Viral: ಅರೆಬರೆ ಬಟ್ಟೆ ತೊಟ್ಟು ರೀಲ್ಸ್​ ಮಾಡುತ್ತಿದ್ದ ಹೆಂಡತಿ; ಅವಮಾನ ತಾಳಲಾರದೇ ಆಕೆಗೆ ‘ಪಿಂಡದಾನ’ ಮಾಡಿದ ಗಂಡ!

ರೀಲ್ಸ್ ಹುಚ್ಚಿನಿಂದ ಸಂಸಾರದಲ್ಲಿ ಬಿರುಕು ಮೂಡಿದ ಹರಿದ್ವಾರದ ಆಘಾತಕಾರಿ ಘಟನೆ ಇದು. ಪತ್ನಿ ಹೇಮಾ ಚೌಧರಿ ಸೋಶಿಯಲ್ ಮೀಡಿಯಾ ರೀಲ್ಸ್‌ಗಳಿಗೆ ಅತಿಯಾಗಿ ಮಗ್ನಳಾಗಿ, ಅರೆಬರೆ ಬಟ್ಟೆ ಧರಿಸಿ ವಿಡಿಯೋ ಮಾಡುತ್ತಿದ್ದಳು. ಇದರಿಂದ ರೋಸಿಹೋದ ಪತಿ, ಆಕೆ ಜೀವಂತವಾಗಿದ್ದಾಗಲೇ ಹರಿದ್ವಾರದಲ್ಲಿ ಆಕೆಗೆ 'ಪಿಂಡದಾನ' ವಿಧಿ ನೆರವೇರಿಸಿದ್ದಾನೆ. ಈ ಮೂಲಕ ತನ್ನ ಪತ್ನಿ ತನಗೆ ಸತ್ತಂತೆ ಎಂದು ಸಂದೇಶ ರವಾನಿಸಿದ್ದಾನೆ. ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

Viral: ಅರೆಬರೆ ಬಟ್ಟೆ ತೊಟ್ಟು ರೀಲ್ಸ್​ ಮಾಡುತ್ತಿದ್ದ ಹೆಂಡತಿ; ಅವಮಾನ ತಾಳಲಾರದೇ ಆಕೆಗೆ ಪಿಂಡದಾನ ಮಾಡಿದ ಗಂಡ!
ಪತ್ನಿಯ ರೀಲ್ಸ್​​ ಹುಚ್ಚಿಗೆ ಆಕೆಗೆ 'ಪಿಂಡದಾನ' ಮಾಡಿದ ಗಂಡ
Image Credit source: instagram

Updated on: May 14, 2026 | 10:41 AM

ಹರಿದ್ವಾರ: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ರೀಲ್ಸ್ ಹುಚ್ಚು ಸಂಸಾರಗಳ ಮಧ್ಯೆ ಎಂತಹ ಬಿರುಕು ಮೂಡಿಸುತ್ತಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ತನ್ನ ಮಾತನ್ನು ಕೇಳದೆ ಸದಾ ಅರೆಬರೆ ಬಟ್ಟೆ ತೊಟ್ಟು ರೀಲ್ಸ್ ಮಾಡುವುದರಲ್ಲಿ ಮಗ್ನಳಾಗಿದ್ದ ಪತ್ನಿಯ ವರ್ತನೆಯಿಂದ ರೋಸಿಹೋದ ವ್ಯಕ್ತಿಯೊಬ್ಬ, ಆಕೆ ಬದುಕಿದ್ದಾಗಲೇ ಹರಿದ್ವಾರದಲ್ಲಿ ಆಕೆಗೆ ‘ಪಿಂಡದಾನ’ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ಏನಿದು ಘಟನೆ?

ವರದಿಗಳ ಪ್ರಕಾರ, ರೀಲ್ಸ್ ಸ್ಟಾರ್ ಆಗಿರುವ ಹೇಮಾ ಚೌಧರಿ(@hemachoudhary986) ಎಂಬುವವರ ಪತಿಯೇ ಈ ವಿಚಿತ್ರ ಸಾಹಸಕ್ಕೆ ಕೈಹಾಕಿದವರು. ಹೇಮಾ ಅವರು ಸದಾ ಕಾಲ ಸೋಶಿಯಲ್ ಮೀಡಿಯಾದಲ್ಲಿ ಕಂಟೆಂಟ್ ಕ್ರಿಯೇಟ್ ಮಾಡುವುದು ಮತ್ತು ರೀಲ್ಸ್ ಮಾಡುವುದರಲ್ಲಿ ಬ್ಯುಸಿಯಾಗಿರುತ್ತಿದ್ದಳು. ಈ ವಿಚಾರವಾಗಿ ದಂಪತಿಗಳ ನಡುವೆ ಸಾಕಷ್ಟು ಬಾರಿ ಜಗಳ ನಡೆದಿತ್ತು. “ರೀಲ್ಸ್ ಮಾಡುವುದನ್ನು ನಿಲ್ಲಿಸು, ಸಂಸಾರದ ಕಡೆ ಗಮನ ಕೊಡು” ಎಂಬ ಪತಿಯ ಮನವಿಗೆ ಹೇಮಾ ಕಿವಿಗೊಟ್ಟಿರಲಿಲ್ಲ ಎನ್ನಲಾಗಿದೆ.

ಪಿಂಡದಾನ ಮಾಡುವ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನಮ್ಮ ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್​; ‘ಟಾಪ್ 10’ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಸ್ಥಾನ!

ಬದುಕಿರುವಾಗಲೇ ಪತ್ನಿಗೆ ಅಂತ್ಯಸಂಸ್ಕಾರದ ವಿಧಿವಿಧಾನ:

ಅರೆಬರೆ ಬಟ್ಟೆತೊಟ್ಟು ರೀಲ್ಸ್​​ ಮಾಡುತ್ತಿದ್ದ ಪತ್ನಿಯಿಂದ ಅಸಮಾಧಾನಗೊಂಡ ಪತಿ ಆಯ್ದುಕೊಂಡ ದಾರಿ ಹರಿದ್ವಾರ. ಅಲ್ಲಿಗೆ ತೆರಳಿದ ಆತ, ಸಾಮಾನ್ಯವಾಗಿ ಸತ್ತವರಿಗೆ ಮಾಡುವ ‘ಪಿಂಡದಾನ’ ವಿಧಿವಿಧಾನವನ್ನು ತನ್ನ ಪತ್ನಿಯ ಹೆಸರಿನಲ್ಲಿ ನೆರವೇರಿಸಿದ್ದಾರೆ. ವಿಶೇಷವೆಂದರೆ, ಪತ್ನಿ ರೀಲ್ಸ್ ಮಾಡುವುದನ್ನು ವಿರೋಧಿಸುತ್ತಿದ್ದ ಪತಿ, ತಾನು ಮಾಡಿದ ಈ ಪಿಂಡದಾನದ ಇಡೀ ಪ್ರಕ್ರಿಯೆಯನ್ನು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ. “ನನ್ನ ಪತ್ನಿ ಈಗ ನನಗೆ ಸತ್ತಂತೆ” ಎಂಬ ಸಂದೇಶವನ್ನು ರವಾನಿಸಲು ಆತ ಈ ರೀತಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us