AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ದೇವರಂತೆ ಬಂದು ಹಾವಿನ ಪ್ರಾಣ ಉಳಿಸಿದ ಯುವಕ; ವಿಡಿಯೋ ವೈರಲ್‌

ಹಾವುಗಳನ್ನು ಕಂಡರೆ ಭಯದಿಂದ ಮಾರು ದೂರ ಓಡಿ ಹೋಗುವವರೇ ಹೆಚ್ಚು. ಅಂತವರ ಮಧ್ಯೆ ಇಲ್ಲೊಬ್ಬ ಯುವಕ ಭಯವನ್ನೆಲ್ಲಾ ಪಕ್ಕಕ್ಕಿಟ್ಟು, ತನ್ನ ಪ್ರಾಣವನ್ನೂ ಲೆಕ್ಕಿಸದೆ ಮಾನವೀಯತೆಯೇ ಮುಖ್ಯ ಎನ್ನುತ್ತಾ ಪ್ರಜ್ಞೆ ತಪ್ಪಿದ ಹಾವಿಗೆ ಸಿಪಿಆರ್‌ ನೀಡುವ ಮೂಲಕ ಒಂದು ಅಮೂಲ್ಯ ಜೀವವನ್ನು ಕಾಪಾಡಿದ್ದಾನೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ|

Updated on: Oct 17, 2024 | 11:53 AM

Share

ಹಾವುಗಳನ್ನು ಕಂಡರೆ ಮಾರು ದೂರ ಹೋಗುವವರೇ ಹೆಚ್ಚು. ಹಾಗಿರುವಾಗ ಯಾರಾದ್ರೂ ಹುಷಾರು ತಪ್ಪಿದ ಹಾವುಗಳಿಗೆ ಚಿಕಿತ್ಸೆ ನೀಡುತ್ತಾರೆಯೇ? ಖಂಡಿತವಾಗಿಯೂ ಇಲ್ಲ. ಆದ್ರೆ ಇಲ್ಲೊಬ್ಬ ಯುವಕ ಮಾತ್ರ ಮಾನವೀಯತೆಯೇ ಮುಖ್ಯ ಎನ್ನುತ್ತಾ ಪ್ರಜ್ಞೆ ತಪ್ಪಿದ ಹಾವಿಗೆ ಸಿಪಿಆರ್‌ ನೀಡುವ ಮೂಲಕ ಒಂದು ಅಮೂಲ್ಯ ಜೀವವನ್ನು ಉಳಿಸಿದ್ದಾನೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗಿದ್ದು, ಯುವಕನ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ಈ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದ್ದು, ಯುವಕನೊಬ್ಬ ಸಿಪಿಆರ್‌ ಚಿಕಿತ್ಸೆ ನೀಡುವ ಮೂಲಕ ಹಾವಿನ ಪ್ರಾಣವನ್ನು ರಕ್ಷಣೆ ಮಾಡಿದ್ದಾನೆ. ಇಲ್ಲಿನ ವೃಂದಾವನ್‌ ಚಾರ್‌ ರಸ್ತೆ ಪಕ್ಕದಲ್ಲಿ ಸಣ್ಣ ಗಾತ್ರದ ಹಾವೊಂದು ಪ್ರಜ್ಞೆ ತಪ್ಪಿ ಮಲಗಿರುವುದನ್ನು ಕಂಡ ಯುವಕ ತನ್ನ ಪ್ರಾಣವನ್ನೂ ಕೂಡಾ ಲೆಕ್ಕಿಸದೆ ಬಾಯಿಗೆ ಬಾಯಿಟ್ಟು ಸಿಪಿಆರ್‌ ನೀಡುವ ಮೂಲಕ ಹಾವಿನ ಪ್ರಾಣವನ್ನು ರಕ್ಷಿಸಿದ್ದಾನೆ.

ಮಾಹಿತಿಗಳ ಪ್ರಕಾರ ಹಾವು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಯಾರೋ ಸ್ಥಳೀಯರು ಪೊಲೀಸರು ಮತ್ತು ಪ್ರಾಣಿಗಳ ಎನ್‌ಜಿಒಗೆ ಮಾಹಿತಿಯನ್ನು ತಿಳಿಸಿದ್ದಾರೆ. ಆ ತಕ್ಷಣ ಸ್ಥಳಕ್ಕಾಗಮಿಸಿದ ಯಶ್‌ ತದ್ವಿ ಎಂಬ ಯುವಕ ಬಹಳ ಜೋಪಾನವಾಗಿ ಸಿಪಿಆರ್‌ ನೀಡುವ ಮೂಲಕ ಹಾವಿನ ಪ್ರಾಣವನ್ನು ರಕ್ಷಿಸಿದ್ದಾರೆ.

ಮತ್ತಷ್ಟು ಓದಿ: ಈ ಕಟ್ಟಡದಲ್ಲಿ ಅಟ್ಯಾಚ್ಡ್​ ಬಾತ್​ರೂಂ ಇರುವ ಒಂದು ಕೋಣೆಗೆ ಕೇವಲ 15 ರೂ. ಬಾಡಿಗೆ

ಅಮಿತ್‌ ಕಸನ (amitkasana6666) ಎಂಬವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಯುವಕನೊಬ್ಬ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಹಾವನ್ನು ನಿಧಾನವಾಗಿ ಕೈಯಲ್ಲಿ ಎತ್ತಿಕೊಂಡು ಅದರ ಬಾಯಿಗೆ ಬಾಯಿಟ್ಟು ಉಸಿರು ನೀಡುವ ದೃಶ್ಯವನ್ನು ಕಾಣಬಹುದು. ಹೀಗೆ ಸಿಪಿಆರ್‌ ಚಿಕಿತ್ಸೆ ನೀಡುತ್ತಿದ್ದಂತೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಹಾವು ಉಸಿರಾಡಲು ಆರಂಭಿಸಿದೆ. ತನ್ನ ಪ್ರಾಣವನ್ನೂ ಲೆಕ್ಕಿಸದೆ ಒಂದು ಅಮೂಲ್ಯ ಜೀವವನ್ನು ಕಾಪಾಡಿದ ಯುವಕನ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ