AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Har Ghar Tiranga: ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಖಜುರಾಹೊದ ದೇವಾಲಯಗಳು

ಸ್ವಾತಂತ್ರ್ಯದ ಅಮೃತ ಮಹೋತ್ಸದ ಪ್ರಯುಕ್ತ ಖಜುರಾಹೊದ ಚಂದೇಲ್ ಕಾರ್ಪೆಟ್ ವಿಶ್ವನಾಥ ದೇವಸ್ಥಾನವನ್ನು ರಾತ್ರಿ ವೇಳೆ ಮೂರು ಬಣ್ಣಗಳ ದೀಪಗಳಿಂದ ಅಲಂಕರಿಸಲಾಗಿತ್ತು. ಧ್ವಜದ ಬಣ್ಣಗಳ ರೋಮಾಂಚಕ ಕಲಾಕೃತಿಯನ್ನು ನೋಡಿದ ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದರು.

Har Ghar Tiranga: ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ಖಜುರಾಹೊದ ದೇವಾಲಯಗಳು
ರಾಷ್ಟ್ರ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ದೇವಾಲಯ
TV9 Web
| Edited By: Rakesh Nayak Manchi|

Updated on: Aug 04, 2022 | 9:42 AM

Share

ಟ್ರೆಂಡಿಂಗ್ ನ್ಯೂಸ್: ಸ್ವಾತಂತ್ರ್ಯದ ಅಮೃತ ಮಹೋತ್ಸದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರ ಮನವಿಯ ನಂತರ ಇಡೀ ದೇಶವೇ ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ (Har Ghar Tiranga Campaign) ಭಾಗವಹಿಸಿದ್ದು, ಅನೇಕ ಕಡೆಗಳಲ್ಲಿ ದೇವಾಲಯಗಳು ವಿಶೇಷವಾಗಿ ಅಭಿಯಾನದಲ್ಲಿ ಪಾಲ್ಗೊಂಡಿವೆ. ಈ ಪೈಕಿ ಖಜುರಾಹೊದ ದೇವಾಲಯಗಳು ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿವೆ. ಖಜುರಾಹೊದ ಚಂದೇಲ್ ಕಾರ್ಪೆಟ್ ವಿಶ್ವನಾಥ ದೇವಸ್ಥಾನವನ್ನು ರಾತ್ರಿ ವೇಳೆ ಮೂರು ಬಣ್ಣಗಳ ದೀಪಗಳಿಂದ ಅಲಂಕರಿಸಲಾಗಿತ್ತು. ಧ್ವಜದ ಬಣ್ಣಗಳ ರೋಮಾಂಚಕ ಕಲಾಕೃತಿಯನ್ನು ನೋಡಿದ ಪ್ರವಾಸಿಗರು ಹರ್ಷ ವ್ಯಕ್ತಪಡಿಸಿದರು.

ಸ್ವಾತಂತ್ರ್ಯದ ಅಮೃತಮಹೋತ್ಸವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ ಇಡೀ ದೇಶವು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು. ಅಲ್ಲದೆ ಪ್ರಜೆಗಳು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ರಾಷ್ಟ್ರಧ್ವಜದ ಪ್ರೊಫೈಲ್ ಫೋಟೋಗಳನ್ನು ಹಾಕುವಂತೆಯೂ ಸಲಹೆ ನೀಡಿದ್ದಾರೆ.

ಪ್ರಧಾನಿ ಮೋದಿಯವರ ಮನವಿಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಕೋಟ್ಯಾಂತರ ಜನರು ತಮ್ಮ ಪ್ರೊಫೈಲ್​ನಲ್ಲಿ ತಿರಂಗದ ಫೋಟೋವನ್ನು ಹಾಕಿದ್ದಾರೆ. ಇನ್ನೂ ಕೆಲವರು ತ್ರಿವರ್ಣ ಧ್ವಜದೊಂದಿಗಿನ ತಮ್ಮ ಭಾವಚಿತ್ರವಿರುವ ಫೋಟೋವನ್ನು ಹಾಕಿಕೊಂಡು ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

ಸಾಮಾನ್ಯ ಜನರ ಜೊತೆಗೆ ದೇಶದ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ಕೂಡ ಈ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರ ಡಿಪಿಯಲ್ಲಿ ತ್ರಿವರ್ಣ ಧ್ವಜದ ಚಿತ್ರ ಹಾಕಲಾಗಿದೆ. ಇದೇ ವೇಳೆ ಪ್ರಧಾನಿ ಮೋದಿಯವರ ಈ ಅಭಿಯಾನಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡ ಹೊಸ ಅಭಿಯಾನ ಆರಂಭಿಸಿದೆ. ಕಾಂಗ್ರೆಸ್ ಪಕ್ಷವು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದಿರುವ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಚಿತ್ರವನ್ನು ಡಿಪಿಯಲ್ಲಿ ಹಾಕಲು ಪ್ರಾರಂಭಿಸಿದೆ.

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ