AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಭೋಗದ ವೇಳೆ ತೀವ್ರ ರಕ್ತಸ್ರಾವ, ಪ್ರಿಯಕರನ ನಿರ್ಲಕ್ಷ್ಯದಿಂದ ಯುವತಿಯ ಪ್ರಾಣವೇ ಹೋಯ್ತು

ಲೈಂಗಿಕ ಸಂಭೋಗದ ಸಮಯದಲ್ಲಿ ಯುವತಿಯ ಖಾಸಗಿ ಭಾಗಗಳಿಗೆ ಗಾಯವಾಗಿದೆ. ವೈದ್ಯಕೀಯ ನೆರವು ಸಿಗದ ಕಾರಣ ಯುವತಿ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದೆ. ಯುವತಿಯ ಸ್ಥಿತಿ ಚಿಂತಾಜನಕವಾದ ಬಳಿಕವೂ ಆರೋಪಿ ದೈಹಿಕ ಸಂಬಂಧ ಬೆಳೆಸಲು ಯತ್ನಿಸಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಸಂಭೋಗದ ವೇಳೆ ತೀವ್ರ ರಕ್ತಸ್ರಾವ, ಪ್ರಿಯಕರನ ನಿರ್ಲಕ್ಷ್ಯದಿಂದ ಯುವತಿಯ ಪ್ರಾಣವೇ ಹೋಯ್ತು
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Oct 02, 2024 | 3:02 PM

Share

ಗುಜರಾತ್‌: ಪ್ರಿಯಕರನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ನಂತರ ಅತಿಯಾದ ರಕ್ತಸ್ರಾವದಿಂದ 23 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಗುಜರಾತ್‌ನ ನವಸಾರಿ ಜಿಲ್ಲೆಯ ಹೋಟೆಲ್ ಒಂದರಲ್ಲಿ ನಡೆದಿದೆ. ಯುವತಿ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರೂ ಆಕೆಯ ಪ್ರಿಯಕರ ಆಂಬ್ಯುಲೆನ್ಸ್‌ಗೆ ಕರೆ ಮಾಡದೇ, ಸುಮಾರು 90 ನಿಮಿಷಗಳ ಕಾಲ ಆನ್‌ಲೈನ್‌ನಲ್ಲಿ ರಕ್ತಸ್ರಾವ ನಿಲ್ಲಿಸಲು ಮನೆಮದ್ದು ಹುಡುಕಿದ್ದಾನೆ. ಇದೀಗ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಎನ್‌ಡಿಟಿವಿ ವರದಿಯ ಪ್ರಕಾರ, ಲೈಂಗಿಕ ಸಂಭೋಗದ ಸಮಯದಲ್ಲಿ ಯುವತಿಯ ಖಾಸಗಿ ಭಾಗಗಳಿಗೆ ಗಾಯವಾಗಿದೆ, ಇದರಿಂದಾಗಿ ಆಕೆಗೆ ತೀವ್ರ ರಕ್ತಸ್ರಾವ ಪ್ರಾರಂಭವಾಗಿದೆ ಎಂದು ಫೋರೆನ್ಸಿಕ್ ವರದಿ ಬಹಿರಂಗಪಡಿಸಿದೆ. ವೈದ್ಯಕೀಯ ನೆರವು ಸಿಗದ ಕಾರಣ ಯುವತಿ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದೆ. ಯುವತಿಯ ಸ್ಥಿತಿ ಚಿಂತಾಜನಕವಾದ ಬಳಿಕವೂ ಆರೋಪಿ ದೈಹಿಕ ಸಂಬಂಧ ಬೆಳೆಸಲು ಯತ್ನಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಬಟ್ಟೆಯ ಸಹಾಯದಿಂದ ರಕ್ತಸ್ರಾವ ತಡೆಯಲು ಯತ್ನಿಸಿದರಾದರೂ ಪ್ರಯೋಜನವಾಗದೇ ಯುವತಿ ಪ್ರಜ್ಞಾಹೀನಳಾಗಿದ್ದಾಳೆ. ಯಾವುದೇ ವಿಧಾನದಿಂದ ರಕ್ತಸ್ರಾವವನ್ನು ನಿಲ್ಲಿಸಲು ಯಶಸ್ವಿಯಾಗದಿದ್ದಾಗ, ಯುವಕ ಸ್ನೇಹಿತನಿಗೆ ಕರೆ ಮಾಡಿದ್ದಾನೆ. ಬಳಿಕ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮನೆಯವರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಗಿತ್ತು.

ಇದನ್ನೂ ಓದಿ: ತಂದೆಯೇ ತನ್ನ ಮಗಳನ್ನು ಮದುವೆಯಾಗುವ ಅನಿಷ್ಠ ಸಂಪ್ರದಾಯ, ಎಂಥಾ ವಿಚಿತ್ರ ಪದ್ಧತಿ ನೋಡಿ…

ನವಸಾರಿಯಲ್ಲಿ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದ ಈ ಯುವತಿಗೆ, ಏಳು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಈ ಯುವಕನ ಪರಿಚವಾಗಿತ್ತು. ಪರಿಚಯ ಪ್ರೀತಿಗೆ ತಿರುಗಿದೆ. ಇತ್ತೀಚಿಗಷ್ಟೇ ಇವರಿಬ್ಬರು ಭೇಟಿಯಾಗಿದ್ದು, ಲೈಂಗಿಕ ಸಂಭೋಗ ನಡೆಸಿದ್ದಾರೆ. ಆದರೆ ಅತಿಯಾದ ರಕ್ತಸ್ರಾವದಿಂದ ಯುವತಿ ಸಾವನ್ನಪ್ಪಿದ್ದಾಳೆ. ಯುವತಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿದ್ದರೆ ಆಕೆಯ ಜೀವ ಉಳಿಸಬಹುದಿತ್ತು ಎಂದು ಎಸ್ಪಿ ಸುಶೀಲ್ ಅಗರ್ವಾಲ್ ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 2 October 24

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ