AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಮೆಟ್ರೋ ಸ್ಟೇಷನ್​ನಲ್ಲಿ ಗುಟ್ಕಾ ಕಲೆ, ನಾಗರಿಕ ಪ್ರಜ್ಞೆಯನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು

Gutka : ಹತ್ತು ದಿನಗಳ ಹಿಂದೆಯಷ್ಟೇ ಉದ್ಘಾಟನೆಗೊಂಡ ಅಹಮದಾಬಾದಿನ ಮೊಟೆರಾ ಸ್ಟೇಡಿಯಮ್ ಬಳಿಯ ಮೆಟ್ರೋ ಸ್ಟೇಷನ್​ನ ಮೂಲೆಮೂಲೆಯಲ್ಲಿ ಗುಟ್ಕಾ ಕಲೆಗಳು ಕಾಣಿಸುತ್ತಿವೆ. ಹೀಗಾದರೆ ಸುಧಾರಣೆ ಹೇಗಾದೀತು ಎಂದು ನೆಟ್ಟಿಗರು ಕಳವಳಗೊಂಡಿದ್ದಾರೆ.

ಗುಜರಾತ್​ನ ಮೆಟ್ರೋ ಸ್ಟೇಷನ್​ನಲ್ಲಿ ಗುಟ್ಕಾ ಕಲೆ, ನಾಗರಿಕ ಪ್ರಜ್ಞೆಯನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು
GUTKA stains at Ahmedabad Metro Station
TV9 Web
| Edited By: |

Updated on:Oct 19, 2022 | 11:05 AM

Share

Viral Video : ನಿಗದಿತ ಸಮಯಕ್ಕೆ ಸ್ವಚ್ಛವಾದ ಮತ್ತು ಹವಾನಿಯಂತ್ರಿತ ರೈಲಿನಲ್ಲಿ ಪ್ರಯಾಣಿಸಬಹುದು ಎಂಬ ಕಾರಣಕ್ಕೆ ಕೊಲ್ಕತ್ತಾ, ಬೆಂಗಳೂರು, ಅಹಮದಾಬಾದ್​, ಪುಣೆ, ಲಕ್ನೋ, ದೆಹಲಿಯ ಅನೇಕ ನಿವಾಸಿಗಳು ಮೆಟ್ರೋ ಪ್ರಯಾಣವನ್ನು ಇಷ್ಟಪಡುತ್ತಾರೆ. ಆದರೆ, ಅಕ್ಟೋಬರ್ 6 ರಂದು ಉದ್ಘಾಟನೆಗೊಂಡ ಗುಜರಾತಿನ ಅಹಮದಾಬಾದಿನ ಮೊಟೆರಾ ಸ್ಟೇಡಿಯಮ್ ಮೆಟ್ರೋ ಸ್ಟೇಷನ್​ ಬಗ್ಗೆ ಮಾತ್ರ ಅಪಸ್ವರ ಕೇಳಿಬರುತ್ತಿದೆ. ಕಾರಣ ಈ ಸ್ಟೇಷನ್​ನಲ್ಲಿ ಪ್ರಯಾಣಿಕರು ಎಲ್ಲೆಂದರಲ್ಲಿ ಗುಟ್ಕಾ ಉಗುಳಿ ಅನಾಗರಿಕತನ ಪ್ರದರ್ಶಿಸಿದ್ದಾರೆ. ನಿಲೇಶ್​ ಷಾ ಎಂಬುವವರು ವಾಟ್ಸಪ್​ನಲ್ಲಿ ಫಾರ್ವರ್ಡ್ ಆಗಿರುವ ವಿಡಿಯೋ ಅನ್ನು ಟ್ವೀಟ್​ ಮಾಡಿದ್ಧಾರೆ.

ಈತನಕ ಸುಮಾರು 2 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ನೆಟ್ಟಿಗರು ಬಹಳ ಖಾರವಾಗಿ ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ. ‘ಹೀಗಾದರೆ ಸುಧಾರಣೆ ಹೇಗಾದೀತು ಸರ್? ಯಾರೋ ಸೆಲೆಬ್ರಿಟಿಗಳು ಜಾಹೀರಾತಿನ ಮೂಲಕ ತಂಬಾಕಿನ ಉತ್ಪನ್ನಗಳಿಗೆ ಪ್ರಚಾರ ನೀಡುತ್ತಾರೆ. ಇದನ್ನು ನೋಡಿದ ಜನ ಪ್ರಭಾವಿತರಾಗಿ ನಾಗರಿಕ ಪ್ರಜ್ಞೆಯನ್ನು ಮರೆಯುತ್ತಾರೆ. ನಮ್ಮಲ್ಲಿ ನಾಗರಿಕ ಪ್ರಜ್ಞೆ ಜಾಗೃತವಾಗಬೇಕೆಂದರೆ ನಮಗೆ ಒಳ್ಳೆಯ ಸಂಸ್ಕೃತಿ ಮತ್ತು ಪರಿಸರ ಬೇಕು. ಆದರೆ ಇಂದು ನಾವಿದನ್ನು ಕಳೆದುಕೊಳ್ಳುತ್ತಿದ್ದೇವೆ’ ಎಂದಿದ್ದಾರೆ ಒಬ್ಬ ಖಾತೆದಾರರು. ‘ಅನಾಗರಿಕತನ ಪ್ರದರ್ಶಿದವರನ್ನು ಸಿಸಿಟಿವಿಯಲ್ಲಿ ಸಹಾಯದಿಂದ ಪತ್ತೆ ಮಾಡಬಹುದು’ ಎಂದಿದ್ದಾರೆ ಮತ್ತೊಬ್ಬರು.

ನಿಮಗೇನೆನ್ನಿಸುತ್ತಿದೆ ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:04 am, Wed, 19 October 22

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?