AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Har Ghar Tiranga: ಸ್ಥಳೀಯ ಅಂಚೆ ಕಚೇರಿಗಳಲ್ಲಿ ಕಡಿಮೆ ಬೆಲೆಗೆ ರಾಷ್ಟ್ರಧ್ವಜ ಮಾರಾಟ; ಖರೀದಿಸುವ ವಿಧಾನ ಇಲ್ಲಿದೆ

ಭಾರತದ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವದ ಪ್ರಯುಕ್ತ ಅಂಚೆ ಕಚೇರಿಗಳು ಹರ್ ಘರ್ ತಿರಂಗಾ ಅಭಿಯಾನದ ಮೂಲಕ ದೇಶದಾದ್ಯಂತ ರಾಷ್ಟ್ರಧ್ವಜಗಳನ್ನು ಮಾರಾಟ ಮಾಡುತ್ತಿವೆ. ಧ್ವಜ ಖರೀದಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

Har Ghar Tiranga: ಸ್ಥಳೀಯ ಅಂಚೆ ಕಚೇರಿಗಳಲ್ಲಿ ಕಡಿಮೆ ಬೆಲೆಗೆ ರಾಷ್ಟ್ರಧ್ವಜ ಮಾರಾಟ; ಖರೀದಿಸುವ ವಿಧಾನ ಇಲ್ಲಿದೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 04, 2022 | 11:05 AM

Share

ಭಾರತದ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವದ ಪ್ರಯುಕ್ತ ಅಂಚೆ ಕಚೇರಿಗಳು ಹರ್ ಘರ್ ತಿರಂಗಾ ಅಭಿಯಾನದ ಮೂಲಕ ದೇಶದಾದ್ಯಂತ ರಾಷ್ಟ್ರಧ್ವಜಗಳನ್ನು ಮಾರಾಟ ಮಾಡುತ್ತಿವೆ. ಅಂಚೆ ಇಲಾಖೆಯು ಇ-ಪೋಸ್ಟ್ ಆಫೀಸ್ ಪೋರ್ಟಲ್ www.epostoffice.gov.in ಮೂಲಕ ಧ್ವಜಗಳ ಆನ್‌ಲೈನ್ ಮಾರಾಟವನ್ನು ಈಗಾಗಲೇ ಅರಂಭಿಸಿದ್ದು, ಕನಿಷ್ಠ ಸಮಯದಲ್ಲಿ ಧ್ವಜಗಳನ್ನು ತಲುಪಿಸಲು ಇಲಾಖೆಯು ಅಂಚೆ ಕಚೇರಿಗಳಿಗೆ ಆದೇಶಿಸಿದೆ. ನಾಗರಿಕರ ಮನೆಗಳಲ್ಲಿ ಹಗಲು ರಾತ್ರಿ ಭಾರತೀಯ ಧ್ವಜವನ್ನು ಹಾರಿಸಲು ಸರ್ಕಾರವು ಭಾರತದ ಧ್ವಜ ಸಂಹಿತೆಗೆ ತಿದ್ದುಪಡಿ ತಂದಿದೆ. ಹೀಗಿದ್ದಾಗ ನಿಮ್ಮ ಮನೆಗಳಲ್ಲಿ ಧ್ವಜವನ್ನು ಹಾರಿಸಲು ಹೆಚ್ಚಿನ ಮೊತ್ತವನ್ನು ಪಾವತಿಸಿ ಧ್ವಜವನ್ನು ಖರೀದಿಸುವ ಅವಶ್ಯಕತೆ ಇಲ್ಲ. ಅಂಚೆ ಮೂಲಕ ಕೇವಲ 25 ರೂಪಾಯಿಗಳಲ್ಲಿ ಖರೀದಿಸಬಹುದು. ಖರೀದಿ ಹಂತಗಳು ಈ ಕೆಳಗಿನಂತಿವೆ.

ಭಾರತೀಯ ಧ್ವಜವನ್ನು ಹೇಗೆ ಖರೀದಿಸುವುದು?

ಅಂಚೆ ಇಲಾಖೆಯು ಇತ್ತೀಚೆಗೆ ಇ-ಪೋಸ್ಟ್ ಆಫೀಸ್ ಪೋರ್ಟಲ್ www.epostoffice.gov.in ಮೂಲಕ ರಾಷ್ಟ್ರೀಯ ಧ್ವಜಗಳ ಆನ್‌ಲೈನ್ ಮಾರಾಟವನ್ನು ಪ್ರಕಟಿಸಿದೆ. ಈ ವೆಬ್​ಸೈಟ್​ಗೆ ಭೇಟಿ ಕೊಡಬೇಕು. ePostoffice ಪೋರ್ಟಲ್ ಮುಖಪುಟದಲ್ಲಿ ಭಾರತದ ರಾಷ್ಟ್ರಧ್ವಜದ ಚಿತ್ರದ ಮೇಲೆ ಕ್ಲಿಕ್ ಮಾಡಿ. ನಂತರ ವಿತರಣೆಯ ವಿಳಾಸ, ಧ್ವಜಗಳ ಪ್ರಮಾಣ (ಗ್ರಾಹಕರಿಗೆ ಆರಂಭಿಕವಾಗಿ ಗರಿಷ್ಠ 5 ಧ್ವಜಗಳು) ಮತ್ತು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಿರ್ದಿಷ್ಟಪಡಿಸಿ. ಖರೀದಿ ಪ್ರಕ್ರಿಯೆಯಲ್ಲಿ ಇತ್ತೀಚಿನ ಧ್ವಜದ ನಿಯಮಗಳನ್ನು ಅನುಸರಿಸಲು ನಿಮ್ಮನ್ನು ಕೇಳಲಾಗುತ್ತದೆ. ಆರ್ಡರ್ ಅನ್ನು ಪೂರ್ಣಗೊಳಿಸಲು ಪಾವತಿ ಮಾಡಬೇಕು.

ಧ್ವಜದ ಬೆಲೆ ಮತ್ತು ಗಾತ್ರ

ಭಾರತೀಯ ಧ್ವಜದ ಗಾತ್ರವು 20 x 30 ಇಂಚುಗಳಷ್ಟು ಗಾತ್ರ ಇರುತ್ತದೆ. ತ್ರಿವರ್ಣ ಧ್ವಜದ ಮಾರಾಟ ಬೆಲೆ ಪ್ರತಿ ಧ್ವಜಕ್ಕೆ 25 ರೂಪಾಯಿ ಆಗಿದೆ. ಗಮನಿಸಬೇಕಾದ ಅಂಶವೆಂದರೆ ಧ್ವಜದ ಮೇಲೆ ಜಿಎಸ್‌ಟಿ ಇರುವುದಿಲ್ಲ. ಒಂದೊಮ್ಮೆ ನೀವು ಆರ್ಡರ್ ಮಾಡಿದ ನಂತರ ಅದನ್ನು ರದ್ದು ಮಾಡುವ ಅವಕಾಶ ಇರುವುದಿಲ್ಲ. ನೀವು ಆರ್ಡರ್ ಮಾಡಿದ ನಂತರ ಹತ್ತಿರದ ಅಂಚೆ ಕಚೇರಿಯಿಂದ ಉಚಿತವಾಗಿ ನೀಡಲಾಗುತ್ತದೆ.

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್