AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಕ್​ ಫ್ರಂ ಹೋಂ ಮತ್ತು ವರ್ಕ್​ ಫ್ರಂ ಆಫೀಸ್​; ಪೈ ಚಾರ್ಟ್​ ಹಂಚಿಕೊಂಡ ಹರ್ಷ ಗೋಯೆಂಕಾ

WFH : ಉದ್ಯೋಗಿಯು ಕಚೇರಿಯಿಂದ ಕೆಲಸ ಮಾಡಿದಾಗ ಮತ್ತು ವರ್ಕ್​ ಫ್ರಂ ಹೋಂ ಮಾಡಿದಾಗ ಸಮಯದ ಹೂಡಿಕೆಯಲ್ಲಿ ಉಂಟಾಗುವ ವ್ಯತ್ಯಾಸವನ್ನು ಈ ಪೈ ಚಾರ್ಟ್​ಗಳು ಸೂಚಿಸುತ್ತವೆ.

ವರ್ಕ್​ ಫ್ರಂ ಹೋಂ ಮತ್ತು ವರ್ಕ್​ ಫ್ರಂ ಆಫೀಸ್​; ಪೈ ಚಾರ್ಟ್​ ಹಂಚಿಕೊಂಡ ಹರ್ಷ ಗೋಯೆಂಕಾ
ಉದ್ಯಮಿ ಹರ್ಷ ಗೋಯೆಂಕಾ
ಶ್ರೀದೇವಿ ಕಳಸದ
|

Updated on:Sep 30, 2022 | 4:34 PM

Share

Trending : ಕೊವಿಡ್​ನಿಂದ ಅಸ್ತವ್ಯಸ್ತಗೊಂಡಿದ್ದ ಜನಜೀವನ ನಿಧಾನ ಸಮಸ್ಥಿತಿಗೆ ಹೊರಳುತ್ತಿದೆ. ವರ್ಕ್​ ಫ್ರಂ ಹೋಂ ಮಾಡುತ್ತಿದ್ದ ಜನರು ಕಚೇರಿಗಳಿಗೆ ತೆರಳಿ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಕಾರ್ಗತ್ತಲೆ ಕಳೆದು ಹಳೆಯ ದಿನಚರಿಗೆ ಬರುತ್ತಿದ್ದೇವೆ ಎಂದು ನಿಟ್ಟುಸಿರು ಬಿಡುತ್ತಿದ್ದಾರೆ. ಆದರೂ ಕೆಲ ಕಂಪೆನಿಗಳು ವರ್ಕ್​​ ಫ್ರಂ ಹೋಮ್​ಗೆ ಅವಕಾಶ ಕಲ್ಪಿಸಿದೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡ ಉದ್ಯಮಿ ಹರ್ಷ್ ಗೋಯೆಂಕಾ, ಉದ್ಯಮಿ ಹರ್ಷ ಗೋಯೆಂಕಾ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ವಿಷಯಕ್ಕೆ ಸಂಬಂಧಿಸಿ ಎರಡು ಪೈ ಚಾರ್ಟ್​ ಅನ್ನು ಹಂಚಿಕೊಂಡಿದ್ದು, ನೆಟ್ಟಿಗರು ಈ ವಿಷಯವಾಗಿ ಈ ಚುರುಕಿನಿಂದ ಚರ್ಚೆಯಲ್ಲಿ ತೊಡಗಿಕೊಂಡಿದ್ದಾರೆ. ಉದ್ಯೋಗಿಗಳು ಕಚೇರಿಯಲ್ಲಿ ಕೆಲಸ ಮಾಡುವುದು ಉತ್ತಮ ಎನ್ನುವುದು ಈ ಕಾರಣಕ್ಕೆ ಎಂದು ಮೊದಲ ಚಾರ್ಟ್​ ಹಂಚಿಕೊಂಡಿದ್ದಾರೆ.

ವರ್ಕ್​ ಫ್ರಂ ಹೋಮ್ ಮಾಡುವ ಉದ್ಯೋಗಿ ಮತ್ತು ಕಚೇರಿಗೆ ಹೋಗಿ ಕೆಲಸ ಮಾಡುವ ಉದ್ಯೋಗಿಯ ಮಧ್ಯೆ ಸಮಯಯ ಹೂಡಿಕೆಯಲ್ಲಿ ಉಂಟಾಗುವ ವ್ಯತ್ಯಾಸದ ಕುರಿತಾಗಿ ಈ ಪೈ ಚಾಟ್​ ನಿರೂಪಿಸಲ್ಪಟ್ಟಿದೆ. ​

ಮೊದಲ ಚಾರ್ಟ್‌ನಲ್ಲಿ ಕೆಲಸಕ್ಕೆ ಆದ್ಯತೆ ನೀಡಲಾಗಿದೆ. ಎರಡನೇ ಚಾರ್ಟ್‌ನಲ್ಲಿ ಪ್ರಯಾಣ ಮತ್ತು ಚಾಟಿಂಗ್‌ನಂತಹ ಇತರೇ ವಿಷಯಗಳು ಹೇಗೆ ಅನುತ್ಪಾದಕತೆಯನ್ನು ಸೂಚಿಸುತ್ತವೆ ಎನ್ನುವುದನ್ನು ತೋರಿಸಲಾಗಿದೆ.

ಈ ಪೋಸ್ಟ್​ ಅನ್ನು 4,4,000 ಜನರು ಇಷ್ಟಪಟ್ಟಿದ್ದಾರೆ. ಕೆಲವರು ಗೋಯೆಂಕಾ ಅವರ ಅಭಿಪ್ರಾಯವನ್ನು ಬೆಂಬಲಿಸಿದರೆ, ಅನೇಕರು ವರ್ಕ್​ ಫ್ರಂ ಹೋಮ್​ ಸೂಕ್ತವಲ್ಲ ಎಂದಿದ್ದಾರೆ. ವರ್ಕ್​ ಫ್ರಂ ಹೋಂ ಮಾಡುವಾಗ ಮನೆಗೆಲಸಗಳು ಸಮಯವನ್ನು ನುಂಗುತ್ತವೆ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

ಇನ್ನೂ ಒಬ್ಬರು, ‘ಕಚೇರಿಯ ಓಡಾಟದ ಸಮಯ ತಪ್ಪುವುದರಿಂದ ನಾನು ಯೋಗ, ಧ್ಯಾನ, ಕ್ರಿಕೆಟ್​, ಓದು, ವಾಕಿಂಗ್​ನಂಥ ಚಟುವಟಿಕೆಗೆ ತೊಡಗಿಕೊಳ್ಳುತ್ತೇನೆ’ ಎಂದಿದ್ದಾರೆ.

ನಿಮಗೇನು ಅನ್ನಿಸುತ್ತೆ ಈ ವಿಷಯವಾಗಿ?

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:32 pm, Fri, 30 September 22

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ