AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಪ್ಪಲಿ ತೆಗೆದು ಬನ್ನಿ ಎಂದ ವೈದ್ಯನಿಗೆ ಥಳಿಸಿದ ರೋಗಿಯ ಕುಟುಂಬಸ್ಥರು; ಶಾಕಿಂಗ್ ವಿಡಿಯೋ ಇಲ್ಲಿದೆ

ಆಸ್ಪತ್ರೆಗೆ ಬಂದಿದ್ದ ರೋಗಿಯ ಕುಟುಂಬಸ್ಥರು ಚಪ್ಪಲಿ ಹಾಕಿಕೊಂಡೇ ಒಳಗೆ ಬಂದಿದ್ದರು. ಹೀಗಾಗಿ, ಸ್ವಚ್ಛತೆಯ ದೃಷ್ಟಿಯಿಂದ ನಿಮ್ಮ ಚಪ್ಪಲಿಯನ್ನು ಹೊರಗೆ ಬಿಚ್ಚಿಟ್ಟು ಬರಬೇಕು ಎಂದು ರೋಗಿಯ ಮನೆಯವರಿಗೆ ವೈದ್ಯರು ಹೇಳಿದ್ದರು. ಇದರಿಂದ ಕೋಪಗೊಂಡ ಅವರು ವೈದ್ಯರಿಗೆ ಥಳಿಸಿರುವ ಘಟನೆ ಗುಜರಾತ್​​ನಲ್ಲಿ ನಡೆದಿದೆ.

Viral Video: ಚಪ್ಪಲಿ ತೆಗೆದು ಬನ್ನಿ ಎಂದ ವೈದ್ಯನಿಗೆ ಥಳಿಸಿದ ರೋಗಿಯ ಕುಟುಂಬಸ್ಥರು; ಶಾಕಿಂಗ್ ವಿಡಿಯೋ ಇಲ್ಲಿದೆ
ವೈದ್ಯನಿಗೆ ಥಳಿಸಿದ ರೋಗಿಯ ಕುಟುಂಬಸ್ಥರು
ಸುಷ್ಮಾ ಚಕ್ರೆ
|

Updated on: Sep 18, 2024 | 7:43 PM

Share

ಅಹಮದಾಬಾದ್: ಗುಜರಾತ್​ನಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದರಲ್ಲಿ, ಗುಜರಾತ್ ಆಸ್ಪತ್ರೆಯ ವೈದ್ಯರು ತಮ್ಮ ಕನ್ಸಲ್ಟೇಷನ್ ರೂಂಗೆ ಬರುವ ಮೊದಲು ಚಪ್ಪಲಿಯನ್ನು ತೆಗೆದು ಹೊರಗೆ ಇಡಬೇಕೆಂದು ರೋಗಿಯ ಕುಟುಂಬದ ಸದಸ್ಯರಿಗೆ ಸೂಚಿಸಿದ್ದರು. ಇದರಿಂದ ಕೆರಳಿದ ಕುಟುಂಬಸ್ಥರು ಆ ವೈದ್ಯರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಘಾತ ಉಂಟುಮಾಡಿದೆ.

ಗುಜರಾತ್​ನ ಭಾವನಗರದ ಸಿಹೋರ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಈ ಘಟನೆ ನಡೆದಿದೆ. ತಲೆಗೆ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ರೋಗಿಯ ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆತಂದಿದ್ದರು.

ಸಿಸಿಟಿವಿ ದೃಶ್ಯಗಳ ಪ್ರಕಾರ, ಎಮರ್ಜೆನ್ಸಿ ರೂಂ ಒಳಗಿನ ಹಾಸಿಗೆಯ ಮೇಲೆ ಮಹಿಳೆಯ ಪಕ್ಕದಲ್ಲಿ ಕೆಲವು ಪುರುಷರು ನಿಂತಿರುವುದನ್ನು ಕಾಣಬಹುದು. ಕೆಲವು ಸೆಕೆಂಡುಗಳ ನಂತರ, ಡಾ. ಜೈದೀಪ್‌ಸಿನ್ಹ್ ಗೋಹಿಲ್ ಆ ರೂಂಗೆ ಪ್ರವೇಶಿಸಿದರು. ಆಗ ಅಲ್ಲಿದ್ದವರಿಗೆ ನಿಮ್ಮ ಚಪ್ಪಲಿಗಳನ್ನು ಹೊರಗೆ ಕಳಚಿಟ್ಟು ಒಳಗೆ ಬನ್ನಿ ಎಂದು ಸೂಚಿಸಿದರು.

ಇದನ್ನೂ ಓದಿ: ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್

ಇದರಿಂದ ವೈದ್ಯರು ಹಾಗೂ ರೋಗಿಯ ಕುಟುಂಬದವರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಪುರುಷರ ಗುಂಪು ವೈದ್ಯರ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿತು ಮತ್ತು ಮಹಿಳೆ ಹಾಸಿಗೆಯ ಮೇಲೆ ಮಲಗಿದ್ದರೂ ಸಹ ವೈದ್ಯರನ್ನು ಥಳಿಸಿತು. ಎನ್‌ಡಿಟಿವಿ ಪ್ರಕಾರ, ಈ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ