AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಿಶೇಷ ಚೇತನ ವ್ಯಕ್ತಿಗೆ ಬ್ರಿಡ್ಜ್‌ ದಾಟಲು ನೆರವಾದ ಟ್ರಾಫಿಕ್‌ ಪೊಲೀಸ್, ಈ ಕಾರ್ಯವನ್ನು ಶ್ಲಾಘಿಸಿದ ಸಿಎಂ

ಟ್ರಾಫಿಕ್‌ ಪೊಲೀಸ್‌ ಅಧಿಕಾರಿಯೊಬ್ಬರು ವಿಕಲಾಂಗ ಚೇತನ ವ್ಯಕ್ತಿ ಕುಳಿತಿದ್ದಂತಹ ತಳ್ಳು ಗಾಡಿಯನ್ನು ತಳ್ಳುತ್ತಾ ಆ ವ್ಯಕ್ತಿಗೆ ಬ್ರಿಡ್ಜ್‌ ದಾಟಲು ಸಹಾಯವನ್ನು ಮಾಡಿದ್ದು, ಕರ್ತವ್ಯದ ನಡುವೆಯೂ ಮಾನವೀಯತೆಯನ್ನು ಮೆರೆದ ಟ್ರಾಫಿಕ್‌ ಪೊಲೀಸ್‌ ಅಧಿಕಾರಿಯ ಈ ಕಾರ್ಯಕ್ಕೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Video: ವಿಶೇಷ ಚೇತನ ವ್ಯಕ್ತಿಗೆ ಬ್ರಿಡ್ಜ್‌ ದಾಟಲು ನೆರವಾದ ಟ್ರಾಫಿಕ್‌ ಪೊಲೀಸ್, ಈ ಕಾರ್ಯವನ್ನು ಶ್ಲಾಘಿಸಿದ ಸಿಎಂ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 18, 2024 | 4:32 PM

Share

ಟ್ರಾಫಿಕ್‌ ಪೊಲೀಸ್‌ ಆಗಿ ಸೇವೆ ಸಲ್ಲಿಸುವುದು ಸವಾಲಿನ ಸಂಗತಿಯೇ ಸರಿ. ವಾಹದ ದಟ್ಟಣೆ, ಮಳೆ, ಸುಡು ಬಿಸಿಲು ಹೀಗೆ ಎಂತಹ ಕಠಿಣ ಪರಿಸ್ಥಿತಿಯಲ್ಲೂ ಟ್ರಾಫಿಕ್‌ ಪೊಲೀಸರು ತಾಳ್ಮೆಯನ್ನು ಕಳೆದುಕೊಳ್ಳದೆ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುತ್ತಾರೆ. ಜೊತೆ ಜೊತೆ ವಾಹನ ಸವಾರರ, ಸಾರ್ವಜನಿಕರ ಜೀವ ರಕ್ಷಣೆಗಾಗಿ ಮಾನವೀಯ ಕಾರ್ಯಗಳನ್ನು ಮಾಡುತ್ತಿರುತ್ತಾರೆ. ಇಂತಹ ಸುದ್ದಿಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಅದೇ ರೀತಿ ಟ್ರಾಫಿಕ್‌ ಪೊಲೀಸ್‌ ಅಧಕಾರಿಯೊಬ್ಬರು ಬ್ರಿಡ್ಜ್‌ ದಾಟಲು ವಿಶೇಷ ಚೇತನ ವ್ಯಕ್ತಿಯೊಬ್ಬರಿಗೆ ಸಹಾಯ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗಿದೆ.

ಗುವಾಹಟಿಯ ಟ್ರಾಫಿಕ್‌ ಪೊಲೀಸ್‌ ಅಧಿಕಾರಿ ತಮ್ಮ ಒತ್ತಡದ ಕೆಲಸದ ನಡುವೆಯೂ ವಿಕಲ ಚೇತನ ವ್ಯಕ್ತಿಯೊಬ್ಬರು ಕುಳಿತಿದ್ದಂತಹ ತಳ್ಳು ಗಾಡಿಯನ್ನು ತಳ್ಳುತ್ತಾ ಅವರಿಗೆ ಬ್ರಿಡ್ಜ್‌ ದಾಟಲು ಸಹಾಯವನ್ನು ಮಾಡಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇವರ ಈ ಮಾನವೀಯ ಕಾರ್ಯಕ್ಕೆ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದು, “ನಮ್ಮ ಪೊಲೀಸ್‌ ಅಧಿಕಾರಿಗಳು ಅಸ್ಸಾಂನ ನಾಗರಿಕರಿಗೆ ಸಹಾಯ ಹಸ್ತ ಚಾಚಲು ಯಾವಾಗಲೂ ಸಿದ್ಧರಿರುತ್ತಾರೆ. ವಿಶೇಷ ಚೇತನ ವ್ಯಕ್ತಿಗೆ ಬ್ರಿಡ್ಜ್‌ ದಾಟಲು ಸಹಾಯ ಮಾಡಿದ ಟ್ರಾಫಿಕ್‌ ಪೊಲೀಸ್‌ ಜವಾನನಿಗೆ ನನ್ನ ಅಭಿನಂದನೆಗಳು” ಎಂದು ಹೇಳಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು ANI ಸುದ್ದಿ ಸಂಸ್ಥೆ ತನ್ನ ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. 8 ಸೆಕೆಂಡುಗಳ ಈ ವೈರಲ್‌ ವಿಡಿಯೋದಲ್ಲಿ ಟ್ರಾಫಿಕ್‌ ಪೊಲೀಸ್‌ ಅಧಿಕಾರಿಯೊಬ್ಬರು ತಮ್ಮ ಒತ್ತಡದ ಕೆಲಸದ ನಡುವೆಯೂ ವಿಶೇಷ ಚೇತನ ವ್ಯಕ್ತಿಯೊಬ್ಬರ ತಳ್ಳು ಗಾಡಿಯನ್ನು ತಳ್ಳುತ್ತಾ ಹೋಗಿ ಅವರಿಗೆ ಬ್ರಿಡ್ಜ್‌ ದಾಟಲು ಸಹಾಯ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಈಕೆ ತಾಯಿಯಲ್ಲ ನರರೂಪದ ರಾಕ್ಷಸಿ; ಮಗನಿಗೆ ಮನಬಂದಂತೆ ಥಳಿಸಿದ ಹೆತ್ತಮ್ಮ

ಇಂದು ಮಧ್ಯಾಹ್ನ ಹಂಚಿಕೊಳ್ಳಲಾದ ಈ ವಿಡಿಯೋ 10 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೆಟ್ಟಿಗರು ಪೊಲೀಸಪ್ಪನ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ