Viral: ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಭರ್ಜರಿ ಹಣ ಸಂಪಾದಿಸಿ; ಜಾಹೀರಾತು ವೈರಲ್

ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಲಕ್ಷ ಲಕ್ಷ ಹಣ ಸಂಪಾದಿಸಿ ಎಂದು ಜಾಬ್‌ ಆಫರ್‌ ನೀಡಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ವಿವಾದಾತ್ಮಕ ಜಾಹಿರಾತು ನೀಡಿ ಜನರಿಂದ ಹಣ ಪೀಕುತ್ತಿದ್ದ ಇಬ್ಬರು ಆರೋಪಿಗಳನ್ನು ‌ ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ವೈರಲ್‌ ಆಗುತ್ತಿದೆ.

Viral: ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಭರ್ಜರಿ ಹಣ ಸಂಪಾದಿಸಿ; ಜಾಹೀರಾತು ವೈರಲ್
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 08, 2024 | 5:26 PM

ಆಧುನಿಕ ತಂತ್ರಜ್ಞಾನ ಬೆಳೆದಂತೆ ಮೋಸ, ವಂಚನೆಗಳ ಪ್ರಕರಣಗಳೂ ಹೆಚ್ಚಾಗುತ್ತಿದೆ. ಒಂದೆಡೆ ಮೊಬೈಲ್‌ ನಂಬರ್‌, ಬ್ಯಾಂಕ್‌ ಖಾತೆ ನಂಬರ್‌ಗಳಿಂದ ಹಲವು ರೀತಿಯಲ್ಲಿ ಹಣವನ್ನು ಖದೀಮರು ದೋಚಿದರೆ, ಇನ್ನೊಂದೆಡೆ ಸೋಷಿಯಲ್‌ ಮೀಡಿಯಾದಲ್ಲಿ ಮನೆಯಲ್ಲಿಯೇ ಕುಳಿತು ದಿನಕ್ಕೆ ಐದರಿಂದ ಹತ್ತು ಸಾವಿರ ರೂಪಾಯಿ ಗಳಿಸಬಹುದು ಎಂಬ ಫೇಕ್‌ ಜಾಬ್‌ ಆಫರ್‌ಗಳನ್ನು ನೀಡುವ ಮೂಲಕ ಜನರಿಗೆ ವಂಚನೆ ಮಾಡುತ್ತಿರುತ್ತಾರೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು ವಂಚಕರಿಬ್ಬರು ಸಾಮಾಜಿಕ ಜಾಲತಾಣದಲ್ಲಿ “ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಲಕ್ಷಗಟ್ಟಲೆ ಹಣ ಸಂಪಾದಿಸಿ” ಎಂಬ ನಕಲಿ ಜಾಹಿರಾತುಗಳನ್ನು ನೀಡಿ ಜನರಿಂದ ಹಣ ದೋಚುವ ಕೆಲಸಕ್ಕೆ ಇಳಿದಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ಆಘಾತಕಾರಿ ಘಟನೆ ಹರಿಯಾಣದ ಸುಹ್‌ ಜಿಲ್ಲೆಯಲ್ಲಿ ನಡೆದಿದ್ದು, ವಂಚಕರಿಬ್ಬರು ಆನ್‌ಲೈನ್‌ನಲ್ಲಿ “ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ, ಭರ್ಜರಿ ಹಣ ಸಂಪಾದಿಸಿ” ಎಂಬ ಜನರ ದಿಕ್ಕು ತಪ್ಪಿಸುವಂತ ಜಾಹೀರಾತುಗಳನ್ನು ಪೋಸ್ಟ್‌ ಮಾಡಿ, ಜನರಿಂದ ಹಣ ದೋಚುವಂತಹ ಕೆಲಸಕ್ಕೆ ಇಳಿದಿದ್ದರು. ವಂಚಕರು ನಕಲಿ ಜಾಹಿರಾತುಗಳನ್ನು ಪೋಸ್ಟ್‌ ಮಾಡುತ್ತಿದ್ದರು. ಮತ್ತು ಜನರನ್ನು ಬಲೆಗೆ ಬೀಳಿಸಿ ಮಹಿಳೆಯರ ನಕಲಿ ಫೋಟೋಗಳನ್ನು ಸೆಂಡ್‌ ಮಾಡಿ ನಂತರ ನೋಂದಣಿ ಮತ್ತು ಫೈಲಿಂಗ್‌ ಶುಲ್ಕವನ್ನು ವಿಧಿಸಿ ಮೂಲಕ ಹಣ ದೋಚುತ್ತಿದ್ದರು.

ಇದನ್ನೂ ಓದಿ: ಹಾಯ್‌ ಫ್ರೆಂಡ್ಸ್‌ ಇವತ್ತು ನಮ್ಮ ಫಸ್ಟ್‌ ನೈಟ್‌, ಮೊದಲ ರಾತ್ರಿಯ ವಿಡಿಯೋ ಹಂಚಿಕೊಂಡ ನವ ಜೋಡಿ

ಈ ವಿಚಾರ ಪೊಲೀಸರ ಗಮನಕ್ಕೆ ಬಂದಿದ್ದು, ಈ ವಿವಾದಾತ್ಮಕ ಜಾಹಿರಾತನ್ನು ಕಂಡು ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. ನಂತರ ಸೂಕ್ತ ತನಿಖೆ ನಡೆಸಿದ್ದು, ತನಿಖೆಯ ವೇಳೆ ನಾಲ್ಕು ನಕಲಿ ಫೇಸ್‌ಬುಕ್‌ ಖಾತೆಗಳು ಮತ್ತು ಜಾಹಿರಾತುಗಳು ಪತ್ತೆಯಾಗಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಐದು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳಾದ ಎಜಾಜ್‌ ಮತ್ತು ಇರ್ಷಾದ್‌ ನನ್ನು ಬಂಧಿಸಲಾಗಿದೆ. ಬಳಿಕ ಶನಿವಾರ (ಜುಲೈ 7) ಆರೋಪಿಗಳನ್ನು ನುಹ್‌ನಲ್ಲಿರುವ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು