AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಮೆಟ್ರೋ ಸ್ಟೇಷನ್​ನಲ್ಲಿ ಗುಟ್ಕಾ ಕಲೆ, ನಾಗರಿಕ ಪ್ರಜ್ಞೆಯನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು

Gutka : ಹತ್ತು ದಿನಗಳ ಹಿಂದೆಯಷ್ಟೇ ಉದ್ಘಾಟನೆಗೊಂಡ ಅಹಮದಾಬಾದಿನ ಮೊಟೆರಾ ಸ್ಟೇಡಿಯಮ್ ಬಳಿಯ ಮೆಟ್ರೋ ಸ್ಟೇಷನ್​ನ ಮೂಲೆಮೂಲೆಯಲ್ಲಿ ಗುಟ್ಕಾ ಕಲೆಗಳು ಕಾಣಿಸುತ್ತಿವೆ. ಹೀಗಾದರೆ ಸುಧಾರಣೆ ಹೇಗಾದೀತು ಎಂದು ನೆಟ್ಟಿಗರು ಕಳವಳಗೊಂಡಿದ್ದಾರೆ.

ಗುಜರಾತ್​ನ ಮೆಟ್ರೋ ಸ್ಟೇಷನ್​ನಲ್ಲಿ ಗುಟ್ಕಾ ಕಲೆ, ನಾಗರಿಕ ಪ್ರಜ್ಞೆಯನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು
GUTKA stains at Ahmedabad Metro Station
TV9 Web
| Updated By: ಶ್ರೀದೇವಿ ಕಳಸದ|

Updated on:Oct 19, 2022 | 11:05 AM

Share

Viral Video : ನಿಗದಿತ ಸಮಯಕ್ಕೆ ಸ್ವಚ್ಛವಾದ ಮತ್ತು ಹವಾನಿಯಂತ್ರಿತ ರೈಲಿನಲ್ಲಿ ಪ್ರಯಾಣಿಸಬಹುದು ಎಂಬ ಕಾರಣಕ್ಕೆ ಕೊಲ್ಕತ್ತಾ, ಬೆಂಗಳೂರು, ಅಹಮದಾಬಾದ್​, ಪುಣೆ, ಲಕ್ನೋ, ದೆಹಲಿಯ ಅನೇಕ ನಿವಾಸಿಗಳು ಮೆಟ್ರೋ ಪ್ರಯಾಣವನ್ನು ಇಷ್ಟಪಡುತ್ತಾರೆ. ಆದರೆ, ಅಕ್ಟೋಬರ್ 6 ರಂದು ಉದ್ಘಾಟನೆಗೊಂಡ ಗುಜರಾತಿನ ಅಹಮದಾಬಾದಿನ ಮೊಟೆರಾ ಸ್ಟೇಡಿಯಮ್ ಮೆಟ್ರೋ ಸ್ಟೇಷನ್​ ಬಗ್ಗೆ ಮಾತ್ರ ಅಪಸ್ವರ ಕೇಳಿಬರುತ್ತಿದೆ. ಕಾರಣ ಈ ಸ್ಟೇಷನ್​ನಲ್ಲಿ ಪ್ರಯಾಣಿಕರು ಎಲ್ಲೆಂದರಲ್ಲಿ ಗುಟ್ಕಾ ಉಗುಳಿ ಅನಾಗರಿಕತನ ಪ್ರದರ್ಶಿಸಿದ್ದಾರೆ. ನಿಲೇಶ್​ ಷಾ ಎಂಬುವವರು ವಾಟ್ಸಪ್​ನಲ್ಲಿ ಫಾರ್ವರ್ಡ್ ಆಗಿರುವ ವಿಡಿಯೋ ಅನ್ನು ಟ್ವೀಟ್​ ಮಾಡಿದ್ಧಾರೆ.

ಈತನಕ ಸುಮಾರು 2 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ನೆಟ್ಟಿಗರು ಬಹಳ ಖಾರವಾಗಿ ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ. ‘ಹೀಗಾದರೆ ಸುಧಾರಣೆ ಹೇಗಾದೀತು ಸರ್? ಯಾರೋ ಸೆಲೆಬ್ರಿಟಿಗಳು ಜಾಹೀರಾತಿನ ಮೂಲಕ ತಂಬಾಕಿನ ಉತ್ಪನ್ನಗಳಿಗೆ ಪ್ರಚಾರ ನೀಡುತ್ತಾರೆ. ಇದನ್ನು ನೋಡಿದ ಜನ ಪ್ರಭಾವಿತರಾಗಿ ನಾಗರಿಕ ಪ್ರಜ್ಞೆಯನ್ನು ಮರೆಯುತ್ತಾರೆ. ನಮ್ಮಲ್ಲಿ ನಾಗರಿಕ ಪ್ರಜ್ಞೆ ಜಾಗೃತವಾಗಬೇಕೆಂದರೆ ನಮಗೆ ಒಳ್ಳೆಯ ಸಂಸ್ಕೃತಿ ಮತ್ತು ಪರಿಸರ ಬೇಕು. ಆದರೆ ಇಂದು ನಾವಿದನ್ನು ಕಳೆದುಕೊಳ್ಳುತ್ತಿದ್ದೇವೆ’ ಎಂದಿದ್ದಾರೆ ಒಬ್ಬ ಖಾತೆದಾರರು. ‘ಅನಾಗರಿಕತನ ಪ್ರದರ್ಶಿದವರನ್ನು ಸಿಸಿಟಿವಿಯಲ್ಲಿ ಸಹಾಯದಿಂದ ಪತ್ತೆ ಮಾಡಬಹುದು’ ಎಂದಿದ್ದಾರೆ ಮತ್ತೊಬ್ಬರು.

ನಿಮಗೇನೆನ್ನಿಸುತ್ತಿದೆ ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:04 am, Wed, 19 October 22

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್