AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ತಿಂಡಿಗೆ ಅವಲಕ್ಕಿ ಬದಲು ಡ್ರೈ ಫ್ರೂಟ್ಸ್‌ ಕೊಟ್ಟ ಗಂಡ, ಕೋಪದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಪರೀಕ್ಷೆಯಲ್ಲಿ ಫೇಲ್‌ ಆದ್ರೆ, ಲವ್‌ ಬ್ರೇಕಪ್‌ ಆದ್ರೆ, ಗಂಡನ ಕಿರುಕುಳ ತಾಳಲಾರದೆ, ಸಾಲಗಾರರ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವವರನ್ನು ನೋಡಿರುತ್ತೇವೆ. ಆದ್ರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಗಂಡ ಬೆಳಗ್ಗಿನ ಉಪಹಾರಕ್ಕೆ ತನ್ನಿಷ್ಟದ ಅವಲಕ್ಕಿ ಬದಲು ಡ್ರೈಫ್ರೂಟ್ಸ್‌ ನೀಡಿದನೆಂದು ಕೋಪದ ಕೈಗೆ ಬುದ್ಧಿ ಕೊಟ್ಟು ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಕುರಿತ ಸುದ್ದಿಯೊಂದು ಇದೀಗ ಭಾರೀ ವೈರಲ್‌ ಆಗುತ್ತಿದೆ.

Viral: ತಿಂಡಿಗೆ ಅವಲಕ್ಕಿ ಬದಲು ಡ್ರೈ ಫ್ರೂಟ್ಸ್‌ ಕೊಟ್ಟ ಗಂಡ, ಕೋಪದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ
ವೈರಲ್​​ ಸುದ್ದಿ
ಮಾಲಾಶ್ರೀ ಅಂಚನ್​
| Edited By: |

Updated on: Sep 02, 2024 | 9:09 AM

Share

ಗಂಡ ಹೆಂಡತಿ ಮಧ್ಯೆ ಪ್ರೀತಿಯಿರುವ ಹಾಗೆಯೇ ಜಗಳಗಳು ಸಹ ಸಾಮಾನ್ಯವಾಗಿರುತ್ತದೆ. ಊಟ ತಿಂಡಿಯ ವಿಚಾರಕ್ಕೆ, ಮಕ್ಕಳನ್ನು ನೋಡಿಕೊಳ್ಳುವ ವಿಚಾರಕ್ಕೆ ಗಂಡ-ಹೆಂಡತಿ ಮಧ್ಯೆ ಸಣ್ಣ ಪುಟ್ಟ ಜಗಳ, ಮನಸ್ಥಾಪಗಳು ನಡೆಯುತ್ತಲೇ ಇರುತ್ತವೆ. ಹೌದು ಅಡುಗೆಗೆ ಉಪ್ಪಿಲ್ಲ, ಖಾರ ಇಲ್ಲ ಅನ್ನೋ ವಿಚಾರಕ್ಕೆ ಆಗಾಗ್ಗೆ ಸಣ್ಣಪುಟ್ಟ ಜಗಳಗಳು ನಡೆಯುತ್ತಿರುತ್ತವೆ. ಆದ್ರೆ ಎಂದಿಗೂ ಈ ಜಗಳಗಳು ಆತ್ಮಹತ್ಯೆ ಅಥವಾ ಕೊಲೆಯ ಹಂತಕ್ಕೆ ಹೋಗುವುದಿಲ್ಲ. ಆದ್ರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಬೆಳಗ್ಗಿನ ತಿಂಡಿಯ ವಿಚಾರವಾಗಿ ಶುರುವಾದ ಜಗಳ ಆತ್ಮಹತ್ಯೆಯಲ್ಲಿ ಕೊನೆಗೊಂಡಿದೆ. ಹೌದು ಇಲ್ಲೊಬ್ಳು ಮಹಿಳೆ ತನ್ನ ಗಂಡ ಬೆಳಗ್ಗಿನ ಉಪಹಾರಕ್ಕೆ ತನ್ನಿಷ್ಟದ ಪೋಹ ಮಾಡದೆ ಬರಿ ಡ್ರೈ ಫ್ರೂಟ್ಸ್‌ ತಿನ್ನಲು ಕೊಟ್ಟಿದ್ದಾನೆಂದು ಕೋಪಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಕುರಿತ ಸುದ್ದಿಯೊಂದು ಭಾರೀ ವೈರಲ್‌ ಆಗಿದೆ.

ಈ ವಿಚಿತ್ರ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದ್ದು, ಗಂಡ ಅವಲಕ್ಕಿ (ಪೋಹಾ) ಮಾಡಿಲ್ಲವೆಂದು ದುಡುಕು ನಿರ್ಧಾರವನ್ನು ತೆಗೆದುಕೊಂಡು ಮಹಿಳೆಯೊಬ್ರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲ್ಲಿನ ಮುರಾರ್‌ ಪ್ರದೇಶದ ಬಾಲ್ಕಿಶನ್‌ ಜದೌನ್‌ ಎಂಬವರು ಒಂದು ವರ್ಷದ ಹಿಂದೆ ಕವಿತ ಎನ್ನುವವರನ್ನು ಮದುವೆಯಾಗಿದ್ದರು. ಇಬ್ಬರೂ ಬಹಳ ಸಂತೋಷದಿಂದ ಜೀವನ ನಡೆಸುತ್ತಿದ್ದರು. ಆದ್ರೆ ಕ್ಷುಲ್ಲಕ ಕಾರಣಕ್ಕೆ ದುಡುಕು ನಿರ್ಧಾರವನ್ನು ತೆಗೆದುಕೊಂಡು ಕವಿತಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: 2 ವರ್ಷದ ಮಗುವಿನ ಮೇಲೆ ಹರಿದ ಕಸದ ಟ್ರಕ್‌; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶನಿವಾರ (ಆಗಸ್ಟ್‌ 31) ಕವಿತಾ ಬೆಳಗ್ಗಿನ ಉಪಹಾರಕ್ಕೆ ಅವಲಕ್ಕಿಯನ್ನು ಮಾಡಿಕೊಂಡು ಎಂದು ಕೇಳಿಕೊಂಡಿದ್ದರು. ಆದರೆ ಪತಿ ಕೇವಲ ಡ್ರೈ ಫ್ರೂಟ್ಸ್‌ ನೀಡಿದ್ದರು. ಇದರಿಂದ ಸಿಟ್ಟಿಗೆದ್ದ ಕವಿತಾ ಸೀದಾ ಕೋಣೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ವರದಿಯಾದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಆರಂಭಿಸಿದ್ದಾರೆ. ಕವಿತಾ ನವ ವಿವಾಹಿತೆ ಆಗಿರುವುದರಿಂದ ವರದಕ್ಷಿಣೆ ಸೇರಿದಂಯೆ ಕೌಟುಂಬಿಕ ದೌರ್ಜನ್ಯದಂತಹ ಇತ್ಯಾದಿ ಆಯಾಮಗಳಿಂದಲೂ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಇಲ್ಲಿನ ಹೆಚ್ಚುವರಿ ಎಸ್ಪಿ ನಿರಂಜನ್‌ ಶರ್ಮಾ ಅವರು ಹೇಳಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?