AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವಕ್ಕೆ ಕುತ್ತು ತಂದ ಗಾಳಿಪಟ, ಬೈಕ್‌ ಚಲಾಯಿಸುತ್ತಿದ್ದ ವೇಳೆ ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ಪ್ರಾಣ ಕಳೆದುಕೊಂಡ ವ್ಯಕ್ತಿ

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಸಾವು ನೋವುಗಳು ಸಂಭವಿಸಿದ ಅದೆಷ್ಟೋ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಇಲ್ಲೊಂದು ಇಂತಹದ್ದೇ ದುರಾದೃಷ್ಟಕರ ಘಟನೆ ನಡೆದಿದ್ದು, ಗಾಳಿಪಟ ದರ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಗಾಳಿಪಟ ದಾರ ಕುತ್ತಿಗೆಗೆ ಸಿಲುಕಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ಸುದ್ದಿ ಎಲ್ಲೆಡೆ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Dec 03, 2024 | 6:29 PM

Share

ಗಾಳಿಪಟ ಹಾರಿಸುವ ಸಂಭ್ರಮ, ಖುಷಿ ಎಷ್ಟೋ ಬಾರಿ ಇತರರ ಜೀವಕ್ಕೆ ಕುತ್ತು ತರುತ್ತವೆ. ಹೌದು ಗಾಳಿಪಟ ಹಾರಿಸುವ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಸಾವು ನೋವುಗಳು ಸಂಭವಿಸಿದ ಅದೆಷ್ಟೋ ಘಟನೆಗಳು ಈ ಹಿಂದೆಯೂ ನಡೆದಿವೆ. ಈ ದಾರ ಪಕ್ಷಿಗಳ ಜೀವವನ್ನು ಸಹ ಬಲಿ ತೆಗೆದುಕೊಂಡಿದೆ. ಇದೀಗ ಮತ್ತೊಂದು ಇಂತಹದ್ದೇ ಧಾರುಣ ಘಟನೆ ನಡೆದಿದ್ದು, ಗಾಳಿಪಟ ದರ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಗಾಳಿಪಟ ದಾರ ಕುತ್ತಿಗೆಗೆ ಸಿಲುಕಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ಸುದ್ದಿ ಎಲ್ಲೆಡೆ ವೈರಲ್‌ ಆಗುತ್ತಿದೆ.

ಗುಜರಾತ್‌ನ ಸೂರತ್‌ನಲ್ಲಿ ಈ ಧಾರುಣ ಘಟನೆ ನಡೆದಿದ್ದು, ಗಾಳಿಪಟದ ದಾರ 37 ವರ್ಷದ ವ್ಯಕ್ತಿಯೊಬ್ಬನ ಜೀವವನ್ನೇ ಬಲಿ ತೆಗೆದುಕೊಂಡಿದೆ. ಇಲ್ಲಿನ ಆಲ್ಪಾಡ್‌ ಕಿಮ್‌ ಗ್ರಾಮದ ಮೇಲ್ಸೇತುವೆಯ ಮೇಲೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಗಾಳಿಪಟದ ದಾರ ಈತನ ಕತ್ತನ್ನೇ ಸೀಳಿದೆ. ಗಂಭೀರ ಗಾಯಗಳಾದ ಪರಿಣಾಮ ತಕ್ಷಣ ಆ ವ್ಯಕ್ತಿಯನ್ನು ಸಾಧನಾ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಗಾಯಗೊಂಡ ವ್ಯಕ್ತಿಯನ್ನು ಸೂರತ್‌ ಸಿವಿಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ