ಗುಜರಾತ್​ನ ಮೆಟ್ರೋ ಸ್ಟೇಷನ್​ನಲ್ಲಿ ಗುಟ್ಕಾ ಕಲೆ, ನಾಗರಿಕ ಪ್ರಜ್ಞೆಯನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು

Gutka : ಹತ್ತು ದಿನಗಳ ಹಿಂದೆಯಷ್ಟೇ ಉದ್ಘಾಟನೆಗೊಂಡ ಅಹಮದಾಬಾದಿನ ಮೊಟೆರಾ ಸ್ಟೇಡಿಯಮ್ ಬಳಿಯ ಮೆಟ್ರೋ ಸ್ಟೇಷನ್​ನ ಮೂಲೆಮೂಲೆಯಲ್ಲಿ ಗುಟ್ಕಾ ಕಲೆಗಳು ಕಾಣಿಸುತ್ತಿವೆ. ಹೀಗಾದರೆ ಸುಧಾರಣೆ ಹೇಗಾದೀತು ಎಂದು ನೆಟ್ಟಿಗರು ಕಳವಳಗೊಂಡಿದ್ದಾರೆ.

ಗುಜರಾತ್​ನ ಮೆಟ್ರೋ ಸ್ಟೇಷನ್​ನಲ್ಲಿ ಗುಟ್ಕಾ ಕಲೆ, ನಾಗರಿಕ ಪ್ರಜ್ಞೆಯನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು
GUTKA stains at Ahmedabad Metro Station
Follow us
| Updated By: ಶ್ರೀದೇವಿ ಕಳಸದ

Updated on:Oct 19, 2022 | 11:05 AM

Viral Video : ನಿಗದಿತ ಸಮಯಕ್ಕೆ ಸ್ವಚ್ಛವಾದ ಮತ್ತು ಹವಾನಿಯಂತ್ರಿತ ರೈಲಿನಲ್ಲಿ ಪ್ರಯಾಣಿಸಬಹುದು ಎಂಬ ಕಾರಣಕ್ಕೆ ಕೊಲ್ಕತ್ತಾ, ಬೆಂಗಳೂರು, ಅಹಮದಾಬಾದ್​, ಪುಣೆ, ಲಕ್ನೋ, ದೆಹಲಿಯ ಅನೇಕ ನಿವಾಸಿಗಳು ಮೆಟ್ರೋ ಪ್ರಯಾಣವನ್ನು ಇಷ್ಟಪಡುತ್ತಾರೆ. ಆದರೆ, ಅಕ್ಟೋಬರ್ 6 ರಂದು ಉದ್ಘಾಟನೆಗೊಂಡ ಗುಜರಾತಿನ ಅಹಮದಾಬಾದಿನ ಮೊಟೆರಾ ಸ್ಟೇಡಿಯಮ್ ಮೆಟ್ರೋ ಸ್ಟೇಷನ್​ ಬಗ್ಗೆ ಮಾತ್ರ ಅಪಸ್ವರ ಕೇಳಿಬರುತ್ತಿದೆ. ಕಾರಣ ಈ ಸ್ಟೇಷನ್​ನಲ್ಲಿ ಪ್ರಯಾಣಿಕರು ಎಲ್ಲೆಂದರಲ್ಲಿ ಗುಟ್ಕಾ ಉಗುಳಿ ಅನಾಗರಿಕತನ ಪ್ರದರ್ಶಿಸಿದ್ದಾರೆ. ನಿಲೇಶ್​ ಷಾ ಎಂಬುವವರು ವಾಟ್ಸಪ್​ನಲ್ಲಿ ಫಾರ್ವರ್ಡ್ ಆಗಿರುವ ವಿಡಿಯೋ ಅನ್ನು ಟ್ವೀಟ್​ ಮಾಡಿದ್ಧಾರೆ.

ಈತನಕ ಸುಮಾರು 2 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ನೆಟ್ಟಿಗರು ಬಹಳ ಖಾರವಾಗಿ ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ. ‘ಹೀಗಾದರೆ ಸುಧಾರಣೆ ಹೇಗಾದೀತು ಸರ್? ಯಾರೋ ಸೆಲೆಬ್ರಿಟಿಗಳು ಜಾಹೀರಾತಿನ ಮೂಲಕ ತಂಬಾಕಿನ ಉತ್ಪನ್ನಗಳಿಗೆ ಪ್ರಚಾರ ನೀಡುತ್ತಾರೆ. ಇದನ್ನು ನೋಡಿದ ಜನ ಪ್ರಭಾವಿತರಾಗಿ ನಾಗರಿಕ ಪ್ರಜ್ಞೆಯನ್ನು ಮರೆಯುತ್ತಾರೆ. ನಮ್ಮಲ್ಲಿ ನಾಗರಿಕ ಪ್ರಜ್ಞೆ ಜಾಗೃತವಾಗಬೇಕೆಂದರೆ ನಮಗೆ ಒಳ್ಳೆಯ ಸಂಸ್ಕೃತಿ ಮತ್ತು ಪರಿಸರ ಬೇಕು. ಆದರೆ ಇಂದು ನಾವಿದನ್ನು ಕಳೆದುಕೊಳ್ಳುತ್ತಿದ್ದೇವೆ’ ಎಂದಿದ್ದಾರೆ ಒಬ್ಬ ಖಾತೆದಾರರು. ‘ಅನಾಗರಿಕತನ ಪ್ರದರ್ಶಿದವರನ್ನು ಸಿಸಿಟಿವಿಯಲ್ಲಿ ಸಹಾಯದಿಂದ ಪತ್ತೆ ಮಾಡಬಹುದು’ ಎಂದಿದ್ದಾರೆ ಮತ್ತೊಬ್ಬರು.

ನಿಮಗೇನೆನ್ನಿಸುತ್ತಿದೆ ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:04 am, Wed, 19 October 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು