸಿಲುಕಿದ ದಂಪತಿಯನ್ನು ರಕ್ಷಿಸಲಾಗಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ಭಾನುವಾರ (ಸೆಪ್ಟೆಂಬರ್‌ 9) ಈ ಘಟನೆ ನಡೆದಿದ್ದು, ಭೀಕರ ಪ್ರವಾಹಕ್ಕೆ ದಂಪತಿಗಳಿಬ್ಬರು ಕಾರು ಸಮೇತ ಕೊಚ್ಚಿ ಹೋಗಿದ್ದಾರೆ. ಸತತ ಎರಡು ಗಂಟೆಗಳ ಕಾಲ ಜಲದಿಗ್ಭಂದನದಲ್ಲಿ ಸಿಲುಕ್ಕಿದ್ದ ದಂಪತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ತುಂಬಿ ಹರಿಯುತ್ತಿದ್ದ ಕರೋಲ್‌ ನದಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ವೇಳೆ ಈ ದಂಪತಿ ಕಾರು ಸಮೇತ ಪ್ರವಾಹದ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಜೀವ ಉಳಿದರೆ ಸಾಕೆಂದು ಪ್ರವಾಹದ ನಡುವೆಯೂ ಕಾರಿನ ಟಾಪ್‌ ಏರಿ ಕುಳಿತ ದಂಪತಿ ಪ್ರಾಣ ರಕ್ಷಣೆಗೆ ಪರದಾಡಿದ್ದಾರೆ. ಪ್ರವಾಹ ಹರಿವು ಹೆಚ್ಚಿದ್ದರಿಂದ ಸ್ಥಳೀಯರಿಗೆ ತಕ್ಷಣಕ್ಕೆ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ನಂತರ ಪ್ರವಾಹ ಮಟ್ಟ ಸ್ಪಲ್ವ ತಗ್ಗಿದ ಬಳಿಕ ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಎರಡು ಗಂಟೆಗಳ ಕಾಲ ಜಲದಿಗ್ಭಂದನದಲ್ಲಿ ಸಿಲುಕಿದ ದಂಪತಿಯನ್ನು ರಕ್ಷಣೆ ಮಾಡಿದ್ದಾರೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು NarundarM ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಕಾರು ಸಮೇತ ಪ್ರವಾಹದಲ್ಲಿ ಕೊಚ್ಚಿ ಹೋದ ದಂಪತಿಗಳಿಬ್ಬರು ಪ್ರಾಣ ರಕ್ಷಣೆಗಾಗಿ ಕಾರಿನ ಟಾಪ್‌ ಏರಿ ಕುಳಿತಿರುವ ದೃಶ್ಯವನ್ನು ಕಾಣಬಹುದು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಸ್ವಯಂ ಸೇವಕರು ಬಂದು ಈ ಇಬ್ಬರನ್ನೂ ರಕ್ಷಿಸಿದ್ದಾರೆ.

ಇದನ್ನೂ ಓದಿ: ಅಯ್ಯೋ ಗುಂಡು ಹಾರಿಸ್ಬೇಡಿ, ಇದು ಜಸ್ಟ್‌ ಪ್ರಾಂಕ್, ತಮಾಷೆ ಮಾಡಲು ಹೋಗಿ ತಾವೇ ಹಳ್ಳಕ್ಕೆ ಬಿದ್ದ ಯುವಕರು

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ಪೋಸ್ಟ್‌ 3 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಪ್ರವಾಹದಲ್ಲಿ ಸಿಲುಕಿದರೂ ಯಾವುದೇ ಒತ್ತಡವನ್ನು ಮನಸ್ಸಿಗೆ ತೆಗೆದುಕೊಳ್ಳದೆ ಆರಾಮವಾಗಿ ಕುಳಿತ ಆ ದಂಪತಿಯ ಧೈರ್ಯಕ್ಕೆ ಮೆಚ್ಚಲೇಬೇಕುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇವರಿಬ್ಬರು ಎಷ್ಟು ಟೆನ್ಷನ್‌ ಫ್ರೀ ಆಗಿ ಇದ್ದಾರೆ ನೋಡಿʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!