AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಕೈದಿಯ ವಿಚಿತ್ರ ವರ್ತನೆ; ಎಕ್ಸ್ ರೇ ನೋಡಿ ಪೊಲೀಸರು ಶಾಕ್​​

ಭಾವನಗರ ಜೈಲಿನ ಪೋಕ್ಸೊ ಪ್ರಕರಣದ ಆರೋಪಿ ರವಿ ಬಾರಯ್ಯನ ವಿಚಿತ್ರ ವರ್ತನೆಯಿಂದ ಪೊಲೀಸರಿಗೆ ಅನುಮಾನ ಬಂದಿತ್ತು. ಆಸ್ಪತ್ರೆಯ ಎಕ್ಸ್-ರೇ ಪರೀಕ್ಷೆಯಲ್ಲಿ ಆತನ ಗುದನಾಳದಲ್ಲಿ ಮೊಬೈಲ್ ಫೋನ್ ಇರುವುದು ಪತ್ತೆಯಾಗಿದೆ. ಜೈಲಿನಲ್ಲಿ ನಿಷೇಧಿತ ಮೊಬೈಲ್ ಮತ್ತು ಚಾರ್ಜರ್ ಪತ್ತೆಯಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಜೈಲು ಅಧಿಕಾರಿಗಳು ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

ಜೈಲಿನಲ್ಲಿ ಕೈದಿಯ ವಿಚಿತ್ರ ವರ್ತನೆ; ಎಕ್ಸ್ ರೇ ನೋಡಿ ಪೊಲೀಸರು ಶಾಕ್​​
ಅಕ್ಷತಾ ವರ್ಕಾಡಿ
|

Updated on: Dec 08, 2024 | 9:47 AM

Share

ಗುಜರಾತ್‌: ಪೋಕ್ಸೊ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿಯೊಬ್ಬನ ವಿಚಿತ್ರ ವರ್ತನೆ ಗಮನಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರೀಕ್ಷೆಯ ಒಳಪಡಿಸಿದ ವೈದ್ಯರು ಎಕ್ಸ್ ರೇ ಕಂಡು ಬೆಚ್ಚಿ ಬಿದ್ದಿದ್ದಾರೆ. ಎಕ್ಸ್ ರೇ ವರದಿಯಲ್ಲಿ ಕೈದಿಯ ಗುದನಾಳದಲ್ಲಿ ಮೊಬೈಲ್ ಫೋನ್ ಇರುವುದು ಕಂಡುಬಂದಿದೆ. ಈ ಘಟನೆ ಗುಜರಾತ್‌ನ ಭಾವನಗರ ಜೈಲಿನಲ್ಲಿ ನಡೆದಿದೆ.

ರವಿ ಬಾರಯ್ಯ (33) ಎಂಬ ಕೈದಿಯನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಅಕ್ಟೋಬರ್ 19 ರಿಂದ ಗುಜರಾತ್‌ನ ಭಾವನಗರ ಜಿಲ್ಲಾ ಕಾರಾಗೃಹದಲ್ಲಿ ಬಂಧಿಯಾಗಿದ್ದಾನೆ. ಜೈಲಿನೊಳಗೆ ಮೊಬೈಲ್ ಫೋನ್‌ಗಳನ್ನು ಬಳಸುವಂತಿಲ್ಲ. ಆದರೆ ಡಿಸೆಂಬರ್ 4 ರಂದು ಕಾರಾಗೃಹಕ್ಕೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಮೊಬೈಲ್ ಫೋನ್ ಚಾರ್ಜರ್ ಪತ್ತೆಯಾದಾಗ ಅಧಿಕಾರಿಗಳಿಗೆ ಅನುಮಾನ ಬಂದಿದೆ.

ಇದನ್ನೂ ಓದಿ: ಪಂಜರದೊಳಗಿದ್ದ ಸಿಂಹವನ್ನು ಕೆಣಕಿ ಕೈ ಬೆರಳನ್ನೇ ಕಳೆದುಕೊಂಡ ಯುವಕ

ಎಲ್ಲಾ ಕಡೆ ಹುಡುಕಾಡಿದರೂ ಫೋನ್ ಸಿಗದಿದ್ದಾಗ ಬಾರಯ್ಯನ ವಿಚಿತ್ರ ವರ್ತನೆ ಕಂಡು ಪೊಲೀಸರು ಅನುಮಾನಗೊಂಡು ಆತನ ಸೆಲ್‌ನಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ ಫೋನ್ ಪತ್ತೆಯಾಗಿಲ್ಲ. ಆದಾಗ್ಯೂ, ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಎಕ್ಸ್ ರೇ ತೆಗೆಯಲಾಯಿತು. ಸ್ಕ್ಯಾನ್ ಮಾಡಿದಾಗ ಗುದದ್ವಾರದಲ್ಲಿ ಮೊಬೈಲ್ ಇರುವುದು ಪತ್ತೆಯಾಗಿದೆ. ಇದರಿಂದ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಘಟನೆಯ ಬಗ್ಗೆ ಜೈಲು ಅಧಿಕಾರಿಗಳು ದೂರು ನೀಡಿದಾಗ, ಕೈದಿಗಳ ಕಾಯ್ದೆಯ ಬಿಎನ್‌ಎಸ್ 223, ಸೆಕ್ಷನ್ 42, 43 ಮತ್ತು 45(12) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಿಷೇಧಿತ ಮೊಬೈಲ್ ಫೋನ್ ಮತ್ತು ಚಾರ್ಜರ್ ಅನ್ನು ಜೈಲಿಗೆ ತಂದವರು ಯಾರು? ರವಿ ಎಷ್ಟು ಸಮಯದಿಂದ ಫೋನ್ ಬಳಸುತ್ತಿದ್ದ ಎಂದು ಜೈಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ