AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಪ್ಪಲಿ ತೆಗೆದು ಬನ್ನಿ ಎಂದ ವೈದ್ಯನಿಗೆ ಥಳಿಸಿದ ರೋಗಿಯ ಕುಟುಂಬಸ್ಥರು; ಶಾಕಿಂಗ್ ವಿಡಿಯೋ ಇಲ್ಲಿದೆ

ಆಸ್ಪತ್ರೆಗೆ ಬಂದಿದ್ದ ರೋಗಿಯ ಕುಟುಂಬಸ್ಥರು ಚಪ್ಪಲಿ ಹಾಕಿಕೊಂಡೇ ಒಳಗೆ ಬಂದಿದ್ದರು. ಹೀಗಾಗಿ, ಸ್ವಚ್ಛತೆಯ ದೃಷ್ಟಿಯಿಂದ ನಿಮ್ಮ ಚಪ್ಪಲಿಯನ್ನು ಹೊರಗೆ ಬಿಚ್ಚಿಟ್ಟು ಬರಬೇಕು ಎಂದು ರೋಗಿಯ ಮನೆಯವರಿಗೆ ವೈದ್ಯರು ಹೇಳಿದ್ದರು. ಇದರಿಂದ ಕೋಪಗೊಂಡ ಅವರು ವೈದ್ಯರಿಗೆ ಥಳಿಸಿರುವ ಘಟನೆ ಗುಜರಾತ್​​ನಲ್ಲಿ ನಡೆದಿದೆ.

Viral Video: ಚಪ್ಪಲಿ ತೆಗೆದು ಬನ್ನಿ ಎಂದ ವೈದ್ಯನಿಗೆ ಥಳಿಸಿದ ರೋಗಿಯ ಕುಟುಂಬಸ್ಥರು; ಶಾಕಿಂಗ್ ವಿಡಿಯೋ ಇಲ್ಲಿದೆ
ವೈದ್ಯನಿಗೆ ಥಳಿಸಿದ ರೋಗಿಯ ಕುಟುಂಬಸ್ಥರು
ಸುಷ್ಮಾ ಚಕ್ರೆ
|

Updated on: Sep 18, 2024 | 7:43 PM

Share

ಅಹಮದಾಬಾದ್: ಗುಜರಾತ್​ನಲ್ಲಿ ನಡೆದಿರುವ ಆಘಾತಕಾರಿ ಘಟನೆಯೊಂದರಲ್ಲಿ, ಗುಜರಾತ್ ಆಸ್ಪತ್ರೆಯ ವೈದ್ಯರು ತಮ್ಮ ಕನ್ಸಲ್ಟೇಷನ್ ರೂಂಗೆ ಬರುವ ಮೊದಲು ಚಪ್ಪಲಿಯನ್ನು ತೆಗೆದು ಹೊರಗೆ ಇಡಬೇಕೆಂದು ರೋಗಿಯ ಕುಟುಂಬದ ಸದಸ್ಯರಿಗೆ ಸೂಚಿಸಿದ್ದರು. ಇದರಿಂದ ಕೆರಳಿದ ಕುಟುಂಬಸ್ಥರು ಆ ವೈದ್ಯರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಘಾತ ಉಂಟುಮಾಡಿದೆ.

ಗುಜರಾತ್​ನ ಭಾವನಗರದ ಸಿಹೋರ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಈ ಘಟನೆ ನಡೆದಿದೆ. ತಲೆಗೆ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ರೋಗಿಯ ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆತಂದಿದ್ದರು.

ಸಿಸಿಟಿವಿ ದೃಶ್ಯಗಳ ಪ್ರಕಾರ, ಎಮರ್ಜೆನ್ಸಿ ರೂಂ ಒಳಗಿನ ಹಾಸಿಗೆಯ ಮೇಲೆ ಮಹಿಳೆಯ ಪಕ್ಕದಲ್ಲಿ ಕೆಲವು ಪುರುಷರು ನಿಂತಿರುವುದನ್ನು ಕಾಣಬಹುದು. ಕೆಲವು ಸೆಕೆಂಡುಗಳ ನಂತರ, ಡಾ. ಜೈದೀಪ್‌ಸಿನ್ಹ್ ಗೋಹಿಲ್ ಆ ರೂಂಗೆ ಪ್ರವೇಶಿಸಿದರು. ಆಗ ಅಲ್ಲಿದ್ದವರಿಗೆ ನಿಮ್ಮ ಚಪ್ಪಲಿಗಳನ್ನು ಹೊರಗೆ ಕಳಚಿಟ್ಟು ಒಳಗೆ ಬನ್ನಿ ಎಂದು ಸೂಚಿಸಿದರು.

ಇದನ್ನೂ ಓದಿ: ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್

ಇದರಿಂದ ವೈದ್ಯರು ಹಾಗೂ ರೋಗಿಯ ಕುಟುಂಬದವರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಪುರುಷರ ಗುಂಪು ವೈದ್ಯರ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿತು ಮತ್ತು ಮಹಿಳೆ ಹಾಸಿಗೆಯ ಮೇಲೆ ಮಲಗಿದ್ದರೂ ಸಹ ವೈದ್ಯರನ್ನು ಥಳಿಸಿತು. ಎನ್‌ಡಿಟಿವಿ ಪ್ರಕಾರ, ಈ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ