AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brazil Man: 4 ದಿನದ ನಂತರ ತಲೆಯೊಳಗಿದ್ದ ಬುಲೆಟ್​​​​ ಬಗ್ಗೆ ತಿಳಿದು ಗಾಬರಿಗೊಂಡ ವ್ಯಕ್ತಿ

ವೈದ್ಯರು ಮೆದುಳಿನಲ್ಲಿ ಸಿಲುಕಿರುವ 9 ಎಂಎಂ ಬುಲೆಟ್ ಅನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದಿದ್ದು, ನಾಲ್ಕು ದಿನಗಳ ವರೆಗೆ ಬುಲೆಟ್​​​​ ಆತನ ತಲೆಯೊಳಗೆ ಇದ್ದಿದ್ದು ವೈದ್ಯರನ್ನೇ ಅಚ್ಚರಿಗೊಳಿಸಿದೆ.

Brazil Man: 4 ದಿನದ ನಂತರ ತಲೆಯೊಳಗಿದ್ದ ಬುಲೆಟ್​​​​ ಬಗ್ಗೆ ತಿಳಿದು ಗಾಬರಿಗೊಂಡ ವ್ಯಕ್ತಿ
Gunshot in head
ಅಕ್ಷತಾ ವರ್ಕಾಡಿ
|

Updated on: Jan 24, 2024 | 5:47 PM

Share

ಬ್ರೆಜಿಲ್​​ನ 21 ವರ್ಷದ ಮೇಟಿಯುಸ್ ಫಾಸಿಯೊ ಎಂಬಾತ ಕಳೆದ ವರ್ಷದ ಡಿಸೆಂಬರ್ 31ರಂದು ಪಾರ್ಟಿಯಲ್ಲಿ ತೊಡಗಿಸಿಕೊಂಡಿದ್ದ. ಪಾರ್ಟಿಯ ನಡುವೆ ಗಲಾಟೆ ಪ್ರಾರಂಭವಾಗಿದ್ದು, ಈತನ ತಲೆಯಿಂದ ರಕ್ತಸ್ರಾವವಾಗಲು ಪ್ರಾರಂಭವಾಗಿದೆ. ತಲೆಗೆ ಕಲ್ಲು ತಾಗಿದೆ ಎಂದು ಭಾವಿಸಿದ್ದ, ಈತನಿಗೆ ನಾಲ್ಕು ದಿನಗಳ ನಂತರ ತಲೆಯೊಳಗೆ ಬುಲೆಟ್​​​​​​ ಇರುವುದು ತಿಳಿದಿದೆ. ಡಿ.31ರಂದು ಚಿಕ್ಕ ಗಾಯಕ್ಕೆ ಚಿಕಿತ್ಸೆ ಪಡೆದಿದ್ದು, ಆರಾಮವಾಗಿದ್ದ ಈತನಿಗೆ ಜನವರಿ 4 ಆರೋಗ್ಯ ಸಮಸ್ಯೆ ಪ್ರಾರಂಭವಾಗಿದೆ.

ನಿದ್ದೆಯಿಂದ ಎದ್ದ ಮೇಟಿಯುಸ್​ಗೆ ಎಡಗೈ ಎತ್ತಲು ಸಾಧ್ಯವಾಗದಂತಹ ಬಲಹೀನತೆಯ ಸಮಸ್ಯೆ ಪ್ರಾರಂಭವಾಗಿದ್ದು, ಆತಂಕಕ್ಕೊಳಗಾದ ಈತ ಬಟ್ಟೆ ಧರಿಸಿ ನೇರವಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಹೋಗಿದ್ದಾನೆ.ಬಳಿಕ ಅಲ್ಲಿ ಅವರು ನಾಲ್ಕು ದಿನಗಳ ಹಿಂದೆ ತಲೆಗೆ ಕಲ್ಲು ತಾಗಿರುವ ಬಗ್ಗೆ ವೈದ್ಯರಿಗೆ ತಿಳಿಸಿದ್ದಾನೆ.ಆದರೆ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿದಾಗ ತಲೆಗೆ ಹೊಡೆದಿದ್ದು ಕಲ್ಲು ಅಲ್ಲ ಗುಂಡು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ‘ಶ್ರೀಮಂತ ಹುಡುಗರನ್ನು ಸೆಳೆಯಲು ಯುವತಿಯರೇ ಈ ಸರ್ಜರಿ ಮಾಡಿಸಿ’; ಕಂಪನಿಗೆ ಕಂಟಕವಾದ ಈ ಜಾಹೀರಾತು

ವರದಿಗಳ ಪ್ರಕಾರ, ವೈದ್ಯರು ಮೆದುಳಿನಲ್ಲಿ ಸಿಲುಕಿರುವ 9 ಎಂಎಂ ಬುಲೆಟ್ ಅನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದಿದ್ದು, ನಾಲ್ಕು ದಿನಗಳ ಬುಲೆಟ್​​​​ ಆತನ ತಲೆಯೊಳಗೆ ಇದ್ದಿದ್ದು ವೈದ್ಯರನ್ನೇ ಅಚ್ಚರಿಗೊಳಿಸಿದೆ. ಆದರೆ ಅದೃಷ್ಟವಶಾತ್ ಆಪರೇಷನ್ ಯಶಸ್ವಿಯಾಗಿದ್ದು ಮಟಿಯಾಸ್ ಪ್ರಾಣವನ್ನು ಉಳಿಸಲಾಗಿದೆ. ಸದ್ಯ ಈತ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ