AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ ಗಂಡನ ಮನೆಗೆ ಕಾಲಿಟ್ಟ ಮರುದಿನವೇ ಚಿನ್ನಾಭರಣ, ಹಣ ದೋಚಿ ಪರಾರಿಯಾದ ನವವಿವಾಹಿತೆ

ಇನ್ನೇನು ತಾಳಿ ಕಟ್ಟಬೇಕು ಅಷ್ಟರಲ್ಲಿ ಮದುವೆಗಳು ರದ್ದಾಗಿರುವ ಪ್ರಕರಣಗಳ ಬಗ್ಗೆ ನೀವು ಆಗಾಗೆ ಸುದ್ದಿಗಳನ್ನು ಕೇಳಿರುತ್ತಿರಿ. ಆದರೆ ಮದುವೆಯಾಗಿ ಎರಡು ತಿಂಗಳ ಬಳಿಕ ಗಂಡನ ಮನೆ ಪ್ರವೇಶಿಸಿ ನವವಿವಾಹಿತೆಯೊಬ್ಬಳು, ರಾತ್ರಿ ಬೆಳಗಾಗುವಷ್ಟರಲ್ಲಿ ಗಂಡನ ಮನೆಯಲ್ಲಿದ್ದ ಎಲ್ಲಾ ಚಿನ್ನಾಭರಣ ಹಾಗೂ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದು, ಪತಿಯೂ ತಲೆಯ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಹಾಗಾದ್ರೆ ಏನಿದು ಈ ಪ್ರಕರಣ, ಈ ಘಟನೆ ಎನ್ನುವ ಕುರಿತಾದ ಮಾಹಿತಿ ಇಲ್ಲಿದೆ.

ಮದುವೆಯಾಗಿ ಗಂಡನ ಮನೆಗೆ ಕಾಲಿಟ್ಟ ಮರುದಿನವೇ ಚಿನ್ನಾಭರಣ, ಹಣ ದೋಚಿ ಪರಾರಿಯಾದ ನವವಿವಾಹಿತೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: May 19, 2025 | 2:17 PM

Share

ಹಾರ್ದೋಯ್, ಮೇ 19 : ಮದುವೆ ಮಂಟಪದಲ್ಲಿ ಮದುವೆ (marriage) ಗಳು ಮುರಿದು ಬಿದ್ದಿರುವ ಘಟನೆಗಳು, ಇಷ್ಟವಿಲ್ಲದ ಮದುವೆಗೆ ಒಪ್ಪಿ ಕೊನೆ ಕ್ಷಣದಲ್ಲಿ ಮದುವೆ ಮಂಟಪದಿಂದ ವಧು ಅಥವಾ ವರರು ಪರಾರಿಯಾಗಿರುವ ಘಟನೆಗಳ ಬಗ್ಗೆ ನೀವು ಕೇಳಿರುತ್ತೀರಿ. ಉತ್ತರ ಪ್ರದೇಶದ ಹಾರ್ದೋಯ್ (Hardoi of Uttar Pradesh) ನಲ್ಲಿ ಇಂತಹದೊಂದು ಘಟನೆ ನಡೆದಿದ್ದು, ಎರಡು ತಿಂಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವವಿವಾಹಿತೆಯನ್ನು ಗಂಡನ ಮನೆಗೆ ಕರೆತರಲಾಗಿದೆ. ಆದರೆ ರಾತ್ರಿ ಬೆಳಗಾಗುವಷ್ಟರಲ್ಲಿ ಪತ್ನಿಯೂ ಕಾಣೆಯಾಗಿದ್ದು, ಸಾವಿರಾರು ಕನಸು ಕಂಡಿದ್ದ ಪತಿಯೂ ಆಘಾತಕ್ಕೆ ಒಳಗಾಗಿದ್ದಾನೆ.

ಹೌದು, ರಾಮ್ ಪ್ರತಾಪ್ ಎನ್ನುವ ವ್ಯಕ್ತಿಯೂ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮಹಾರಾಜ್‌ಗಂಜ್‌ನ ಹಳ್ಳಿಯ ಯುವತಿಯ ಜೊತೆಯ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾನೆ. ಆದರೆ ಪತ್ನಿಯೂ ಗಂಡನ ಮನೆಗೆ ಮೇ 10 ರಂದು ಬಂದಿದ್ದು ಸಾವಿರಾರು ಕನಸು ಕಂಡಿದ್ದ ರಾಮ್ ಪ್ರತಾಪ್ ಗೆ ಆಘಾತವೊಂದು ಕಾದಿದೆ. ಹೌದು, ಮರುದಿನ ಅಂದರೆ ಮೇ 11 ರ ಬೆಳಿಗ್ಗೆ ತನ್ನ ಪತ್ನಿ ಎಲ್ಲಿಯೂ ಕಾಣಿಸಲಿಲ್ಲ. ಹೀಗಾಗಿ ರಾಮ್ ಪ್ರತಾಪ್ ಪತ್ನಿಯನ್ನು ಹುಡುಕಾಡಲು ಪ್ರಾರಂಭಿಸಿದ್ದಾನೆ.

ಇದನ್ನೂ ಓದಿ :ಗಾಯಗೊಂಡ ಶ್ವಾನಕ್ಕೆ ಚಿಕಿತ್ಸೆ ಕೊಡಿಸಲು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಕರೆದ್ಯೊಯ್ದ ಪುಟಾಣಿಗಳು, ವಿಡಿಯೋ ವೈರಲ್

ಇದನ್ನೂ ಓದಿ
Image
ಆನೆ ನೋಡೋಕೆ ಮಾತ್ರ ದೊಡ್ಡದು, ಇದ್ರ ಕಿವಿ ಎಷ್ಟು ಚಿಕ್ಕದಿದೆ ನೋಡಿ
Image
ಈ ಕಂಪನಿಯಲ್ಲಿ ಉಚಿತ ಶೌಚಾಲಯ, ಉಚಿತ ಲಿಫ್ಟ್, ನೈಟ್ ಸ್ನಾಕ್ಸ್
Image
ಖರ್ಚು ಮಾಡಿದ ದುಡ್ಡನ್ನೆಲ್ಲಾ ವಾಪಸ್ಸು ಕೊಡು ಎಂದ ಮಾಜಿ ಪ್ರಿಯಕರ
Image
ಪ್ಲೀಸ್ ನಾನು ನೀನು ಅಣ್ಣ ತಂಗಿಯಂತೆ ಇರೋಣ, ಮದುವೆ ಬೇಡ ಶಾಕ್ ಆದ ವರ

ಅಷ್ಟೇ ಅಲ್ಲದೇ ಮುಂದೆ ನಿಂತು ಮದುವೆ ಮಾಡಿಸಿದ್ದ ಮಲ್ಲವಾನ್ ಪೊಲೀಸ್ ಠಾಣೆಯಲ್ಲಿ ತನ್ನ ಮದುವೆಗೆ ಮಧ್ಯಸ್ಥಿಕೆ ವಹಿಸಿದ್ದ ಉಂಚಟಿಲಾದ ದಿನೇಶ್, ಬಾಘ್ರೈನ ಶ್ಯಾಮು ಮತ್ತು ಮಜ್ಹಿಯಾದ ಕುಲದೀಪ್ ಅವರಿಗೆ ತನ್ನ ಪತ್ನಿ ಕಾಣೆಯಾಗಿರುವುದನ್ನು ತಿಳಿಸಿದ್ದಾನೆ. ಆದರೆ ಮದುವೆ ಮಾಡಿಸಿಕೊಟ್ಟ ಈ ವ್ಯಕ್ತಿಗಳಿಂದ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಈ ಮೂವರಿಂದ ತನಗೇನೂ ಸಹಾಯವಾಗದು ಎಂದು ತಿಳಿದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ 13000 ರೂಪಾಯಿ ಕೂಡ ಕಾಣುತ್ತಿಲ್ಲ , ಹೆಂಡತಿಯೂ ಕಾಣುತ್ತಿಲ್ಲ ಎಂದು ಈ ಬಗ್ಗೆ ದೂರು ನೀಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!