AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Har Ghar Tiranga: ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಖಜುರಾಹೊದ ದೇವಾಲಯಗಳು

ಸ್ವಾತಂತ್ರ್ಯದ ಅಮೃತ ಮಹೋತ್ಸದ ಪ್ರಯುಕ್ತ ಖಜುರಾಹೊದ ಚಂದೇಲ್ ಕಾರ್ಪೆಟ್ ವಿಶ್ವನಾಥ ದೇವಸ್ಥಾನವನ್ನು ರಾತ್ರಿ ವೇಳೆ ಮೂರು ಬಣ್ಣಗಳ ದೀಪಗಳಿಂದ ಅಲಂಕರಿಸಲಾಗಿತ್ತು. ಧ್ವಜದ ಬಣ್ಣಗಳ ರೋಮಾಂಚಕ ಕಲಾಕೃತಿಯನ್ನು ನೋಡಿದ ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದರು.

Har Ghar Tiranga: ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಖಜುರಾಹೊದ ದೇವಾಲಯಗಳು
ರಾಷ್ಟ್ರ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ದೇವಾಲಯ
Follow us
TV9 Web
| Updated By: Rakesh Nayak Manchi

Updated on: Aug 04, 2022 | 9:42 AM

ಟ್ರೆಂಡಿಂಗ್ ನ್ಯೂಸ್: ಸ್ವಾತಂತ್ರ್ಯದ ಅಮೃತ ಮಹೋತ್ಸದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರ ಮನವಿಯ ನಂತರ ಇಡೀ ದೇಶವೇ ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ (Har Ghar Tiranga Campaign) ಭಾಗವಹಿಸಿದ್ದು, ಅನೇಕ ಕಡೆಗಳಲ್ಲಿ ದೇವಾಲಯಗಳು ವಿಶೇಷವಾಗಿ ಅಭಿಯಾನದಲ್ಲಿ ಪಾಲ್ಗೊಂಡಿವೆ. ಈ ಪೈಕಿ ಖಜುರಾಹೊದ ದೇವಾಲಯಗಳು ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿವೆ. ಖಜುರಾಹೊದ ಚಂದೇಲ್ ಕಾರ್ಪೆಟ್ ವಿಶ್ವನಾಥ ದೇವಸ್ಥಾನವನ್ನು ರಾತ್ರಿ ವೇಳೆ ಮೂರು ಬಣ್ಣಗಳ ದೀಪಗಳಿಂದ ಅಲಂಕರಿಸಲಾಗಿತ್ತು. ಧ್ವಜದ ಬಣ್ಣಗಳ ರೋಮಾಂಚಕ ಕಲಾಕೃತಿಯನ್ನು ನೋಡಿದ ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದರು.

ಸ್ವಾತಂತ್ರ್ಯದ ಅಮೃತಮಹೋತ್ಸವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ ಇಡೀ ದೇಶವು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು. ಅಲ್ಲದೆ ಪ್ರಜೆಗಳು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ರಾಷ್ಟ್ರಧ್ವಜದ ಪ್ರೊಫೈಲ್ ಫೋಟೋಗಳನ್ನು ಹಾಕುವಂತೆಯೂ ಸಲಹೆ ನೀಡಿದ್ದಾರೆ.

ಪ್ರಧಾನಿ ಮೋದಿಯವರ ಮನವಿಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಕೋಟ್ಯಾಂತರ ಜನರು ತಮ್ಮ ಪ್ರೊಫೈಲ್​ನಲ್ಲಿ ತಿರಂಗದ ಫೋಟೋವನ್ನು ಹಾಕಿದ್ದಾರೆ. ಇನ್ನೂ ಕೆಲವರು ತ್ರಿವರ್ಣ ಧ್ವಜದೊಂದಿಗಿನ ತಮ್ಮ ಭಾವಚಿತ್ರವಿರುವ ಫೋಟೋವನ್ನು ಹಾಕಿಕೊಂಡು ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

ಸಾಮಾನ್ಯ ಜನರ ಜೊತೆಗೆ ದೇಶದ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ಕೂಡ ಈ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರ ಡಿಪಿಯಲ್ಲಿ ತ್ರಿವರ್ಣ ಧ್ವಜದ ಚಿತ್ರ ಹಾಕಲಾಗಿದೆ. ಇದೇ ವೇಳೆ ಪ್ರಧಾನಿ ಮೋದಿಯವರ ಈ ಅಭಿಯಾನಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡ ಹೊಸ ಅಭಿಯಾನ ಆರಂಭಿಸಿದೆ. ಕಾಂಗ್ರೆಸ್ ಪಕ್ಷವು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದಿರುವ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಚಿತ್ರವನ್ನು ಡಿಪಿಯಲ್ಲಿ ಹಾಕಲು ಪ್ರಾರಂಭಿಸಿದೆ.

ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು