AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಜಾಮ್​ನಿಂದ ಪಾರಾಗಲು ತಲೆ ಮೇಲೆ ಸ್ಕೂಟರ್ ಹೊತ್ತು ನಡೆದ ಯುವಕ!

ಗುರುಗ್ರಾಮದಲ್ಲಿ ಇತ್ತೀಚೆಗೆ ಟ್ರಾಫಿಕ್ ಜಾಮ್ ಹೆಚ್ಚಾಗಿದ್ದು, ಮಳೆ ಬಂದರಂತೂ 10-20 ಕಿ.ಮೀವರೆಗೂ ವಾಹನಗಳು ಸಾಲುಗಟ್ಟಿ ನಿಲ್ಲುತ್ತವೆ. ರಾತ್ರಿ ವೇಳೆ ಆಫೀಸಿನಿಂದ ಮನೆಗೆ ಹೋಗುವಾಗ ಇದೇ ರೀತಿಯ ಟ್ರಾಫಿಕ್ ಜಾಮ್​​ನಿಂದ ಬೇಸತ್ತ ಯುವಕನೊಬ್ಬ ತನ್ನ ಸ್ಕೂಟರನ್ನೇ ತಲೆ ಮೇಲೆ ಹೊತ್ತು ಕಾರುಗಳ ನಡುವೆ ದಾಟುತ್ತಾ ಟ್ರಾಫಿಕ್​ನಲ್ಲಿ ನಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ.

ಟ್ರಾಫಿಕ್ ಜಾಮ್​ನಿಂದ ಪಾರಾಗಲು ತಲೆ ಮೇಲೆ ಸ್ಕೂಟರ್ ಹೊತ್ತು ನಡೆದ ಯುವಕ!
Gurugram Traffic Jam
ಸುಷ್ಮಾ ಚಕ್ರೆ
|

Updated on: Sep 04, 2025 | 10:57 PM

Share

ಗುರುಗ್ರಾಮ, ಸೆಪ್ಟೆಂಬರ್ 4: ನಿರಂತರ ಮಳೆಯ ನಡುವೆ ಗುರುಗ್ರಾಮದ (Gurugram Traffic) ಜನದಟ್ಟಣೆಯಿಂದ ತುಂಬಿದ ರಸ್ತೆಗಳಲ್ಲಿ ಸಂಚರಿಸುವಾಗ ಟ್ರಾಫಿಕ್ ಜಾಮ್​​​​ನಿಂದ ಯುವಕನೊಬ್ಬ ಬೇಸತ್ತಿದ್ದಾನೆ. ಇದರಿಂದ ಆತ ಇನ್ನು ಕಾಯಲಾರೆ ಎಂಬಂತೆ ತನ್ನ ಸ್ಕೂಟರ್ ಅನ್ನು ತಲೆಯ ಮೇಲೆ ಹೊತ್ತುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಎರಡು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚರಿಸುವುದು ಕಷ್ಟವಾಗಿತ್ತು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. 7 ಕಿಲೋಮೀಟರ್‌ಗೂ ಹೆಚ್ಚು ದೂರ ಟ್ರಾಫಿಕ್ ಉಂಟಾಗಿತ್ತು.

ಟ್ರಾಫಿಕ್ ಜಾಮ್ ಅನ್ನು ತಪ್ಪಿಸುವ ಪ್ರಯತ್ನದಲ್ಲಿ ಒಬ್ಬ ವ್ಯಕ್ತಿ ಇನ್ನೊಬ್ಬನ ಸಹಾಯದಿಂದ, ಸ್ಕೂಟರ್ ಅನ್ನು ತಲೆಯ ಮೇಲೆ ಎತ್ತಿ ಕಾರು, ಬೈಕ್​ಗಳ ನಡುವೆ ಜಾಗ ಮಾಡಿಕೊಂಡು ಮುಂದೆ ಹೋಗಿದ್ದಾನೆ. 12 ಸೆಕೆಂಡುಗಳ ಈ ವಿಡಿಯೋ ಕ್ಲಿಪ್‌ನಲ್ಲಿ ಇಬ್ಬರೂ ಎಚ್ಚರಿಕೆಯಿಂದ ಸ್ಕೂಟರ್ ಅನ್ನು ತಲೆಯ ಮೇಲೆ ಎತ್ತಿ ವಾಹನಗಳ ನಡುವೆ ಚಲಿಸುತ್ತಿರುವುದನ್ನು ಸೆರೆಹಿಡಿಯಲಾಗಿದೆ. ಈ ವೀಡಿಯೊವನ್ನು “gurgaon_locals” ಪುಟವು Instagramನಲ್ಲಿ ಪೋಸ್ಟ್ ಮಾಡಿದೆ. ಈ ಘಟನೆ ಸೋಮವಾರ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಪ್ರವಾಹದಿಂದ ಟ್ರಾಫಿಕ್ ಜಾಮ್, ಸಂಚಾರ ಅಸ್ತವ್ಯಸ್ತ

ಈ ವೀಡಿಯೊ ನೆಟಿಜನ್‌ಗಳಿಂದ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಬಳಕೆದಾರರಲ್ಲಿ ಒಬ್ಬರು, “ಪ್ರತಿದಿನ ಸ್ಕೂಟಿ ನನ್ನನ್ನು ಮನೆಗೆ ಒಯ್ಯುತ್ತದೆ, ಇಂದು ನಾನು ಅದನ್ನು ಟ್ರಾಫಿಕ್‌ನಲ್ಲಿ ಸಿಲುಕಿಸಲು ಬಿಡುವುದಿಲ್ಲ. ಇಂದು ನಾನು ಸ್ಕೂಟಿಯನ್ನು ಮನೆಗೆ ಒಯ್ಯುತ್ತೇನೆ” ಎಂದು ಆ ಯುವಕನಿಗೆ ಶಹಬ್ಬಾಸ್ ಹೇಳಿದ್ದಾರೆ. ಇನ್ನೊಬ್ಬರು ಈ ರೀತಿ ಟ್ರಾಫಿಕ್​ನಲ್ಲಿ ಸಿಲುಕಿದ ವಾಹನವನ್ನು ಹೊರತರುವ ಹೊಸ ಬಿಸಿನೆಸ್ ಆರಂಭಿಸಬಹುದು ಎಂದು ತಮಾಷೆ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ